ನನ್ನಿಷ್ಟದ ಸಿನೆಮಾ ಯುವ ಜನರ ಅಯ್ಕೆ: ಮುತ್ತಿನ ಹಾರ ; ಬದುಕಿನ ಸವಾಲು ತೆರೆದಿಡುವ ಚಿತ್ರ


Team Udayavani, Jul 8, 2020, 12:24 AM IST

ನನ್ನಿಷ್ಟದ ಸಿನೆಮಾ ಯುವ ಜನರ ಅಯ್ಕೆ: ಮುತ್ತಿನ ಹಾರ ; ಬದುಕಿನ ಸವಾಲು ತೆರೆದಿಡುವ ಚಿತ್ರ

ಮುತ್ತಿನ ಹಾರ ವೀರ ಯೋಧರ ಬದುಕಿನ ಕುರಿತಾದ ಚಲನಚಿತ್ರ.1990 ರಲ್ಲಿ ರೂಪುಗೊಂಡ ಚಲನಚಿತ್ರದ ಮೂರ್ನಾಲ್ಕು ಗೀತೆಗಳು ಬಹಳ ಜನಪ್ರಿಯವಾಗಿದ್ದವು. ಕೊಡಗಿನ ಹಿನ್ನೆಲೆಯಲ್ಲಿ ಸಾಗುವ ಚಲನಚಿತ್ರಕ್ಕೆ 1990-91 ರಲ್ಲಿ ರಾಷ್ಟ್ರೀಯ ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರ ಪುರಸ್ಕಾರ ಲಭಿಸಿತ್ತು. ರಾಜ್ಯ ಸರಕಾರದ ಪ್ರಥಮ ಅತ್ಯುತ್ತಮ ಚಿತ್ರ ಪ್ರಶಸ್ತಿ ಲಭಿಸಿತ್ತು. ಹಿರಿಯ ನಟ ಕೆ.ಎಸ್‌. ಅಶ್ವತ್ಥ್‌ರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಲಭಿಸಿತ್ತು.

***********************************************

ಸಿನಿಮಾ ಎಂಬುದು ಕೇವಲ ಮನರಂಜನೆ ನೀಡುವುದಕ್ಕೆ ಮಾತ್ರ ಸೀಮಿತವಲ್ಲ. ಸಿನಿಮಾ ಸ್ಫೂರ್ತಿದಾಯಕವಾಗಿರಬೇಕು. ಅಂತಹ ಸಿನಿಮಾಗಳಲ್ಲಿ ಮೊದಲು ನಾ ಕಂಡ ಸಿನಿಮಾ ಮುತ್ತಿನಹಾರ.

ಎಸ್. ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರಕ್ಕೆ ಹಂಸಲೇಖ ಸಂಗೀತ ನೀಡಿದ್ದಾರೆ. ತೊಂಬತ್ತರ ದಶಕದಲ್ಲಿ ಮೂಡಿಬಂದಿರುವ ಚಿತ್ರ ಇಂದಿಗೂ ಪ್ರಸ್ತುತ.  ಚಿತ್ರದಲ್ಲಿ ವಿಷ್ಣುವರ್ಧನ್, ಸುಹಾಸಿನಿ ನಟಿಸಿದ್ದಾರೆ.  ಈ ಸಿನಿಮಾ ಯುದ್ಧದ ಪಿಡುಗಿನ ಬಗೆಗೆ ಸೈನಿಕನ ತೊಳಲಾಟವನ್ನು ವಿವರಿಸುತ್ತದೆ.

ಯುದ್ಧ ಎಂಬುದು  ತನ್ನನ್ನು ತಾನೇ ಬಲಿ ಪಡೆದುಕೊಳ್ಳುವಂತೆ ಮಾಡುವ ದೃಶ್ಯವನ್ನು ತನ್ನ ಗಂಡ, ಅತ್ತೆ , ಮಗ ಎಲ್ಲರನ್ನೂ ಸಾಲು ಸಾಲಾಗಿ ಕಳೆದುಕೊಳ್ಳುವ ಒಂದು ಹೆಣ್ಣಿನ ನೋವಿನ ಚಿತ್ರಣವನ್ನು ಈ ಚಿತ್ರ ಬಿಂಬಿಸುತ್ತದೆ.

