Mother: ಜೀವನ ಪಾಠ ಕಲಿಸಿದ ನನ್ನವ್ವ


Team Udayavani, May 29, 2024, 12:44 PM IST

6-uv-fusion

ಖ್ಯಾತ ತತ್ವಶಾಸ್ತ್ರಜ್ಞ ಹೆನ್ರಿ ವಾರ್ಡ್‌ ಬೀಚರ್‌ ಅವರು “ಆ ದೇವರು ಕಣ್ಣಿಗೆ ಕಾಣಿಸಲ್ಲ. ಈ ಜಗತ್ತಿನಲ್ಲಿ ನಮ್ಮ ತಂದೆ-ತಾಯಿಯರೇ ನಿಜವಾದ ಮತ್ತು ಕಣ್ಣಿಗೆ ಕಾಣಸಿಗುವ ದೈವಶಕ್ತಿಯ ಪ್ರತಿರೂಪ. ಅದಕ್ಕಾಗಿ ಪ್ರತಿಯೊಬ್ಬರು ಜನ್ಮ ನೀಡಿದ ತಂದೆ ತಾಯಿಯನ್ನು ಪ್ರೀತಿಸಿ, ಗೌರವಿಸಿದರೆ ನಾವು ನೈಜದೇವರನ್ನು ಒಲಿಸಿಕೊಂಡಂತೆಯೇ ಸರಿ’ ಎಂದು ಹೇಳಿದ್ದಾರೆ.

ಮಕ್ಕಳು ಬೇಕೆಂದು ನೂರೊಂದು ದೇವರಿಗೆ ಹರಕೆ ಹೊತ್ತು, ಹೆತ್ತು ತನ್ನೆಲ್ಲ ಆಶೋತ್ತರಗಳನ್ನು ನಮಗಾಗಿಯೇ ತ್ಯಾಗ ಮಾಡಿ ಕುಟುಂಬದ ಸದಸ್ಯರ ಒಳಿತಿಗಾಗಿ ಜೀವನವನ್ನೇ ಮುಡಿಪಾಗಿಟ್ಟಿರುವ ತ್ಯಾಗಜೀವಿ ನನ್ನವ್ವ. ತಾನು ಅಶಿಕ್ಷಿತಳಾಗಿದ್ದರೂ ನಮ್ಮ ಬದುಕಿಗೊಂದು ಶಿಕ್ಷಣ ಆಸರೆಯಾಗಿ ಸ್ವಾವಲಂಭಿಗಳಾಗಬೇಕೆಂಬ ಹೆಬ್ಬಯಕೆ ಆಕೆಯದು.

ಹೊತ್ತು, ಹೆತ್ತು, ಪಾಲನೆ-ಪೋಷಣೆ, ಕಲಿಸಿ-ಬೆಳೆಸಿ, ತಿದ್ದಿ-ತೀಡಿ, ಜೀವನ-ಬದುಕಿನ ಕಲೆ-ನೆಲೆಯನ್ನು ತಿಳಿಸಿಕೊಟ್ಟು ನಮ್ಮಲ್ಲಿ ಜೀವನ-ಮೌಲ್ಯ, ಆದರ್ಶ, ನೈತಿಕತೆ, ಸದ್ಗುಣ, ಸದ್ವಿಚಾರ, ಸನ್ನಡತೆ, ಸಂಸ್ಕೃತಿ-ಸಂಸ್ಕಾರ ಮತ್ತು ಮಾನವೀಯ ಮೌಲ್ಯ ಮತ್ತು ಸತ್ಕಾರ್ಯಗಳನ್ನು ಒಡಮೂಡಿಸಿದ ಶ್ರೇಷ್ಠ ಗುರುವೆಂದರೆ ತಾಯಿ. ಅದಕ್ಕಂತಲೇ “ಮನೆಯೇ ಮಂತ್ರಾಲಯ, ತಾಯಿಯೇ ಮೊದಲ ಗುರು’ ಎಂದು ನಂಬಿರುವ ಸಮಾಜ ನಮ್ಮದು.

