UV Fusion: ರೈಲುಗಾಡಿ ಸಂಖ್ಯೆ 16630


Team Udayavani, Nov 8, 2023, 7:45 AM IST

11-uv-fusion

ನೇಸರ ಬೆಳ್ಳಿ ಪರದೆಯಿಂದ ಮೆಲ್ಲಮೆಲ್ಲನೆ ಜಾರುವ ಸಮಯ ಅದಾಗಲೇ ಶುರುವಾಗಿಬಿಟ್ಟಿತ್ತು.  ಚಿಲಿಪಿಲಿ ಗಾನದ ನಡುವೆ ವೇಗವಾಗಿ ಮನೆಮುಟ್ಟುವ  ಭರದಲ್ಲಿದ್ದವು  ಹಕ್ಕಿಗಳು. ಆಗಸವು ನೇಸರನಿಗೆ ವಿದಾಯ ಹೇಳಲು ತವಕಿಸುತ್ತಿತ್ತು. ಮಧುರ ಮಾರುತದ ತಣ್ಣನೆ ಬೀಸುವ ತಂಗಾಳಿಯ ಆಲಿಂಗನಕ್ಕೆ  ಮನವಾದರೂ ಜಾರದೇ ಇರದು. ಇಂತಹ ಸಮಯದಲ್ಲಿ ರೈಲು ಅಥವಾ ಬಸ್‌ ವಿಂಡೋ ಸೀಟ್ನಲ್ಲಿ ಕೂತು ಗವಾಕ್ಷಿಯಿಂದ ಹೊರನೋಟ  ಬೀರಿದಾಗ ಕಣ್ಸೆಳೆಯುವ ಪ್ರಕೃತಿಯ ರಂಗೇರಿಸುವ ದೃಶ್ಯದ ಸೌಂದರ್ಯಕ್ಕೆ ಸಾಟಿಯಿಲ್ಲ.

ನನಗೂ ಮುಸ್ಸಂಜೆಯ ಪಯಣವೆಂದರೆ ಎಲ್ಲಿಲ್ಲದ ಖುಷಿ. ಕಣ್ಣಿಗೆ ಹಬ್ಬದ ವಾತಾವರಣವನ್ನು ಕಟ್ಟಿ ಕೊಡುವ ಬೇಸಗೆಯ ಮುಸ್ಸಂಜೆ ಸಮಯಕ್ಕೆ ಪುಳಕಿತನಾಗದೆ ಇರೆನು. ಕರಾವಳಿಯ ಕಾಲೇಜಿನಿಂದ ಮಲಬಾರ್‌ ಭಾಗಕ್ಕೆ ದಿನನಿತ್ಯದ ಓಡಾಟದಲ್ಲಿ ರೈಲು ಗಾಡಿಯು ನನಗೆ ಸಾಥ್‌ ಕೊಡುತ್ತಿತ್ತು. ಯಾವಾಗಲೂ ಮುಸ್ಸಂಜೆ ಪಯಣದ ಸವಿಯನ್ನು ನೆನೆಯುವ ಮನ ಪ್ರಕೃತಿಯನ್ನು ನೋಡದೇ ಇರದು. ಗೆಳೆಯರೊಂದಿಗೆ ಸಂವಾದ- ಸಂಧಾನ ಮಾಡಿಕೊಂಡು ವಿಂಡೋ ಸೀಟಿಗಾಗಿ ಕಾಡಿ ಬೇಡಿ ಪಡೆಯುತ್ತಿದ್ದಾರೆ.

ತಣ್ಣನೆ ಬೀಸುವ ಗಾಳಿಯು ಉಸಿರನ್ನು ಸೇರಿದಾಗ ದಮನಿಯು ತಂಪಾಗುತ್ತಿತ್ತು. ಅಕ್ಕಪಕ್ಕದಲ್ಲಿ ಕಾಣುವ ಹಸುರ ಗಿಡ ಮರ ಬಳ್ಳಿಗಳು ಹಸಿರೇ ಉಸಿರೆಂಬ ತತ್ವವ ಸಾರುವಂತಿದ್ದವು. ಇನ್ನು ನೇತ್ರಾವತಿಯ ಸೊಬಗನ್ನು ಕಣ್ತುಂಬಿಕೊಳ್ಳುವ ಸುಯೋಗವು ರೈಲ್ವೇ ಪಯಣಿಗನದ್ದು. ಉಳಿದ ನದಿಯಂತೆ ಅಲ್ಲದ ಈಕೆಗೆ ಉದ್ದವಾದ ಸೇತುವೆ. ಸೇತುವೆಯಿಂದಲೇ ಕರಾವಳಿಯಲ್ಲಿ ಜನಪ್ರಿಯ. ಆ ಸೇತುವೆಯ ಹಳಿಯ ಮೇಲೆ ರೈಲು ಗಾಡಿಯು ಮೆಲುವಾಗಿ ಹೋಗುವಾಗ ರೈಲು ಗಾಡಿಯ ಇಂಜಿನ್‌ ಸದ್ದು, ಬಂಡಿಯ ಹಾರ್ನ್ ಸದ್ದು ನೇತ್ರಾವತಿಯ ಅಂದವ  ಬಾಯ್ತುಂಬ ಹೊಗಳುವಂತಿತ್ತು.

ರೈಲು ಗಾಡಿ ಸಂಖ್ಯೆ 16629 ಮಂಗಳೂರು ಸೆಂಟ್ರಲ್‌ ಬಿಟ್ಟ ಕೂಡಲೇ ಸುಂದರ ರಮಣೀಯ ಪ್ರಕೃತಿಯ ಸೊಬಗನ್ನು ಕಣ್ತುಂಬುವ ಗಳಿಗೆಗೆ ಮುನ್ನುಡಿ ಬರೆಯುತ್ತದೆ. ದೂರದಲ್ಲಿ ಕಾಣುವ ಸಾಗರ, ಹರಿಯುವ ಜುಳು ಜುಳು ನದಿ ಎಲ್ಲವೂ ಎಷ್ಟೊಂದು ಚಂದ. ರೈಲುಗಾಡಿಯ ವೇಗ ಹೆಚ್ಚಾದಂತೆ ಕತ್ತಲೆಯೂ ಮೆಲ್ಲಮೆಲ್ಲನೆ ಮನೆ ಮಾಡುತ್ತಿತ್ತು. ಮೂಡಣದಲ್ಲಿ ಮೂಡಿದ ರವಿ ಬಾನಾಚೆ ಜಾರುವ ಮುನ್ನ ಕಣ್ಣಂಚಿನಲ್ಲಿ ಕವಲೊಡೆದ ಆಕರ್ಷಣೆಗೆ  ಸಾಕ್ಷಿ ಈ ಮುಸ್ಸಂಜೆ ಪಯಣ. ಉದಯನು ಅರೆ ಗಳಿಗೆ ಇದ್ದರೆ ಇನ್ನೂ ಸೊಬಗನ್ನು ಉಣಪಡಿಸುತ್ತಿದ್ದನೇನೋ ಅಲ್ಲವೇ!? ಆತ ಮರೆಯಾಗಿಯೇ ಬಿಟ್ಟ.

-ಗಿರೀಶ್‌ ಪಿ.ಎಂ.

ವಿ.ವಿ., ಮಂಗಳೂರು

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.