ಭಾರತ ಮತ್ತು ಚೀನಾದ ನಡುವೆ ನಡೆಯುವ ಯುದ್ಧದಲ್ಲಿ ಸೈನಿಕ ಮೇಜರ್ ಅಚ್ಚಪ್ಪ (ವಿಷ್ಣುವರ್ಧನ್) ಗಾಯಗೊಳ್ಳುತ್ತಾನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುವಾಗ ದಾದಿ ಅನ್ನಪೂರ್ಣ ಜೊತೆಗೆ ಪ್ರೇಮವಾಗಿ ಇಬ್ಬರು ವಿವಾಹವಾಗುತ್ತಾರೆ.

ಅಪ್ಪ ಅಮ್ಮ ಹೆಂಡತಿ ಮಗನ ಜೊತೆ ಸಂತೋಷವಾಗಿ ಇದ್ದ ಅಚ್ಚಪ್ಪ ಎಲ್ಲರನ್ನೂ ಬಿಟ್ಟು ಯುದ್ಧಕ್ಕೆ ಹೋಗುವ ಅನಿವಾರ್ಯತೆ ಉಂಟಾಗುತ್ತದೆ. ಎಲ್ಲರನ್ನೂ ತೊರೆದು ಯುದ್ಧಕ್ಕೆ ಹೊರಡುತ್ತಾನೆ.  ಕೆಲ ದಿನಗಳ ನಂತರ ಅಚ್ಚಪ್ಪನಿಗೆ ತನ್ನ ಮಗನನ್ನು ತೋರಿಸಲು ಅನ್ನಪೂರ್ಣ ಕರೆದುಕೊಂಡು ಹೋಗುವಾಗ ಶತ್ರುಗಳ ದಾಳಿಗೆ ತನ್ನ ಮಗನನ್ನು ಕಳೆದುಕೊಳ್ಳುತ್ತಾಳೆ.

ರಾಜಸ್ಥಾನದ ಮರಳುಗಾಡಿನಲ್ಲಿ ಮಗನನ್ನು ಕಳೆದುಕೊಂಡ ಆಕೆ ದಿಕ್ಕು ತೋಚದೇ ಮಗನನ್ನು ಹೇಗಾದರೂ ಮಾಡಿ ತನ್ನ ಗಂಡನಿಗೆ ತೋರಿಸಬೇಕೆಂದು ಶವವನ್ನು ಇಟ್ಟುಕೊಂಡು ಅಲೆದಾಡುತ್ತಾಳೆ. ಕೊನೆಗೂ ಗಂಡನಿಗೆ ಮಗನ ಮುಖವನ್ನು ತೋರಿಸಲು ಆಗುವುದಿಲ್ಲ. ನೋವಿನಿಂದ ಹೊರಬರಲಾಗದೆ ಗಂಡ ಹೆಂಡತಿ ಇಬ್ಬರೂ ದುಃಖವನ್ನು ಅನುಭವಿಸುತ್ತಾರೆ.  ನೋವನ್ನು ಮರೆಯಲು ಇಬ್ಬರೂ ತಮ್ಮ ಕೆಲಸದಲ್ಲಿ ತೊಡಗಿಕೊಳ್ಳುತ್ತಾರೆ.