ಅಮ್ಮ ಎಂಬ ಎರಡಕ್ಷರದಿ ಅಡಗಿದೆ ಜಗದ ಉಸಿರು. ಆಕೆ ಕೇವಲ ಮನೆ ಬೆಳಗುವ ಜ್ಯೋತಿಯಲ್ಲ, ಜಗವ ಬೆಳಗುವ ದಿವ್ಯಜ್ಯೋತಿ ಎಂದರೆ ಅತಿಶಯೋಕ್ತಿಯಾಗದು. ಕೇವಲ ತಾಯಿಯಾಗದೇ, ಮಮತೆಯ ಮಡಿಲು, ಕುಟುಂಬ ನಿರ್ವಹಣೆಯ ಜವಾಬ್ದಾರಿ ಹೊತ್ತ ಮಡದಿಯಾಗಿ, ಮನೆ-ಕುಟುಂಬದ ಎಲ್ಲ ಸದಸ್ಯರಿಗಾಗಿ ಸದಾ ದುಡಿಯುವಳು ಆಕೆ.

ಹೆಣ್ಣು ಮಗುವಿನ ಜನನವಾದರೆ ಕೆಲವರು ಹೆಣ್ಣು ಮನೆಗೆ ಹುಣ್ಣು ಎಂದು ಹೇಳುವವರಿದ್ದಾರೆ. ಆದರೆ ನನ್ನವ್ವ ಎರಡನೆಯವಳಾಗಿ ಹುಟ್ಟಿದ ನನ್ನಕ್ಕಳಿಗೆ ತೋರುತ್ತಿರುವ ಮಮತೆ-ವಾತ್ಸಲ್ಯ ಅಷ್ಟಿಷ್ಟಲ್ಲ. ನಮ್ಮ ಮನೆಗೆ ಭಾಗ್ಯ ಲಕ್ಷ್ಮೀ ಹುಟ್ಟಿ ಬಂದಳೆಂದು ಸಂತೋಷ ನೂರ್ಮಡಿಯಾಗಿತ್ತು. ಅದರಲ್ಲೂ ನನ್ನಕ್ಕಳಿಗೆ ಮದುವೆಯಾದ ಅನಂತರ ಹುಟ್ಟಿದ ಮೊದಲ ಮಗು ಕೂಡ “ಹೆಣ್ಣು’ ಎಂಬ ಯಾವುದೇ ಬೇಸರ ವ್ಯಕ್ತಪಡಿಸಲಿಲ್ಲ. ಎಷ್ಟೇ ಕಷ್ಟದಲ್ಲಿದ್ದರೂ ಸದಾ ನಗುಮುಖವ ತೊಡಿಸಿಕೊಂಡಿದ್ದವಳು. ಬಾಲ್ಯದಿಂದಲೂ ನನ್ನ ಪ್ರತಿಯೊಂದು ಹೆಜ್ಜೆಯಲ್ಲೂ ಧೈರ್ಯ ತುಂಬಿ, ಉದಾತ್ತವಾದ ಗುರಿಯನ್ನಿಟ್ಟುಕೊಳ್ಳುವಂತೆ ಪ್ರೇರೇಪಿಸುತ್ತಿದ್ದಳು ನನ್ನ ಹಡೆದವ್ವ.

