UV Fusion: ಮಾತಿನ ಅರ್ಥ ಒಳಾರ್ಥಗಳು..!


Team Udayavani, Sep 17, 2024, 9:08 PM IST

23-uv-fusion

ನಮ್ಮ ಬದುಕಿನ ಸ್ವಾರಸ್ಯ ಅಡಗಿರುವುದೇ ಅರ್ಥವಾಗುವುದರಲ್ಲಿ ಎಂದರೆ ತಪ್ಪಿಲ್ಲ. ಸರಿಯಾಗಿ ಅರ್ಥವಾಗದ ಪರಿಣಾಮವೇ ನಮ್ಮ ಜೀವನ ಏರಿಳಿತ ಕಾಣುವುದು ಎನ್ನುವುದರಲ್ಲಿ ಅನುಮಾನವಿಲ್ಲ. ಸರಿಯಾಗಿ ಅರ್ಥವಾಗಿದ್ದರೆ ಹೀಗಾಗುತ್ತಿತ್ತಾ..? ಎಂದು ಹೇಳುವ ನಾವು ಪ್ರತಿ ಪದಕ್ಕೂ, ಪ್ರತಿ ವಾಕ್ಯಕ್ಕೂ, ಪ್ರತಿ ಮಾತಿಗೂ, ಪ್ರತಿ ವಿಷಯಕ್ಕೂ, ಅರ್ಥ ಹುಡುಕುವುದಕ್ಕೆ ಹೋಗುತ್ತೇವೆ. ಅದೇಕೆ ಹೀಗಾಯ್ತು, ಇದೇಕೆ ಹಾಗಾಯ್ತು, ಇವನೇಕೆ ಹೀಗೆ, ಅವಳೇಕೆ ಹಾಗೆ, ನನ್ನ ಮಾತೇಕೆ ಇಷ್ಟು ಕಠಿಣ, ಅವಳ ವರ್ತನೆ ಏಕೆ ಇಷ್ಟು ನಿಷ್ಟುರ..? ಎಂದು ಪ್ರತಿಯೊಂದರಲ್ಲೂ, ಪ್ರತಿಯೊಬ್ಬರಲ್ಲೂ ಅರ್ಥ ಹುಡುಕುವುದರಲ್ಲಿ ಹೋಗುತ್ತೇವೆ.

ಬೇರೊಬ್ಬರ ಮಾತು ಅರ್ಥವಾಗದಿದ್ದರೂ ಪರವಾಗಿಲ್ಲ ಆದರೆ ಅಪಾರ್ಥ ಮಾಡಿಕೊಳ್ಳುವ ಅಭ್ಯಾಸದಿಂದ ದೂರವಿದ್ದರೆ ಲೇಸು. ಕೆಲವು ಜನರು ಅದೇಕೋ ಹಾಗೇ..! ಒಂದು ಹೇಳಿದರೆ ಮತ್ತೂಂದು ರೀತಿಯಲ್ಲಿ ಅರ್ಥ ಮಾಡಿಕೊಳ್ಳುತ್ತಾರೆ. ಈಸಿ ಗೋಯಿಂಗ್‌ ಪ್ರವೃತ್ತಿ ಅವರದಲ್ಲ. ಅವರು ಎಲ್ಲವನ್ನು ಕ್ಲಿಷ್ಟಕರವಾಗಿಯೇ, ಕಷ್ಟಕರವಾಗಿಯೇ, ತಮ್ಮ ಬುದ್ಧಿ ಮತ್ತು ತಂತ್ರಜ್ಞಾನದ ಅನುಭವ, ತಾಂತ್ರಿಕ ಕೌಶಲವನ್ನು ಬೆರಕೆ ಮಾಡಿ ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಾರೆ..!

ಅನಂತರ ತಪ್ಪು ತಪ್ಪಾಗಿ ಅರ್ಥ ಮಾಡಿಕೊಂಡು ನಮ್ಮ ಜತೆಗೆ ಮಾತು ಬಿಡುತ್ತಾರೆ. ರೋಬೋಟ್‌ ಸಿರಿಯ ಅವತಾರವೆಂಬಂತೆ ಇಂಥವರಿಗೆ ಎಲ್ಲವನ್ನು ಚಿಕ್ಕ ಮಕ್ಕಳಿಗೆ ಹೇಳಿಕೊಡುವಂತೆಯೇ ಹೇಳಬೇಕು. ಹೇಳಲಿಲ್ಲವೆಂದರೆ ತಮ್ಮ ಮೂಗಿನ ನೇರಕ್ಕೆ ನಾವಾಡಿದ ಮಾತುಗಳನ್ನು ಅರ್ಥ ಮಾಡಿಕೊಂಡು ಅವರ ನೆಮ್ಮದಿ ಮಾತ್ರವಲ್ಲ; ನಮ್ಮ ನೆಮ್ಮದಿಯನ್ನು ಹಾಳು ಮಾಡುತ್ತಾರೆ..!