ಅತ್ತ ತನ್ನ ಮೊಮ್ಮಗನನ್ನು ನೋಡುವ ಕಾತುರ ಹೆಚ್ಚಾಗಿ ಅಜ್ಜ ಅಜ್ಜಿ ಇಬ್ಬರೂ ಇವರಿದ್ದಲ್ಲಿಗೆ ಬರುತ್ತಾರೆ. ಮೊಮ್ಮಗ ಸತ್ತ ವಿಷಯ ತಿಳಿದ ಅಜ್ಜಿ ಆಘಾತದಿಂದ ಸಾವನ್ನಪ್ಪುತ್ತಾರೆ.  ಶತ್ರುಗಳಿಂದ ಬಿಡಿಸಿಕೊಳ್ಳಲು ಹೋರಾಡಿ ಅಚ್ಚಪ್ಪ ವೀರ ಮರಣ ಹೊಂದುತ್ತಾನೆ.  ತನ್ನ ಗಂಡ ಮೊದಲೇ ಸತ್ತು ಹೋಗಿದ್ದ ಎಂದುಕೊಂಡಿದ್ದ ಅನ್ನಪೂರ್ಣ ಗೆ ಗಂಡ ಬದುಕಿರುವ ಸುದ್ದಿ ಕೇಳಿ ಸಂತೋಷ ಪಡುತ್ತಾಳೆ.

ತನ್ನ ವಿವಾಹ ವಾರ್ಷಿಕೋತ್ಸವವನ್ನು ಗಂಡನೊಂದಿಗೆ ಆಚರಿಸಿಕೊಳ್ಳಲು ಅವನು ಕೊಟ್ಟ ಸೀರೆ ಉಟ್ಟು ಮುತ್ತಿನಹಾರ ತೊಟ್ಟು ಓಡೋಡಿ ಬರುವ ಆಕೆಗೆ ಗಂಡ ಬದುಕಿಲ್ಲ ಎಂಬ ಸುದ್ದಿ ಆಘಾತ ಉಂಟು ಮಾಡುತ್ತದೆ. ಈ ಎಲ್ಲಾ ನೋವುಗಳನ್ನು ಅನುಭವಿಸಿದ ಅನ್ನಪೂರ್ಣ ಧೈರ್ಯಗೆಡದೆ ದಿಟ್ಟ ಯೋಧನ ಪತ್ನಿಯಾಗಿ ಎಲ್ಲಾ ನೋವನ್ನು ಮನದಲ್ಲಿಯೇ ಇಟ್ಟುಕೊಂಡು ಮರಳಿ ದಾದಿಯಾಗಿ ಸೇವೆ ಸಲ್ಲಿಸುತ್ತಾರೆ.

ಈ ಸಿನಿಮಾ ಒಬ್ಬ ಯೋಧನ ಪತ್ನಿಯ ನೋವಿನ ಆಕ್ರಂದನ ತೋರಿಸುತ್ತದೆ. ಮೊನ್ನೆಯಷ್ಟೆ ಚೀನಾದ ಕುತಂತ್ರಕ್ಕೆ ನಮ್ಮಯೋಧರನ್ನು ಕಳೆದುಕೊಂಡೆವು. ಅ ಸಮಯದಲ್ಲಿ ನನಗೆ ನೆನಪಾದದ್ದು ಮುತ್ತಿನಹಾರ ಸಿನಿಮಾ. ಈ ಸಿನಿಮಾದಿಂದ ತಿಳಿಯುವುದೇನೆಂದರೆ ಎಲ್ಲಾ ಸುಖ ಸಂಬಂಧ, ಪ್ರೀತಿಗಳನ್ನ ಬದಿಗೊತ್ತಿ ತಮ್ಮ ಕರ್ತವ್ಯವನ್ನು ನಿರ್ವಹಿಸುವ ಯೋಧನ ಜೀವನ ಎಷ್ಟು ಕಷ್ಟಕರ ಎಂಬುದು ಹಾಗೂ ಒಂದು ಹೆಣ್ಣು ಎಷ್ಟೇ ನೋವು ಅನುಭವಿಸಿದರೂ ಅದನ್ನು ಧೈರ್ಯವಾಗಿ ಎದುರಿಸುವವಳು ಎಂಬುದು. ಬಹಳ ಪ್ರೇರಣಾದಾಯಕವಾದ ಚಲನಚಿತ್ರ.

– ವಿಜಯ್ ಕುಮಾರ್ ಎಸ್ ಎಮ್, ತುಮಕೂರು

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.