Tulasi Kalyana: ತುಳಸಿ ಕಲ್ಯಾಣಂ


Team Udayavani, Dec 5, 2023, 8:00 AM IST

12-uv-fusion

ಪುರಾತನ ಕಾಲದಿಂದಲೂ ತುಳಸಿ ತನ್ನದೇ ಆದ ಮಹತ್ವವನ್ನು ಪಡೆದುಕೊಂಡಿದೆ. ಆಯುರ್ವೇದದಲ್ಲಿ ಔಷಧವಾಗಿ ಬಳಕೆಯಾಗುವ ಈ ಗಿಡವನ್ನು ಹಿಂದೂಗಳು ದೇವರ ಸ್ವರೂಪವಾಗಿ ಆರಾಧಿಸುತ್ತಾರೆ. ಈ ರೀತಿಯಲ್ಲಿ ಬಹು ಉಪಯೋಗಿಯಾದ ತುಳಸಿಯಲ್ಲೂ ವಿವಿಧ ಪ್ರಬೇಧಗಳಿವೆ.

ಶ್ಯಾಮ ತುಳಸಿ – ಇದರ ಎಲೆಗಳು ನೇರಳೆ ಬಣ್ಣದಲ್ಲಿರುವುದರಿಂದ ಇದನ್ನು ಶ್ಯಾಮ ತುಳಸಿ ಎಂದು ಕರೆಯುವರು. ಇದು ಶ್ರೀ ಕೃಷ್ಣನಿಗೆ ಪ್ರಿಯಕರವಾಗಿರುವುದರಿಂದ ಇದನ್ನು ಕೃಷ್ಣ ತುಳಸಿ ಎಂದೂ ಕರೆಯಲಾಗುತ್ತದೆ.

ರಾಮ ತುಳಸಿ – ಇದರ ಎಳೆಗಳು ಹಸಿರು ಬಣ್ಣವಿರುತ್ತದೆ. ಇದು ರಾಮನಿಗೆ ಹತ್ತಿರವಾದದು.

ಶ್ವೇತ ತುಳಸಿ – ಇದರ ಎಳೆಗಳು ಬಿಳಿ ಬಣ್ಣದಲ್ಲಿರುತ್ತದೆ. ಇದನ್ನು ವಿಷ್ಣು ತುಳಸಿ ಎಂದು ಕರೆಯಲಾಗುತ್ತದೆ.

ತುಳಸಿ ಗಿಡವು ಹಲವು ವಿಶೇಷ ಗುಣಗಳನ್ನು ಹೊಂದಿದೆ. ಪ್ರತೀ ಮನೆಯಲ್ಲೂ ತುಳಸಿ ಗಿಡ ಇದ್ದೆ ಇರುತ್ತದೆ. ಇದು ಹಲವಾರು ರೋಗಗಳನ್ನು ನಿವಾರಣೆ ಮಾಡುವ ಔಷಧೀಯ ಗುಣಗಳನ್ನು ಹೊಂದಿದೆ. ತುಳಸಿ ಎಲೆಗಳಿಂದ ಮಾಡಿದ ಕಷಾಯ ತಲೆನೋವು, ಶೀತ, ಜ್ವರ, ಕಫ, ಹೊಟ್ಟೆ ನೋವು, ಅಲರ್ಜಿ ನಿವಾರಣೆಗೆ ರಾಮ ಬಾಣ ಎಂದೇ ಹೇಳಬಹುದು.

ಹಿಂದೂ ಧರ್ಮದಲ್ಲಿ ದೀಪಾವಳಿ ಬಳಿಕ ಬರುವ ಹಬ್ಬವೇ ತುಳಸಿ ಪೂಜೆ. ಕಾರ್ತಿಕ ಮಾಸದ ಶುಕ್ಲಪಕ್ಷದ ಹನ್ನೆರಡನೇ ದಿನದ ದ್ವಾದಶಿಯಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬವನ್ನು ಉತ್ಥಾನ ದ್ವಾದಶಿ ಎಂದೂ ಕರೆಯಲಾಗುತ್ತದೆ.

