Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ


Team Udayavani, Apr 25, 2024, 4:03 PM IST

19-uv-fusion

ನಾವು ವೋಟು ಹಾಕುತ್ತೇವೆ ನಮ್ಮ ಜನಪ್ರತಿನಿಧಿಗಳು ತಪ್ಪು ಮಾಡಿದರೆ ನಾವೇನು ಮಾಡಬೇಕು.? ಈ ಮಾತು ದೇಶದ ಪ್ರತಿಯೊಬ್ಬ ಮತದಾರನ ಮಾತು ಹೌದು.. ಪ್ರಜಾಪ್ರಭುತ್ವದಲ್ಲಿ ಇಂಥ ಮಾತುಗಳನ್ನು ನಾವು ಕೇಳುತ್ತಲೇ ಬಂದಿದ್ದೇವೆ. ಮತದಾರನೇ ಮಹಾಪ್ರಭು ಎನ್ನಲಾಗುತ್ತದೆ.

ಅಭ್ಯರ್ಥಿಯ ಗೆಲುವಿಗೆ ಮತದಾರನ ನಿಲುವೇ ನಿರ್ಣಾಯಕ. ವೋಟು ಪಡೆದ ಗೆದ್ದ ಮಹಾಶಯ ಉನ್ನತ ಸ್ಥಾನದಲ್ಲಿ ಕುಳಿತು ಅಧಿಕಾರ ಚಲಾಯಿಸುತ್ತಾನೆ.. ರಾಜಕಾರಣದ ಚುಕ್ಕಾಣಿ ಹಿಡಿಯುತ್ತಾನೆ. ಆದರೆ ಮತದಾರ ನಿರ್ಣಾಯಕ ಎಂಬುದಂತೂ ಸತ್ಯ. ಆದರೆ ಇಂದಿನ ಪರಿಸ್ಥಿತಿಯಲ್ಲಿ ಎಲ್ಲವೂ ಬದಲಾದಂತಿದೆ. ಪ್ರಜಾಪ್ರಭುತ್ವ ಪರಿಕಲ್ಪನೆ ಹುಟ್ಟು ಹಾಕಿದ ಪೂರ್ವಜರು ಬಹುಶಃ ಇಂಥದೊಂದು ಪರಿಸ್ಥಿತಿ ಎದುರಾಗಬಹುದು ಎಂದು ಊಹೆ ಕೂಡ ಮಾಡಿರಲಿಕ್ಕಿಲ್ಲ. ಮತದಾರನ ಶಕ್ತಿ ಕೇವಲ ಕಾಗದದ ಮೇಲಿನ ಹುಲಿಯಾಗಿದೆ. ಎಲ್ಲ ಶಕ್ತಿ ಸಾಮರ್ಥ್ಯಗಳು ಗೆದ್ದು ಗದ್ದುಗೆ ಏರಿದವನ ಕೈಯಲ್ಲಿದೆ. ಮತದಾರ ಅಸಹಾಯಕನಾಗಿದ್ದಾನೆ. ನಾಯಕ ವಿಜೃಂಭಿಸುತ್ತಿದ್ದಾನೆ. ಗೆದ್ದು ಬಂದಾತನ ಮನೆ ಅರಮನೆಯಾಗುತ್ತದೆ. ಆತ ಐಷಾರಾಮಿ ಕಾರುಗಳಲ್ಲಿ ಓಡಾಡುತ್ತಾನೆ.

ಈ ಒಂದು ವಿಷಯ ಯಾವಾಗಲೂ ಮತದಾರರನ್ನು ಕಾಡುತ್ತಲೆ ಇರುತ್ತದೆ.. ಅಂಥ ಕ್ರಿಮಿನಲ್‌ಗ‌ಳು, ಬಾಹುಬಲಿಗಳು ಚುನಾವಣೆಯಲ್ಲಿ ಗೆಲ್ಲುವುದಾದರೂ ಹೇಗೆ? ಒಳ್ಳೆಯ ಚಾರಿತ್ರಿಕ ಹಿನ್ನೆಲೆಯಿರುವ ವ್ಯಕ್ತಿಗಳು ಚುನಾವಣೆಯಲ್ಲಿ ಸೋಲುವುದಾದರೂ ಹೇಗೆ? ಚುನಾವಣೆ ರಾಜಕೀಯದಲ್ಲಿರುವ ಭ್ರಷ್ಟತೆಯಿಂದ ಜನಸಾಮಾನ್ಯರು ಎಚ್ಚೆತ್ತುಕೊಳ್ಳುವುದಾದರೂ ಯಾವಾಗ? ಮತದಾರನ ಹೊಣೆಗಾರಿಕೆ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವುದಕ್ಕಷ್ಟೇ ಸೀಮಿತವಾಗಿ ಹೋಗಿದೆ. ಒಮ್ಮೆ ಚುನಾವಣೆ ಮುಗಿದ ಅನಂತರ ಮತದಾರರ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ಈಗಲೂ ಇದೆ.