ನಾನು ದ್ವೀತಿಯ ಪಿ.ಯು.ಸಿ. ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಪಾಸಾದಾಗ ಆಕೆಗಾದ ಸಂತಸಕ್ಕೆ ಪಾರವೇ ಇರಲಿಲ್ಲ. ರಾತ್ರಿ ಅಭ್ಯಾಸ ಮಾಡುತ್ತಿರುವ ಸಂದರ್ಭದಲ್ಲಿ ಬಿಸಿ ಚಹಾ ಮಾಡಿ ಕುಡಿಸಿದ ನೆನಪುಗಳು ಈಗಲೂ ನನ್ನ ಕಣ್ಮುಂದೆ ಬಂದು ಹೋಗುತ್ತವೆ. ನನ್ನ ಮಗ ಉಪನ್ಯಾಸಕನಾಗಬೇಕೆಂಬ ಮಹತ್ವಾಕಾಂಕ್ಷೆ ಹೊಂದಿದ್ದಳು ನನ್ನ ತಾಯಿ. ಜೀವನದಲ್ಲಿ ಕಷ್ಟಗಳನ್ನು ಅನುಭವಿಸಿದರೆ ಮುಂದೊಂದು ದಿನ ಒಳ್ಳೆಯ ದಿನ ಬಂದೇ ಬರುತ್ತದೆ.

ಕೆಳಗೆ ಬಿದ್ದೊರಿಗೆ ಮಾತ್ರ ಮೇಲೆಳುವುದು ಗೊತ್ತಾಗುತ್ತದೆ ಎಂದು ಆತ್ಮಸ್ಥೆçರ್ಯ ತುಂಬುತ್ತಿದ್ದಳು ಆಕೆ. 1998ರಲ್ಲಿ ನನ್ನೂರಿನ ಮತ್ತು ನಾ ಕಲಿತ ಕಾಲೇಜಿನಲ್ಲಿಯೇ ಉಪನ್ಯಾಸಕ ವೃತ್ತಿ ಪ್ರಾರಂಭಿಸಿದೆ. ಮುಂದೆ 2009ರಲ್ಲಿ ಸರಕಾರಿ ಕಾಲೇಜಿನಲ್ಲಿ ಪ್ರಾಧ್ಯಾಪಕನಾಗಿ ನೇಮಕಗೊಂಡಾಗ ಇಡೀ ಊರ ತುಂಬೆಲ್ಲ ಸಿಹಿ ಹಂಚಿ ಸಂಭ್ರಮಿಸಿದ್ದಳು.

ವೃತ್ತಿಯನ್ನು ಶ್ರದ್ಧೆ, ನಿಷ್ಠೆ, ಪ್ರಾಮಾಣಿಕತೆಯಿಂದ ಮತ್ತು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಮಕ್ಕಳು ನಿನ್ನ ಮಕ್ಕಳಂತೆ ಕಾಣಬೇಕು. ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿ ಸದಾ ವೃತ್ತಿ ಗೌರವ ಮತ್ತು ಸಾಮಾಜಿಕ ಬದ್ಧತೆಯ ಗುಣಗಳನ್ನು ಕಲಿಸಿದಾಕೆ ನನ್ನವ್ವ.

ನನ್ನ ಮಗ ಕೇವಲ ಶಿಕ್ಷಕನಾಗದೇ ವಿದ್ಯಾರ್ಥಿಗಳ ಭವಿಷ್ಯ ರೂಪಕನಾಗಬೇಕೆಂಬ ಕನಸು ಕಂಡವಳು. ಆಕೆ ಇಂದು ನಮ್ಮ ಜತೆ ಭೌತಿಕವಾಗಿ ಇಲ್ಲವೆಂದರೂ ಆಕೆಯ ಭವಿಷ್ಯತ್ತಿನ ಸ್ಪೂರ್ತಿದಾಯಕ ಕಿವಿಮಾತು, ಸಲಹೆ ಮತ್ತು ತೋರಿದ ಬದುಕಿನ ದಾರಿ ನಮಗೆಲ್ಲ ದಾರಿದೀಪವಾಗಿದೆ. ಇಂದು ಆಕೆಯ ನೆನಪು ಬಂದಾಗ ನನ್ನ ಕಣ್ಣಂಚಿನಲ್ಲಿ ಭಾಷ್ಪಗಳು ನನಗೆ ಗೊತ್ತಿರದ ಹಾಗೆ ಉದುರುತ್ತವೆ.

