![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Mar 6, 2024, 3:14 PM IST
ಮನೆಯೊಳಗೆ ಏಕಾಏಕಿ ಚಿರತೆ ನುಗ್ಗಿದರೆ ಹೇಗಾಗಬೇಡ ನೀವೇ ಯೋಚಿಸಿ, ಇಲ್ಲೊಂದು ಅಂತದ್ದೇ ಪ್ರಕರಣವೊಂದು ಮಹಾರಾಷ್ಟ್ರದ ಮಾಲೆಗಾಂವ್ನಲ್ಲಿ ನಡೆದಿದೆ.
ಬಾಲಕನೋರ್ವ ಮನೆಯೊಳಗೆ ಒಬ್ಬನೇ ಮೊಬೈಲ್ ಹಿಡಿದು ಆಟವಾಡುತ್ತಿದ್ದಾಗ ಚಿರತೆಯೊಂದು ಮನೆಯೊಳಗೆ ಪ್ರವೇಶಿಸಿದೆ, ಇದನ್ನು ಕಂಡ ಬಾಲಕ ಒಂದು ಚೂರೂ ಹೆದರದೆ ಚಾಣಾಕ್ಷತನದಿಂದ ಚಿರತೆಯನ್ನು ಮನೆಯೊಳಗೆ ಬಂಧಿಯಾಗಿಸಿದ್ದಾನೆ.
ಬಾಲಕ ಮನೆಯೊಳಗೇ ಸೋಫಾದ ಮೇಲೆ ಮೇಲೆ ಕುಳಿತು ಮೊಬೈಲ್ ನಲ್ಲಿ ವಿಡಿಯೋ ಗೇಮ್ ಆಡುತ್ತಿದ್ದ ಈ ವೇಳೆ ಚಿರತೆ ನೇರವಾಗಿ ಮನೆಯೊಳಗೆ ಪ್ರವೇಶ ಮಾಡಿದೆ ಆದರೆ ಬಾಗಿಲ ಬಳಿಯಲ್ಲೇ ಇದ್ದ ಬಾಲಕನನ್ನು ನೋಡಲಿಲ್ಲ ಹಾಗಾಗಿ ನೇರವಾಗಿ ಒಳಗಿನ ಕೊಠಡಿಗೆ ಪ್ರವೇಶ ಮಾಡಿದೆ ಇದನ್ನು ಕಂಡ ಬಾಲಕ ಚಿರತೆ ಒಳಗಿನ ಕೊಠಡಿಗೆ ಪ್ರವೇಶ ಮಾಡುತ್ತಿದ್ದಂತೆ ನಿಧಾನವಾಗಿ ಮನೆಯಿಂದ ಹೊರ ಬಂದ ಬಾಲಕ ಮನೆಯ ಮುಖ್ಯ ಬಾಗಿಲನ್ನು ಮುಚ್ಚಿದ್ದಾನೆ ಆ ಬಳಿಕ ಅಲ್ಲಿನ ನೆರೆಹೊರೆಯವರಲ್ಲಿ ವಿಚಾರ ತಿಳಿಸಿದ್ದಾನೆ ಕೂಡಲೇ ಎಚ್ಚೆತ್ತ ಅಕ್ಕಪಕ್ಕದವರು ಮನೆಯ ಬಳಿ ಬಂದು ಬಾಗಿಲು ಭದ್ರಪಡಿಸಿದ್ದಾರೆ. ಆ ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಕಿಟಕಿಯ ಮೂಲಕ ಚಿರತೆಯನ್ನು ಕಂಡಿದ್ದಾರೆ ಈ ವೇಳೆ ಚಿರತೆ ಮನೆಯೊಳಗೆ ಆಚೆ ಈಚೆ ಹೋಗುವುದು ಕಂಡು ಬಂದಿದೆ ಕೂಡಲೇ ಅರಣ್ಯ ಇಲಾಖೆ ಸಿಬಂದಿ ಚಿರತೆಗೆ ಅರಿವಳಿಕೆ ಮದ್ದು ನೀಡಿದ್ದಾನೆ ಇದರಿಂದ ನಿದ್ರೆಗೆ ಜಾರಿದ ಚಿರತೆಯನ್ನು ಕೂಡಲೇ ರಕ್ಷಣೆ ಮಾಡಿ ಸುರಕ್ಷಿತ ಸ್ಥಳದಲ್ಲಿ ಬಿಟ್ಟಿದ್ದಾರೆ.
ಬಾಲಕನ ಅದೃಷ್ಟ ಚೆನ್ನಾಗಿತ್ತು:
ಮನೆಯೊಳಗೆ ಚಿರತೆ ಪ್ರವೇಶಿಸಿದರೂ ಬಾಲಕ ಒಂದು ಚೂರು ಸದ್ದು ಮಾಡದೆ ಸುಮ್ಮನೆ ಕುಳಿತಿದ್ದಿದ್ದರಿಂದ ಚಿರತೆಗೆ ಗೊತ್ತಾಗಲಿಲ್ಲ, ಅಲ್ಲದೆ ಮನೆಯೊಳಗೆ ಬಂದ ಚಿರತೆ ಆಚೆ ಈಚೆ ನೋಡದೆ ನೇರವಾಗಿ ಮನೆಯ ಒಳಗೆ ಪ್ರವೇಶಿಸಿದರಿಂದ ಚಿರತೆಗೂ ಬಾಲಕ ಇರುವುದು ಗೊತ್ತಾಗಲಿಲ್ಲ, ಕೂಡಲೇ ಮನೆಯ ಹೊರಗೆ ಬಂದು ಬಾಗಿಲು ಹಾಕಿ ಜೀವ ಉಳಿಸಿಕೊಂಡಿದ್ದಾನೆ.
ಇದನ್ನೂ ಓದಿ: Tragic: ನಿಂತಿದ್ದ ಟ್ರಕ್ಗೆ ಕಾರು ಢಿಕ್ಕಿ; ನವ ದಂಪತಿ ಸೇರಿ ಒಂದೇ ಕುಟುಂಬದ ಐವರು ದುರ್ಮರಣ
Malegaon, Maharashtra📍
A leopard came inside an office.
12 year old Mohit Ahire smartly locked door from outside until assistance arrived.
Leopard rescued. No body hurt.@rashtrapatibhvn must consider him for Rashtriya Bal Puraskar.
CC: @smritiirani pic.twitter.com/vWj4OfVyGo
— Shashank Shekhar Jha (@shashank_ssj) March 6, 2024
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.