UV Fusion: ಗುಡ್ಡದ ಭೂತದಲ್ಲಿ ಸಿಲುಕಿದ ಉತ್ತರಕನ್ನಡ


Team Udayavani, Sep 8, 2024, 3:28 PM IST

20-uk

ಹಚ್ಚ ಹಸಿರಿನ ಪಶ್ಚಿಮ ಘಟ್ಟಗಳು, ದಟ್ಟವಾದ ಅರಣ್ಯ ಪ್ರದೇಶಗಳು, ವನ್ಯಜೀವಿಗಳು, ಪ್ರವಾಸೋದ್ಯಮ, ಅತಿ ಹೆಚ್ಚು ಜಲಪಾತಗಳನ್ನು ಹೊಂದಿರುವ ಏಕೈಕ ಜಿಲ್ಲೆ  ಅದುವೇ ನಮ್ಮ ಉತ್ತರ ಕನ್ನಡ…  ಇದು  ಜಿಲ್ಲೆಗಿರುವ ಐಡೆಂಟಿಟಿ ಎಂದರೇ ತಪ್ಪಾಗಲಿಕ್ಕಿಲ್ಲ…  ಮಳೆಗಾಲದಲ್ಲಿ ಅದೆಷ್ಟೋ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದ  ಜಿಲ್ಲೆ ಪ್ರಸ್ತುತ ಕಾಲಮಾನದಲ್ಲಿ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದೆ.

ಕಳೆದ ಕೆಲ ವರ್ಷಗಳಲ್ಲಿ ಕೊಡಗು, ಕಳಸ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿ, ಗುಡ್ಡ ಕುಸಿದು ಅದೆಷ್ಟೋ ಅನಾಹುತಗಳು ಸಂಭವಿಸಿ, ಹಲವು ಮನೆಗಳು ಮಣ್ಣಿನಡಿ ಸಿಲುಕಿ ಅದೆಷ್ಟೋ  ಪ್ರಾಣಿಗಳು, ಮನುಷ್ಯರು ಅಸುನೀಗಿದ್ದಾರೆ. ಆದರೆ ಇದೀಗ ನಮ್ಮ ಜಿಲ್ಲೆಯಲ್ಲಿಯೇ ಹಲವು ಪ್ರದೇಶಗಳಲ್ಲಿ ಇಂತಹ ಘಟನೆಗಳು ಸಂಭವಿಸಿದೆ ಹಾಗೂ ಸಂಭವಿಸುತ್ತಲೇ ಇವೆ. ಇದಕ್ಕೆಲ್ಲಾ ಕಾರಣವೇನೆಂದು ಯೋಚಿಸಿದಾಗ ಅತಿ ಅಭಿವೃದ್ಧಿಯೇ ಇದಕ್ಕೆ ಕಾರಣ ಎಂದರೆ ತಪ್ಪಾಗಲಾರದು. ಜತೆಗೆ ಮಾನವನ ಸ್ವಾರ್ಥವೂ ಕೂಡಿದೆ.

ಸಾಗುವಳಿ,  ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ, ಮನೆ ಕಟ್ಟಿಕೊಳ್ಳುವ ಸಲುವಾಗಿ ಅವೈಜ್ಞಾನಿಕವಾಗಿ ಗುಡ್ಡ ಕಡಿತ, ರೈಲ್ವೆ ಮಾರ್ಗ ರೆಸಾರ್ಟ್‌, ಜನವಸತಿ ನಿರ್ಮಾಣ ಗಳಿಗಾಗಿ ನದಿ ಅಂಚನ್ನು ತುಂಬಿಸುವುದು  ಇವೆಲ್ಲವೂ ಕಾರಣ ಎಂದು ವರದಿಗಳು ಹೇಳಿವೆ.

ಇಲ್ಲಿ ರಸ್ತೆ ವಿಸ್ತರಿಸಲು ಅವೈಜ್ಞಾನಿಕವಾಗಿ ಗುಡ್ಡ ಕೊರೆಯಲಾಗಿದೆ. ಯಾವುದೇ ತಡೆಗೋಡೆಯನ್ನೂ ಸಹ ನಿರ್ಮಿಸಿಲ್ಲ. ಅದರ ಪರಿಣಾಮ ಹಲವಾರು ಮುಗ್ಧ ಜೀವಿಗಳು ಪ್ರಾಣ ತೆತ್ತರು.

ಕೆಲಮೊಮ್ಮೆ ಗುಡ್ಡವನ್ನು ಕಡಿಯುವುದು ಅನಿವಾರ್ಯವೂ ಹೌದು. ಆದರೆ ಅದನ್ನು ವ್ಯವಸ್ಥಿತವಾಗಿ  ಅಚ್ಚುಕಟ್ಟಾಗಿ ಕಾರ್ಯ ರೂಪಕ್ಕೆ ತರುವುದು ಬಹಳ ಮುಖ್ಯ.. ಇಲ್ಲದಿದ್ದರೆ ಮಳೆಗಾಲದಲ್ಲಿ ಇಂತಹ ಘಟನೆಗಳು,ಅನಾಹುತಗಳು, ಜೀವಹಾನಿಗಳು ಹೆಚ್ಚೆಚ್ಚು ಸಂಭವಿಸುತ್ತಲೇ ಇರುತ್ತದೆ.

-ಕಾವ್ಯಾ ಹೆಗಡೆ

ವಾನಳ್ಳಿ

ಟಾಪ್ ನ್ಯೂಸ್

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-uv-fusion

Education System: ಶಿಕ್ಷಕರು, ಶಿಕ್ಷಣ ಹೇಗಿದ್ದರೆ ಚೆನ್ನ..?

19-uv-fusion

UV Fusion: ಶಿಕ್ಷಕರೊಂದಿಗಿನ ನೆನಪುಗಳು

18-uv-fusion

UV Fusion: ಬಯಕೆಯ ಬೆನ್ನೇರಿದಷ್ಟು ನೆಮ್ಮದಿ ಮರೀಚಿಕೆಯಷ್ಟೇ?

17-uv-fusion

Kasaragod Inscriptions: ಇತಿಹಾಸದ ಕಥೆ ಹೇಳುವ ಕಾಸರಗೋಡಿನ ಶಾಸನಗಳು

16-uv-fusion

UV Fusion: ಮಾತು ಅತಿಯಾಗದಿರಲಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.