UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…


Team Udayavani, Sep 18, 2024, 5:30 PM IST

19-uv-fusion

ಮನುಷ್ಯ ಎಂದು ಕರೆಸಿಕೊಳ್ಳುವ ಪ್ರತಿಯೊಬ್ಬನಲ್ಲೂ ಮನುಷ್ಯತ್ವ ಎಂಬುದು ಇದ್ದೇ ಇರುತ್ತದೆ, ಇರಲೇ ಬೇಕು. ಆದರೆ ಈಗಿನ ಜಗತ್ತನಲ್ಲಿ ಇದು ಮಾಯವಾಗಿದೆ ಎಂಬ ಭಾವನೆ ನನ್ನನ್ನು ಕಾಡುತ್ತಿದೆ. ನಾನು ಈ ಅಭಿಪ್ರಾಯಕ್ಕೆ ಬರಲು ಒಂದು ಕಾರಣವಿದೆ. ನೀವೂ ಗಮನಿಸಿರಬಹುದು. ಯಾವುದಾದರೊಂದು ಅವಘಡ ಅಥವಾ ಅಪಘಾತ ಸಂಭವಿಸಿದಾಗ ಅಲ್ಲಿ ಹತ್ತಾರು ಜನರಿದ್ದರೂ ಸಹಾಯಕ್ಕೆ ಯಾರೂ ಧಾವಿಸುವುದಿಲ್ಲ.

ಬದಲಾಗಿ ಥಟ್ಟನೆ ಅವರವರ ಮೊಬೈಲ್‌ ಫೋನ್‌ನಲ್ಲಿ ವೀಡಿಯೋ ಮಾಡುತ್ತಾ ನಿಂತುಬಿಡುತ್ತಾರೆ. ಅದೇ ತಮ್ಮ ಸಂಬಂಧಿಕರು ಅಥವಾ ಪರಿಚಯಸ್ಥರು ಅದೇ ಪರಿಸ್ಥಿತಿಯಲ್ಲಿ ಸಿಲುಕಿದ್ದರೆ ಓಡಿ ಹೋಗಿ ಸಹಾಯ ಮಾಡುತ್ತಾರೆ, ಸಹಾಯಕ್ಕೆ ಅಂಗಲಾಚುತ್ತಾರೆ. ಅದೇ ಅಪರಿಚಿತನಾದರೆ ನಾವು ಸೈಲೆಂಟ್‌. ಇದನ್ನೆಲ್ಲಾ ಕಂಡಾಗ ನನಗನಿಸುವುದು, ಎತ್ತ ಸಾಗುತ್ತಿದೆ ನಮ್ಮ ಈ ಪ್ರಪಂಚ ಎಂದು.

ಪ್ರಸ್ತುತ ಸಾಕಿ ಬೆಳೆಸಿದ ತಂದೆ ತಾಯಿಗೆ ಗೌರವ ನೀಡದ ಮಕ್ಕಳಿದ್ದಾರೆ. ಅದೊಂದು ಕಾಲವಿತ್ತು. ತಾಯಿಯೇ ಮೊದಲ ದೇವರು, ತಂದೆಯೇ ಮೊದಲ ಗುರು ಎಂದು ಮಕ್ಕಳು ಹೆತ್ತವರನ್ನು ಪೂಜಿಸುತ್ತಿದ್ದರು.

ಆದರೆ ಈಗಿನ ಮಕ್ಕಳು ತಮ್ಮ ಜೀವನದ ಸುಖ ಶಾಂತಿ ನೆಮ್ಮದಿಗಾಗಿ, ಎಷ್ಟೇ ಕಷ್ಟವಾದರೂ ತಾವು ಕೇಳಿದ್ದನ್ನು ಕೊಡಿಸಿದ, ನಮ್ಮನ್ನು ಚೆನ್ನಾಗಿ ನೋಡಿಕೊಂಡ ತಂದೆ ತಾಯಿಯನ್ನೇ ದೂರ ಮಾಡಿ ವೃದ್ಧಾಶ್ರಮಕ್ಕೆ ಸೇರಿಸುತ್ತಿರುವುದು ವಿಪರ್ಯಾಸವೇ ಸರಿ. ತಮಗೆ ಜನ್ಮ ನೀಡಿ, ಸಾಕಿ ಸಲುಹಿ ಬೆಳೆಸಿದ ಆ ಹಿರಿಯ ಜೀವಗಳನ್ನೇ ಯಾವ ಗೌರವವೂ ಇಲ್ಲದೇ ಮನೆಯಿಂದ ಹೊರ ದಬ್ಬುವುದನ್ನು ನೋಡಿದಾಗ ನನಗೆ ಅನಿಸುವುದು ಇಷ್ಟೆ, ಎತ್ತ ಸಾಗಿತ್ತಿದೆ ನಮ್ಮ ಈ ಪ್ರಪಂಚ ಎಂದು.