ಇಂತಹ ಕೆಲವು ಜನ ನಮ್ಮ ಸುತ್ತಮುತ್ತಲೂ ಇರುತ್ತಾರೆ. ಒಂದು ಪದಕ್ಕೆ ಒಂದೇ ಅರ್ಥ ಕೊಡುವುದಿಲ್ಲ ಅವರು..! ಎಲ್ಲವನ್ನು ಕೆದಕಿ ಒಳಾರ್ಥ ಕಂಡುಹಿಡಿಯಲು ಪ್ರಯತ್ನಿಸುತ್ತಾರೆ. ಹಾಗೆ ಪ್ರಯತ್ನಿಸುತ್ತಾ ತಲೆಕೆಡಿಸಿಕೊಳ್ಳುತ್ತಾರೆ. ತಲೆಕೆಡಿಸಿಕೊಂಡು ತಮ್ಮ ಅಮೂಲ್ಯವಾದ ದಿನವನ್ನು ಹಾಳುಗೆಡುವುತ್ತಾರೆ. ಇಂಥವರೊಂದಿಗೆ ವ್ಯವಹರಿಸಬೇಕಾದರೆ ಜಾಗರೂಕರಾಗಿರುವುದು ಒಳಿತು. ಇಲ್ಲದಿದ್ದರೆ ನಮ್ಮ ದಿನವೂ ಅವರು ತೆಗೆದ ಜಗಳದಿಂದ ಹಾಳಾಗುವುದು ಖಚಿತ..!

ನಾವು ಮಾತನಾಡುವ ಭಾಷೆಯಿಂದಲೂ, ಪದ ಪ್ರಯೋಗದಿಂದಲೂ, ಅಪಾರ್ಥಗಳಾಗುವುದು ಹೆಚ್ಚು. ಕೆಲವೊಮ್ಮೆ ಇಂತಹ ಅಪಾರ್ಥಗಳಿಂದ ಜಗಳವಾದರೆ, ಇನ್ನೂ ಕೆಲವೊಮ್ಮೆ ಜನರನ್ನು ನಗೆಗಡಲಿನಲ್ಲಿ ತೇಲಿಸುತ್ತದೆ. ಅದೇಕೋ ಗೊತ್ತಿಲ್ಲ, ಕೆಲವರಿಗೆ ಅಲ್ಪಪ್ರಾಣ ಮಹಾಪ್ರಾಣದ ಅಕ್ಷರಗಳನ್ನು ಪ್ರಯೋಗಿಸುವುದರಲ್ಲಿ ಸೋಂಬೇರಿತನ ಎನಿಸುತ್ತದೆ. ಅಥವಾ ಮಹಾಪ್ರಾಣದ ಪದಗಳನ್ನು ಉತ್ಛರಿಸಲು ಸುಸ್ತಾಗುತ್ತದೆಯೋ ಗೊತ್ತಿಲ್ಲ..! ಇನ್ನೂ ಕೆಲವರು ಬೇಡದ ಕಡೆ ಮಹಾಪ್ರಾಣ ಉಪಯೋಗಿಸಿ ತಮಗೆ ತಾವೇ ಕಷ್ಟ ತಂದುಕೊಳ್ಳುತ್ತಾರೆ..!

ಅಕ್ಕಿಗೆ ಹಕ್ಕಿ ಎಂದು, ಹಕ್ಕಿಗೆ ಅಕ್ಕಿ ಎಂದು, ಇಂಗ್ಲಿಷ್‌ನ ಏರ್‌ ಹೇರ್‌ ಆಗಿ, ಹೇರ್‌ ಏರ್‌ ಆಗಿ, ತರಹೇವಾರಿ ವಿಚಿತ್ರ ಪ್ರಯೋಗಗಳನ್ನು ಮಾಡುತ್ತಾರೆ. ಹಕ್ಕಿಯು ಹಾರಿ ಬಂದು ಅಕ್ಕಿಯನ್ನು ಹೆಕ್ಕಿ ಹೆಕ್ಕಿ ತಿಂದಿತು ಎಂಬುದನ್ನು ಅಕ್ಕಿಯು ಆರಿ ಬಂದು ಹಕ್ಕಿಯನ್ನು ಎಕ್ಕಿ ಎಕ್ಕಿ ತಿಂದಿತು ಎಂದು ತಮ್ಮದೇ ರೀತಿಯಲ್ಲಿ ಹೇಳಿ ಎದುರಿನವರನ್ನು ಕಕ್ಕಾಬಿಕ್ಕಿ ಮಾಡುತ್ತಾರೆ..!

