UV Fusion: ತುಳುನಾಡಿನ ಹೆಮ್ಮೆ ಕಂಬಳ


Team Udayavani, Jul 27, 2024, 3:56 PM IST

8-uv-fusion

ತುಳುನಾಡಿನ ಜನಪ್ರಿಯ ಕ್ರೀಡೆಗಳಲ್ಲಿ ಕಂಬಳ ಅತೀ ಪುರಾತನವಾದುದು. ಅಗಾಧ ಇತಿಹಾಸವನ್ನು ಹೊಂದಿರುವ ಕಂಬಳವು ಕಾಲಕ್ಕೆ ತಕ್ಕಂತೆ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಬದಲಾವಣೆ ಹೊಂದುತ್ತಿದ್ದರೂ ಇವತ್ತಿಗೂ ಕೂಡ ಅದೇ ಹಿಂದಿನ ಸೊಗಡನ್ನು ಕಾಪಾಡಿಕೊಂಡು ಬಂದಿದೆ. ಕಂಬಳವು ಬರೀ ಕ್ರೀಡೆಯಲ್ಲ ತುಳುನಾಡಿನ ಜನರ ಕೃಷಿಯ ಸಂಕೇತವಾಗಿದೆ.

ಕೆಸರು ಗದ್ದೆಯಲ್ಲಿ ಕೋಣಗಳನ್ನು ಓಡಿಸುವ ಈ ಕಂಬಳವು ಕ್ರೀಡೆಗಿಂತ ಹೆಚ್ಚಾಗಿ ಒಂದು ಕಲೆ ಎಂದೇ ಹೇಳಬಹುದು. ಈ ಕಲೆಯನ್ನು ಪ್ರಾರಂಭಿಸಿದ ಕೀರ್ತಿ ನಮ್ಮ ಹಿರಿಯರಿಗೆ ಸಲ್ಲುತ್ತದೆ. ಮೊದಲೆಲ್ಲ ಕೃಷಿ ಮಾಡುವ ಗದ್ದೆಯಲ್ಲೇ ಕಂಬಳ ನಡೆಯುತ್ತಿತ್ತು.

ಆದರೆ ಪ್ರಸ್ತುತ ಗದ್ದೆಗಳು ಕಾಣ ಸಿಗುವುದೇ ಕಡಿಮೆಯಾದ ಕಾರಣ ಕಂಬಳಕ್ಕಾಗಿಯೇ ಬೇಕಾಗಿ ವಿಶೇಷ ಕರೆಯನ್ನು (ಕೆಸರಿನ ಗದ್ದೆಯನ್ನು) ನಿರ್ಮಿಸುತ್ತಾರೆ. ಗದ್ದೆಯ ಮಣ್ಣು, ಮರಳುಮಣ್ಣು ನೀರು ಹಾಕಿ ಇದನ್ನು ತಯಾರು ಮಾಡುತ್ತಾರೆ. ಕೋಣಗಳು ಓಡಿಸಲು ತಯಾರು ಮಾಡುವ ಸ್ಥಳವನ್ನು ಪಂಥ್‌ ಎಂದು ಹಾಗೂ ಓಡಿ ಬಂದ ಕೋಣವು ಮುಕ್ತಾಯಕ್ಕೆ ತಲುಪುವ ಗೆರೆಯನ್ನು ಮಂಜೊಟ್ಟಿ ಎಂದು ಕರೆಯುತ್ತಾರೆ.

ಕೋಣಗಳ ವಯಸ್ಸಿನ ಆಧಾರದ ಮೇಲೆ ಜೂನಿಯರ್‌ ಮತ್ತು ಸೀನಿಯರ್‌ ಎಂದು ಎರಡು ವಿಭಾಗ ಮಾಡುತ್ತಾರೆ. ಕೋಣಗಳ ಹಲ್ಲನ್ನು ಎಣಿಸಿ ವಯಸ್ಸನ್ನು ನಿರ್ಧರಿಸಲಾಗುತ್ತದೆ. ಕಂಬಳ ಗದ್ದೆಯಲ್ಲಿ ಒಂಟಿಗದ್ದೆ ಹಾಗೂ ಜೋಡಿಗದ್ದೆ ಎಂಬ 2 ಬಗೆಯಿದೆ. ಜೋಡಿಗದ್ದೆಯಲ್ಲಿ 2 ಗದ್ದೆಗಳು  ಇರುತ್ತದೆ ಉದಾಹರಣೆಗೆ ಲವ-ಕುಶ, ಕೋಟಿ-ಚೆನ್ನಯ ಈ ರೀತಿಯ ಹೆಸರಿನ ಜೋಡಿ ಗದ್ದೆ ಇರುತ್ತದೆ.