ಯುವಕರೇ ದೇಶದ ಭವಿಷ್ಯ, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬ ಕಾಲವಿತ್ತು. ಆದರೆ ಇಂದಿನ ಯುವಕರನ್ನು ಕಂಡಾಗ ಮುಂದೆ ಎಂತಹ ಪ್ರಜೆಗಳಾಗುತ್ತಾರೆ ಎಂಬ ಭಯ ಕಾಡದಿರದು. ಮುಂದೆ ಸತ್‌ಪ್ರಜೆಗಳಾಗಿ ಬೆಳೆಯಬೇಕಾದ ಅದೆಷ್ಟೋ ಯುವಕ-ಯುವತಿಯರು ದಾರಿ ತಪ್ಪಿ ಬೇರೆ ಬೇರೆ ಆಮಿಷಗಳಿಗೆ ತಮ್ಮನ್ನು ತಾವು ಬಲಿ ಕೊಡುತ್ತಿದ್ದಾರೆ. ಗಾಂಜಾ, ಸಿಗರೇಟು, ಮದ್ಯಪಾನ ಇತ್ಯಾದಿ ಚಟಗಳನ್ನು ಈಗಲೇ ಮೈಗಂಟಿಸಿಕೊಂಡಿ¨ªಾರೆ. ಸಣ್ಣಪುಟ್ಟ ಸೋಲುಗಳು, ಸಮಸ್ಯೆಗಳಿಗೆ ಹೆದರಿ, ಅದನ್ನು ಎದುರಿಸಲಾಗದೆ ಅದಕ್ಕೆಲ್ಲ ಆತ್ಮಹತ್ಯೆ ಒಂದೇ ದಾರಿ ಎಂಬ ನಿರ್ಧಾರಕ್ಕೆ ಯುವಜನತೆ ಬರುತ್ತಿರುವುದನ್ನು ಕಂಡಾಗ ನನಗೆ ಅನಿಸುವುದು ಇಷ್ಟೆ, ಎತ್ತ ಸಾಗುತ್ತಿದೆ ನಮ್ಮ ಈ ಪ್ರಪಂಚ ಎಂದು.

ಆಗಿನ ಕಾಲದಲ್ಲಿ ಪುಟ್ಟಮಕ್ಕಳಿಗೆ ತನ್ನ ಅಜ್ಜಿ ಮನೆಗೆ ಹೋಗುವಾಗ ಆಗುತ್ತಿದ್ದ ಖುಷಿ ಈಗಿನ ಮಕ್ಕಳ ಅದೃಷ್ಟದಲ್ಲಿಲ್ಲ. ಇದ್ದಕ್ಕೆ ಕಾರಣ ಮೊಬೈಲ್‌ ಅಲ್ಲದೇ ಬೇರೇನೂ ಅಲ್ಲ. ಇಂದು ಮೊಬೈಲ್‌ ಇಲ್ಲದಿದ್ದರೆ ಮಕ್ಕಳು ಊಟವನ್ನೂ ಮಾಡುವುದಿಲ್ಲ. ನಾವುಬಾಲ್ಯದಲ್ಲಿ ಚಂದ್ರನನ್ನು ನೋಡುತ್ತಾ ಊಟವನ್ನು ಸವಿಯುತ್ತಿದ್ದೆವು. ಈಗ ನೂತನ ತಂತ್ರಜ್ಞಾನ, ಆವಿಷ್ಕಾರಗಳನ್ನು ಬಳಸುತ್ತಾ ನಮ್ಮ ಸಂಪ್ರದಾಯವನ್ನು ಮರೆಯುತ್ತಿದ್ದೇವೆ ಎಂದರೆ ತಪ್ಪಾಗಲಾರದು.

ಹಾಗಂತ ಮೊಬೈಲ್‌ ಅಥವಾ ಹೊಸ ಆವಿಷ್ಕಾರ ಬಳಸಬಾರದೆಂದಲ್ಲ. ಅತಿಯಾದರೆ ಅಮೃತವೂ ವಿಷ ಎಂಬ ಮಾತಿನಂತೆ ಅದಕ್ಕೊಂದು ಇತಿಮಿತಯನ್ನು ನಾವೇ ರೂಪಿಸಿಕೊಳ್ಳಬೇಕು. ಆದರೆ ಇಂದು ಎಲ್ಲವನ್ನೂ ಬಿಟ್ಟು ಮೊಬೈಲ್‌ ಗೀಳಿನಲ್ಲಿ ಸಿಲುಕುತ್ತಿರುವವರನ್ನು ಕಂಡಾಗ ಮತ್ತೇ ಕಾಡುವಂತಹ ಪ್ರಶ್ನೆ ಎತ್ತ ಸಾಗುತ್ತಿದೆ ಈ ಪ್ರಪಂಚ…

-ಕವನಾ

ಬಿವೋಕ್‌ (ಡಿಎಂಎಫ್),

ಎಸ್‌ಡಿಎಂ, ಉಜಿರೆ

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

16-uv-fusion

UV Fusion: ಎಲ್ಲರಿಗೂ ಬದುಕುವ ಹಕ್ಕಿದೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.