UV Fusion: ಕನಸಿನ ಬೆನ್ನು ಹತ್ತಿ


Team Udayavani, Oct 23, 2024, 5:53 PM IST

11-uv-fusion

ಅನೇಕರು ತಾವು ಹಾಗಾಗಬೇಕು, ಹೀಗಾಗಬೇಕು ಎಂಬ ಹಲವು ಕನಸುಗಳನ್ನು ಹೊತ್ತುಕೊಂಡು ಜೀವನದ ಹಾದಿಯಲ್ಲಿ ಓಡುತ್ತಿರುತ್ತಾರೆ. ಇನ್ನು ಕೆಲವರು ತಮ್ಮ ಸಣ್ಣ ಪುಟ್ಟ ಆಸೆಗಳನ್ನು ಈಡೇರಿಸಿಕೊಳ್ಳಲಾಗದೇ ಪಾಲಿಗೆ ಬಂದದ್ದು ಪಂಚಾಮೃತ ಎಂದು ಸುಮ್ಮನಿದ್ದು ಬಿಡುತ್ತಾರೆ. ಇವುಗಳ ನಡುವೆ ತನ್ನದು ಮಾತ್ರ ನೆರವೇರದ ಕನಸು, ತಾನು ದುರಾದೃಷ್ಟವಂತ, ತನ್ನಿಂದ ಏನೂ ಸಾಧ್ಯವಿಲ್ಲ ಎಂಬ ಆಲೋಚನೆಗಳಿಂದ ತಮ್ಮೆಲ್ಲಾ ಕನಸುಗಳನ್ನು ಬದಿಗಿಟ್ಟುಬಿಡುವವರೂ ಇದ್ದಾರೆ.

ಇನ್ನು ಕೆಲವರು ತಮ್ಮ ಕನಸು ಈಡೇರುವ ಅವಕಾಶವಿದ್ದರೂ ಅದನ್ನು ಸದುಪಯೋಗ ಪಡಿಸಿಕೊಳ್ಳುವುದಿಲ್ಲ. ಭಾರತದ ಮಹಾನ್‌ ವಿಜ್ಞಾನಿ ಎ. ಪಿ. ಜೆ. ಅಬ್ದುಲ್‌ ಕಲಾಂ ಅವರು ಕನಸು ಕಾಣಿರಿ ಎಂಬ ಮಾತನ್ನು ಹೇಳುತ್ತಾರೆ. ಅದರರ್ಥ ನಾವು ಕಾಣುವ ಕನಸು ಸಾಧನೆಯ ಕನಸುಗಳಾಗಿರಬೇಕು. ಅವು ಆಲೋಚನೆಗಳಾಗಿ ರೂಪಾಂತರಗೊಂಡು ಬಳಿಕ ಕ್ರಿಯೆಗೆ ಕಾರಣವಾಗುತ್ತವೆ ಎಂದು.

ಮನುಷ್ಯನಿಂದ ಆಗದ ಕೆಲಸ ಯಾವುದು ಇಲ್ಲ ಎಂಬ ಮಾತನ್ನು ಕೇಳಿದ್ದೇವೆ. ಆದರೆ ಅದು ಮನುಷ್ಯನಲ್ಲಿರುವ ಛಲ, ಹಠದಿಂದ ಮಾತ್ರ ಸಾಧ್ಯ. ಪ್ರತಿಯೊಬ್ಬರೂ ತಾವು ಕಾಣುವ ಕನಸನ್ನು ಹೇಗೆ ನನಸಾಗಿಸಬಹುದು ಎಂಬ ಪ್ರಶ್ನೆಯನ್ನು ಹಾಕಿಕೊಳ್ಳುವುದರ ಮೂಲಕ ಕನಸನ್ನು ನನಸಾಗಿಸುವ ದಾರಿಯನ್ನು ಕಂಡುಕೊಳ್ಳಬೇಕು. ಎಲ್ಲದ್ದಕ್ಕಿಂತ ಮುಖ್ಯವಾಗಿ ನಾವು ನಕಾರಾತ್ಮಕ ಚಿಂತನೆಗಳ ಕಡೆಗೆ ವಾಲದೆ, ಎಲ್ಲ ವಿಚಾರಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸುವುದನ್ನು ಮೊದಲಿಗೆ ರೂಢಿಸಿಕೊಳ್ಳಬೇಕು.

ಇದಕ್ಕೆ ಅದ್ಭುತ ಉದಾಹರಣೆಯೆಂದರೆ ಅಂಗವಿಕಲರು, ವಿಕಲಚೇತನರು. ಇವರಲ್ಲಿ ಅದೆಷ್ಟೋ ಜನರು ಸಾಧನೆ ಮಾಡಿದಂತಹ ಅನೇಕ ಉದಾಹರಣೆಗಳನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಇನ್ನು ಎಲ್ಲ ಸರಿ ಇರುವ ನಾವುಗಳು ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೂ ಅನೇಕ ಉದಾಹರಣೆಗಳಿವೆ. ಇವನ್ನು ನಾವು ಸ್ಪೂರ್ತಿದಾಯಕರನ್ನಾಗಿ ತೆಗೆದುಕೊಳ್ಳಬೇಕು. ಪ್ರಯತ್ನಕ್ಕೆ ತಕ್ಕ ಪ್ರತಿಫ‌ಲ ಎಂಬ ಮಾತಿನಂತೆ ಸಾಧಕರ ಸಾಧನೆಯ ಹಾದಿಯನ್ನು ನೆನಪಿಸಿಕೊಂಡು ನಾವು ಕೂಡ ಪ್ರಯತ್ನಶೀಲರಾಗಿ ಧೈರ್ಯದಿಂದ ಮುನ್ನುಗೋಣ.

– ಮೇಘಾ ಡಿ. ಕಿರಿಮಂಜೇಶ್ವರ

ಬೆಂಗಳೂರು ವಿವಿ

ಟಾಪ್ ನ್ಯೂಸ್

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

15

Amaran trailer: ಮೇಜರ್‌ ಮುಕುಂದ್‌ ಸಾಹಸಗಾಥೆಗೆ ಜೀವ ತುಂಬಿದ ಶಿವಕಾರ್ತಿಕೇಯನ್

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

Babusapaly2

Collapse: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕ ಬಂಧನ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-uv-fusion

The Sound of Music: ದಿ ಸೌಂಡ್‌ ಆಫ್ ಮ್ಯೂಸಿಕ್‌

5

UV Fusion: ಹೊಸ ಕನಸಿಗೆ ಮೊದಲ ಹೆಜ್ಜೆ

4

UV Fusion: ಕಣ್ಮರೆಯಾಗುತ್ತಿರುವ ಪರಂಪರಾನುಗತ ವೃತ್ತಿಗಳು

3-uv-fusion

UV Fusion: ಅಮ್ಮನ ಬೀಡಿಸೂಪಿನೆಡೆಯಿಂದ…

11-uv-fusion

Life: ಬಯಸಿದಂತೆಲ್ಲಾ ಇರುವುದಿಲ್ಲ ಬದುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

17

Sandalwood: ಸಂಗೀತಮಯ ದೂರ ತೀರಯಾನ

16

Shweta Srivastav: ಸಿನಿಜರ್ನಿಗೆ ಪುಸ್ತಕ ರೂಪ ಕೊಟ್ಟ ನಟಿ

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

15

Amaran trailer: ಮೇಜರ್‌ ಮುಕುಂದ್‌ ಸಾಹಸಗಾಥೆಗೆ ಜೀವ ತುಂಬಿದ ಶಿವಕಾರ್ತಿಕೇಯನ್

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.