ಕಂಬಳದಲ್ಲಿ ನೇಗಿಲು ಹಿರಿಯ, ನೇಗಿಲು ಕಿರಿಯ, ಹಗ್ಗ ಹಿರಿಯ, ಹಗ್ಗ ಕಿರಿಯ, ಕನೆ ಹಲಗೆ, ಅಡ್ಡ ಹಲಗೆ ಎಂಬ 6 ವಿಭಾಗದಲ್ಲಿ ಸ್ಪರ್ಧೆಗಳು ನಡೆಯುತ್ತವೆ. ಈ ಸ್ಪರ್ಧೆಯಲ್ಲಿ 2 ಗದ್ದೆಯಲ್ಲಿ ಕೋಣವನ್ನು ಓಡಿಸಲಾಗುತ್ತದೆ. ಯಾವ ಕೋಣ ಮುಕ್ತಾಯದ ಗೆರೆಯನ್ನು ಬೇಗ ತಲುಪುತ್ತದೆಯೋ ಆ ಕೋಣ ಮುಂದಿನ ಸುತ್ತಿಗೆ ಆಯ್ಕೆಯಾಗುತ್ತದೆ. ಹೀಗೆ ಆಯ್ಕೆಯಾದ ಕೋಣಗಳಿಗೆ ಕೊನೆಗೆ ಫೈನಲ್‌ ಸ್ಪರ್ಧೆ ಇರುತ್ತದೆ. ಇದರಲ್ಲಿ ಯಾವ ಕೋಣ ಮೊದಲು ಹೋಗಿ ಮುಕ್ತಾಯದ ಗೆರೆಯನ್ನು ತಲುಪುತ್ತದೆಯೋ ಆ ಕೋಣ ಕಂಬಳದಲ್ಲಿ ಗೆಲ್ಲುತ್ತದೆ. ಗೆದ್ದ ಕೋಣಗಳಿಗೆ ಹಾಗೂ ಅದರ ಯಜಮಾನರಿಗೆ ಚಿನ್ನದ ಪದಕವನ್ನು ಬಹುಮಾನದ ರೂಪವಾಗಿ ನೀಡಿ ಗೌರವಿಸಲಾಗುತ್ತದೆ.

ಕಂಬಳದ ಕೋಣವನ್ನು ಸಾಕಲು ದಿನಕ್ಕೆ 1,500ರಂತೆ ತಿಂಗಳಿಗೆ 45,000ಕ್ಕಿಂತಲೂ ಹೆಚ್ಚು ಖರ್ಚು ಇದೆ. ಕಂಬಳದ ಕೋಣ ಸಾಕುವುದೆಂದರೆ, ಕೋಣದ ಯಾಜಮಾನರಾಗುವುದೆಂದರೆ ಅದೊಂದು ಪ್ರತಿಷ್ಟೆಯ ಹಾಗೂ ಗೌರವದ ಸಂಕೇತವಾಗಿದೆ. ಕಂಬಳದ ಕೋಣ ಮನೆಯಲ್ಲಿದೆ ಅಂದರೆ ಅದೊಂದು ಹೆಮ್ಮೆಯ ಸಂಗತಿ. ತಾವೇ ಗೆಲ್ಲಬೇಕು, ತಮಗೇ ಬಹುಮಾನ ಬರಬೇಕೆಂದು ಕಂಬಳಕ್ಕೆ ಸ್ಪರ್ಧಿಸುವುದಿಲ್ಲ. ಬದಲಾಗಿ ತಮ್ಮ ಹೆಸರು ತಮ್ಮ ಊರಿನ ಹೆಸರಿಗಾಗಿ ಕಂಬಳಕ್ಕೆ ಸ್ಪರ್ಧಿಸುತ್ತಾರೆ.

ನಮ್ಮ ತುಳುನಾಡಿನ ಕಂಬಳ ಎಂದೆಂದಿಗೂ ನಿಷೇಧವಾಗದೆ ಮುಂದೆಯೂ ಕಂಬಳ ಮುಂದುವರಿಯಲಿ ಎಂದು ಹೇಳುತ್ತಾ ಕಂಬುಲ ನನ ದುಂಬುಲ ವಾಗಿರಲಿ. ಕಂಬಳವು ಜೂಜಿನ ಆಟವಾಗದೆ ನೆಮ್ಮದ್ದಿ ಖುಷಿ ತರುವಂತಹ ಕ್ರೀಡೆಯಾಗಲಿ ಎಂಬುದೇ ನಮ್ಮೆಲ್ಲರ ಆಶಯ.

-ಮಲ್ಲಿಕಾ ಜೆ.ಬಿ.

ಅನಂತಾಡಿ

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

22

Ganesh Chaturthi: ಗಣೇಶ ಬಂದ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.