ಏಳಿ ಮತ್ತು ಹೇಳಿ ಪದಕ್ಕೂ ತದ್ವಿರುದ್ಧವಾಗಿ ಉತ್ಛರಿಸುತ್ತಾರೆ. ನಿರೂಪಕಿಯೊಬ್ಬಳು ಎದುರಿನವರಿಗೆ ಪರವಾಗಿಲ್ಲ ಹೇಳಿ ಎನ್ನುವ ಬದಲು ಪರ್ವಾಗಿಲ್ಲ ಏಳಿ ಎನ್ನುತ್ತಾಳೆ ಅಂದುಕೊಳ್ಳಿ. ಎದುರಿನ ವ್ಯಕ್ತಿ ಓಹೋ ಏಳಬೇಕು ಎನಿಸುತ್ತದೆ. ಸಂದರ್ಶನದ ಕಾಲಾವಧಿ ಮುಗಿಯಿತೇನೋ ಎಂದು ಏಳಲು ಹೊರಟರೆ, ಮತ್ತೆ ಆ ನಿರೂಪಕಿ ಪರವಾಗಿಲ್ಲ ಸರ್‌, ಕೂತ್ಕೊಂಡೇ ಏಳಿ ಎಂದರೆ ಆ ವ್ಯಕ್ತಿಯ ಫ‌ಜೀತಿ ಏನಾಗಿರಬಹುದು ಎಂದು ನೀವೇ ಯೋಚಿಸಿ..!

ನಮ್ಮ ಕರುನಾಡ ಮಾತೃಭಾಷೆ ಕನ್ನಡವಾದರೂ, ಒಂದೊಂದು ಭಾಗದಲ್ಲೂ ಒಂದೊಂದು ರೀತಿಯ ಕನ್ನಡ ಚಾಲ್ತಿಯಲ್ಲಿದೆ. ಮಂಗಳೂರಿನವರು ಮಗು ಕೂಗುತ್ತಿದೆ ಎಂದಾಗ, ಈ ಕಡೆಯ ಜನರು ಓಹೋ ಮಗು ಏಕೆ ಕೂಗುತ್ತಿದೆ..? ಎಂದುಕೊಳ್ಳುತ್ತಾರೆ. ಆದರೆ ಅಲ್ಲಿಯ ಜನಕ್ಕೆ ಕೂಗುವುದು ಎಂದರೆ ಅಳುವುದು. ಇಲ್ಲಿಯ ಜನಕ್ಕೆ ಕೂಗುವುದು ಎಂದರೆ ಜೋರಾಗಿ ಕಿರುಚುವುದು ಎಂದರ್ಥ.

ಇನ್ನೂ ಒಂದೇ ವಸ್ತುವಿಗೆ ಹಲವಾರು ರೀತಿಯಲ್ಲಿ ಹೆಸರುಗಳಿರುತ್ತವೆ. ನನಗೆ ನಲ್ಲಿ ಎಂದರೆ ಇಂಗ್ಲಿಷ್‌ನಲ್ಲಿ ಟ್ಯಾಪ್‌ ಎಂದು ಗೊತ್ತಿತ್ತು ಅಷ್ಟೇ. ಆದರೆ ಅದಕ್ಕೆ ಇನ್ನೊಂದು ವಿಭಿನ್ನವಾದ ಹೆಸರು ಇದೆ ಎಂದು ಗೊತ್ತಾದದ್ದು ನನ್ನ ಮದುವೆಯ ನಂತರವಷ್ಟೇ..! ಮೊದಮೊದಲು ಕೊಳಾಯಿ ತಿರುಗಿಸಿದಾ..? ಎಂದು ಕೇಳಿದಾಗ, ನಾನು ಆಶ್ಚರ್ಯಚಕಿತಳಾಗಿ ಕೊಳವನ್ನು ಏಕೆ ತಿರುಗಿಸಬೇಕು, ನಲ್ಲಿ ಇರುವಾಗ ಕೊಳದಿಂದ ನೀರನ್ನು ಏಕೆ ತರಬೇಕು..? ಎಂದು ಗೊಂದಲಗೊಳ್ಳುತ್ತಿದ್ದೆ. ಅನಂತರ ಗೊತ್ತಾಯಿತು ನಲ್ಲಿಗೆ ಕೊಳಾಯಿ ಎಂದು ಕರೆಯುತ್ತಾರೆ ಅಂತ. ಮುದ್ದೆ ಊಟ ಮಾಡುವಾಗ ತಟ್ಟೆಯ ಕೆಳಗೆ ಇರುವ ಚಿಕ್ಕ ಮರದ ತುಂಡಿಗೆ ಒತ್ತು ಎನ್ನುತ್ತಾರೆ ಎಂದು ಗೊತ್ತಿರಲಿಲ್ಲ. ಮೊದಲ ಬಾರಿಗೆ ಈ ಪದವನ್ನು ಕೇಳಿದಾಗ, ಅದು ಒತ್ತಾ ಮುತ್ತಾ ಎಂದು ಗೊತ್ತಾಗುತ್ತಿರಲಿಲ್ಲ. ಕೊನೆಗೆ ಅದರ ಪದ ಬಳಕೆ ಗೊತ್ತಾಯ್ತು.  ಈ ರೀತಿ ಮನೆ ವಿಳಾಸ ಹೇಳುವಾಗ ಪ್ರಯೋಗಿಸುವ ಹಂಗಾಸು ಹಿಂಗಾಸು ಎಂಬ ಪದವನ್ನು ಮೊದಲಿಗೆ ಕೇಳಿದಾಗ ನಕ್ಕುಬಿಟ್ಟಿದ್ದೆ.