ನಮ್ಮ ಮುಂದಿನ ಪ್ರಶ್ನೆಯೆಂದರೆ, ಮತದಾರರ ಏನು ಮಾಡಬೇಕು.? ಯಾರಿಗೆ ವೋಟು ಹಾಕಬೇಕು? ಎಂಬುದಾಗಿದೆ. ಮತವನ್ನು ಹಾಕುವಾಗ ನಾವು ಅಭ್ಯರ್ಥಿಯ ಹಿನ್ನೆಲೆಯನ್ನು ಗಮನಿಸಬೇಕಾಗಿರುವುದು ಮುಖ್ಯ. ಅಭ್ಯರ್ಥಿಯ ಆಸ್ತಿ ಹಿನ್ನೆಲೆ, ಶೈಕ್ಷಣಿಕ ಹಿನ್ನೆಲೆ ಹಾಗೂ ಅಪರಾಧ ಹಿನ್ನೆಲೆಗಳನ್ನು ಗಮನಿಸಬೇಕಾಗುತ್ತದೆ.. ಅಭ್ಯರ್ಥಿಯು ಒಂದು ವೇಳೆ ಅಪರಾಧಿಯಾಗಿದ್ದಲ್ಲಿ ಅವನನ್ನು ಆಯ್ಕೆ ಮಾಡದೆ ಇರುವುದೇ ಉತ್ತಮ.

ಕೆಲವರು ಇರುತ್ತಾರೆ ಅಭ್ಯರ್ಥಿಯು ನಮ್ಮ ಜಾತಿಗೆ ಸೇರಿದವನು ಇವನನ್ನು ಆಯ್ಕೆ ಮಾಡಿದರೆ ನಮ್ಮ ಜಾತಿಯವನು ಅಧಿಕಾರಕ್ಕೆ ಬರುತ್ತಾನೆ ಎಂದೆಲ್ಲಾ ಯೋಚಿಸುತ್ತಾರೆ. ಇನ್ನೂ ಕೆಲವರು ರಾಜಕಾರಣಿಗಳು ಅಥವಾ ಅಭ್ಯರ್ಥಿಗಳು ನೀಡುವ ಉಡುಗೊರೆ, ಹಣ ಮತ್ತಿತರ ವಸ್ತುಗಳ ಆಮೀಷಕ್ಕೆ ಒಳಗಾಗಿ ತಮ್ಮ ಮತವನ್ನು ಮಾರಿಕೊಳ್ಳುತ್ತಾರೆ.

ಇದ್ಯಾವುದೇ ಆಮೀಷಕ್ಕೆ ಒಳಗಾಗದೇ ಅಭ್ಯರ್ಥಿಯ ಹಿನ್ನೆಲೆಯನ್ನು ಗಮನಿಸಿ, ಅವನು ಪ್ರಾಮಾಣಿಕನೋ, ಅವನಿಗೆ ಆಡಳಿತ ಮಾಡುವ ಸಾಮರ್ಥ್ಯ ನಿಜವಾಗಿಯೂ ಇದೆಯಾ, ಒಂದೊಮ್ಮೆ ಈ ಅಭ್ಯರ್ಥಿಯು ಆಯ್ಕೆ ಆದರೆ ನಮ್ಮ ಗ್ರಾಮ, ದೇಶ ಅಭಿವೃದ್ಧಿಯಾಗುತ್ತದೆಯೇ ಎಂಬೆಲ್ಲ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಮತದಾನ ಮಾಡಿದರೆ ಒಬ್ಬ ಉತ್ತಮ ಅಭ್ಯರ್ಥಿಯನ್ನು ಆರಿಸಬಹುದು ಎಂಬುದು ನನ್ನ ಅಭಿಪ್ರಾಯವಾಗಿದೆ.

-ಕೆ. ಎಂ. ಪವಿತ್ರಾ

ಎಂಜಿಎಂ ಕಾಲೇಜು, ಉಡುಪಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Ganesh Chaturthi: ಗಣೇಶ ಬಂದ

14-wayanad

Wayanad: ವಯನಾಡಿನ ಪ್ರಕೃತಿ ವಿಕೋಪ ಮತ್ತು ಮಾನವೀಯತೆ

13-

UV Fusion: ಅನಾಹುತಕಾರಿ ಮಾನವ

11

UV Fusion: ನಮ್ಮ ಔನ್ನತ್ಯವನ್ನು ನಾವೇ ನಿರ್ಧರಿಸಬೇಕಲ್ಲವೇ?

10-

Childhood: ಈ ಬಾಲ್ಯ ಮತ್ತೊಮ್ಮೆ ಮರುಕಳಿಸಬಾರದೇ?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.