ತುಳಸಿ ವಿವಾಹಕ್ಕೆ ಪೌರಾಣಿಕ ಕಥೆಯಿದೆ. ವೃಂದಾ ಎಂಬ ಯುವತಿಯು ಜಲಂಧರನೆಂಬ ದುಷ್ಟ ರಾಜನನ್ನು ಮದುವೆಯಾಗುತ್ತಾಳೆ. ಆಕೆಗೆ ವಿಷ್ಣುವಿನ ಮೇಲೆ ಅಪಾರ ಪ್ರೀತಿ ಹಾಗೂ ಭಕ್ತಿ ಇತ್ತು. ಆದರೆ ಇದು ಜಲಂಧರನಿಗೆ ಇಷ್ಟವಿರುವುದಿಲ್ಲ. ಒಮ್ಮೆ ವಿಷ್ಣುವು ಜಲಂಧರ ರೂಪ ತಾಳಿ ವೃಂದಾಳನ್ನು ಮೋಹಿಸುತ್ತಾನೆ. ಅನಂತರ ಶಿವನು ಆಕೆಯ ಗಂಡನನ್ನು ಸಂಹರಿಸುತ್ತಾನೆ. ಅನಂತರ ಆಕೆ ವಿಷ್ಣುವಿಗೆ ಶಾಪವನ್ನು ನೀಡಿ ಚಿತೆಗೆ ಹಾರಿ ಸಾಯುತ್ತಾಳೆ. ಅನಂತರ ವಿಷ್ಣು ಆಕೆಯ ಆತ್ಮವನ್ನು ತುಳಸಿ ಗಿಡವಾಗಿ ಪರಿವರ್ತಿಸಿ ತುಳಸಿಯನ್ನು ವಿವಾಹವಾಗುತ್ತಾನೆ ಎಂಬ ಕಥೆಯಿದೆ.

ತುಳಸಿ ಪೂಜೆಯ ಸಂದರ್ಭ ತುಳಸಿ ಕಟ್ಟೆಯನ್ನು ರಂಗೋಲಿ, ಹೂವುಗಳಿಂದ ಅಲಂಕರಿಸುತ್ತಾರೆ. ತುಳಸಿ ಗಿಡದೊಂದಿಗೆ ಬೆಟ್ಟದ ನೆಲ್ಲಿಕಾಯಿ ಗಿಡ, ಹುಣಸೆ ಗಿಡ ಇಟ್ಟು ತುಳಸಿ ಕಟ್ಟೆಯ ಸುತ್ತಲೂ ದೀಪದ ಹಣತೆಗಳನ್ನು ಹಚ್ಚಲಾಗುತ್ತದೆ. ಅಕ್ಕ- ಪಕ್ಕದ ಮನೆಯವರೆಲ್ಲರೂ ಪೂಜೆಯಲ್ಲಿ ಸೇರುತ್ತಾರೆ. “ಪೂಜಿಪೇ ಶ್ರೀ ತುಳಸೀ ನರಹರಿ ಅರಸೀ’ ಹೀಗೆ ತುಳಸಿಗೆ ಸಂಬಂಧಪಟ್ಟ ಹಾಡುಗಳನ್ನು ಮನೆ ಹೆಂಗಸರು ಹಾಡುತ್ತಾ ಸಂತೋಷ ಪಡುತ್ತಾರೆ. ಹೀಗೆ ತುಳಸಿ ವಿವಾಹವು ಸರಳತೆಯಿಂದ ಕೂಡಿ ಎಲ್ಲರನ್ನೂ ಆಕರ್ಷಿಸುತ್ತದೆ.

ಕಾವ್ಯಾ ರಮೇಶ್‌ ಹೆಗಡೆ

ಎಂ.ಎಂ.,ಮಹಾವಿದ್ಯಾಲಯ ಶಿರಸಿ

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

UV Fusion: ಮೃಗಗಳ ಜಗತ್ತು

14-uv-fusion

Women: ಕ್ಷಮಯಾ ಧರಿತ್ರಿ

13-constitution

Constitution: ವಿಶ್ವಕ್ಕೆ ಮಾದರಿ ನಮ್ಮ ಸಂವಿಧಾನ

9-uv-fusion

UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ

8-uv-fusion-1

UV Fusion: ಭೂತ ಭವಿಷ್ಯ ಬಿಟ್ಟು ಈ ಕ್ಷಣ ಜೀವಿಸಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

3(1)

Kundapura: ಹುಲಿ ವೇಷಧಾರಿಗಳಿಗೆ ಕೆಂಪು ಬಟ್ಟೆ ಕಡ್ಡಾಯ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.