ಯಾವ ಹಾಸು, ಅದೇನನ್ನು ಹಾಸಬೇಕು ಎಂದು ತಿಳಿಯದೆ ಕನ್‌ಫ್ಯೂಸ್‌ ಆಗಿದ್ದೆ..! ಆಮೇಲೆ ಗೊತ್ತಾಯಿತು ವಿಳಾಸ ಹೇಳುವಾಗ ಆ ಕಡೆ, ಈ ಕಡೆ ಎಂದು ಹೇಳಲು ಹೀಗೆ ಹೇಳುತ್ತಾರೆ ಎಂದು..!  ಈ ರೀತಿಯ ಭಾಷೆಯ ವೈಖರಿ, ಪದ ಪ್ರಯೋಗ, ಆಡು ಮಾತುಗಳು, ಪದಗಳ ಉಚ್ಛಾರಣೆ ಕೆಲವು ಸಲ ನಮ್ಮನ್ನು ಅಪಾರ್ಥಕ್ಕೆ ಈಡು ಮಾಡಿ ನಗೆಗಡಲಲ್ಲಿ ತೇಲಿಸಬಹುದು, ಇಲ್ಲವೇ ಸಂಕಟಕ್ಕೆ ಈಡು ಮಾಡಲೂಬಹುದು.

ಮಾತಿನ ಗಮ್ಮತ್ತೇ ಅದು..! ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎಂಬಂತೆ ಮಾತು ನಮ್ಮನ್ನು ಸಂಕಷ್ಟಕ್ಕೆ ಈಡು ಮಾಡಬಹುದು. ಇತ್ತೀಚಿನ ದಿನಗಳಲ್ಲಿ ಮಾತು ಹಲವು ಜನರಿಗೆ ಬಂಡವಾಳವಾಗಿಬಿಟ್ಟಿದೆ. ಮಾತು ಈಗಿನ ದಿನಗಳಲ್ಲಿ ಮಾತೆಯ (ಅಮ್ಮನ) ಸ್ಥಾನ ಪಡೆದುಬಿಟ್ಟಿದೆ ಎಂದರೆ ಅತಿಶಯೋಕ್ತಿಯ ಮಾತೇನಲ್ಲ..?! ಮಾತು ಬೆಳ್ಳಿ, ಮೌನ ಬಂಗಾರ ಎಂಬ ಮಾತಿಗೆ ಅನುಗುಣವಾಗಿ ಎಷ್ಟು ಬೇಕೋ ಅಷ್ಟು ಮಾತಾಡುತ್ತಾ, ಎದುರಿನವರ ಮಾತುಗಳನ್ನು ಕೇಳಿ ಗೌರವಿಸುವ ಗುಣವನ್ನು ಕಲಿತುಕೊಂಡರೆ ಅಂಥವರ ಮಾತಿಗೆ ಸಿಗುವ ಬೆಲೆಯೇ ಬೇರೆ ಅಲ್ಲವೇ..!

-ಅಚಲ ಬಿ. ಹೆನ್ಲಿ

ಬೆಂಗಳೂರು

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.