ಅದಕ್ಕಂತಲೇ ಹಿರಿಯರು ಹೇಳುತ್ತಾರೆ ಜನರ ಕಷ್ಟ-ಕಾರ್ಪಣ್ಯಗಳನ್ನು ನಿವಾರಿಸಲು ಹಾಗೂ ಎಲ್ಲ ಸಂಕಷ್ಟಗಳಿಂದ ಜನರನ್ನು ಕಾಯಲು ದೇವರಿಗೆ ಆಗದೆಂದು ತಾಯಿ ಎಂಬ ಸ್ವರೂಪದ ದೇವತೆಯನ್ನು ಸೃಷ್ಟಿಸಿದ್ದಾನೆ. ಆದ್ದರಿಂದ ಅಮ್ಮ ಎಂಬ ಪರಮದೈವ ನಮ್ಮ ಜತೆಗಿದ್ದರೆ ಸಮಸ್ಯೆಗಳು ಹತ್ತಿರವೇ ಸುಳಿಯುವುದಿಲ್ಲ.

ಒಂದು ವೇಳೆ ಬಂದರೂ ಅವೆಲ್ಲವುಗಳಿಗೆ ತಾಯಿಯೆಂಬ ಅಗಣಿತ ಶಕ್ತಿದೇವತೆ ಹೊಡೆದೋಡಿಸುವಳು. ತಾಯಿಯಾದವಳು ಪ್ರತಿಯೊಂದು ಮನೆಯಲ್ಲಿ ಸಂಸ್ಕೃತಿ-ಸಂಸ್ಕಾರ, ಮನೆಯ ಪದ್ಧತಿ, ಸಂಪ್ರದಾಯ, ಆಚರಣೆ ಮತ್ತು ಸಾಮಾಜಿಕ-ಧಾರ್ಮಿಕ ವಿಧಿವಿಧಾನಗಳನ್ನು ಪರಿಚಯಿಸಲು ಹಾಗೂ ಉಳಿಸಿ-ಬೆಳೆಸಲು ಸರ್ವರಿಗೂ ಆದರ್ಶಪ್ರಾಯಳು.

ನನ್ನ ಮೊದಲ ಆದರ್ಶ ಮೂರ್ತಿ, ಸ್ಪೂರ್ತಿ ಮತ್ತು ಬದುಕು ರೂಪಿಸಿದ ಸಾಕಾರಮೂರ್ತಿ ಎಂದರೆ ನನ್ನವ್ವ. ಅದಕ್ಕಾಗಿ ಪ್ರತಿಯೊಬ್ಬರೂ ದೈವ ಸ್ವರೂಪರಾದ ತಂದೆ-ತಾಯಿಯರನ್ನು ಪ್ರೀತಿ, ಆದರ, ಗೌರವದೊಂದಿಗೆ ಕಾಣುತ್ತಾ ಸಂಸ್ಕಾರದ ಪ್ರತಿಬಿಂಬವಾಗಿರುವ ಅವರನ್ನು ಭಾವ-ಭಕ್ತಿಯಿಂದ ಪೂಜಿಸಬೇಕು ಎನ್ನುವುದೇ ನನ್ನ ಆಶಯ.

-ಮಲ್ಲಪ್ಪ ಸಿ. ಖೊದ್ನಾಪೂರ

ತಿಕೋಟಾ

ಟಾಪ್ ನ್ಯೂಸ್

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ

Koderi

World Tourism Day: ಪ್ರವಾಸೋದ್ಯಮಕ್ಕೆ ಸಿಗಲಿ ಉತ್ತೇಜನ

16-cinema

UV Fusion: Cinema- ದಿ ರೆಡ್ ಬಲೂನ್, ಅಮೋರ್

15-uv-fusion

UV Fusion: ಬ್ಯಾಗ್‌ ಹಿಡಿದವರಿಗೊಂದು ಥ್ಯಾಂಕ್ಸ್‌

14-tourism

Netravati Trek: ದಿ ನೆಕ್ಸ್ಟ್ ಸ್ಟಾಪ್‌ ಈಸ್‌ ನೇತ್ರಾವತಿ ಪೀಕ್‌!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.