![Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣ](https://www.udayavani.com/wp-content/uploads/2025/02/ga-1-415x216.jpg)
![Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣ](https://www.udayavani.com/wp-content/uploads/2025/02/ga-1-415x216.jpg)
Team Udayavani, Sep 18, 2024, 4:28 PM IST
ಹೈದರಾಬಾದ್: ರೋಗಿಯೊಬ್ಬರು ಆಸ್ಪತ್ರೆಯಲ್ಲಿ ಬೆಡ್ನಲ್ಲಿ ಮಲಗಿಕೊಂಡು ಸಿನಿಮಾ ನೋಡುತ್ತಿರುವ ವೇಳೆಯೇ ವೈದ್ಯರು ಯಶಸ್ವಿಯಾಗಿ ಮೆದುಳಿನ ಶಸ್ತ್ರ ಚಿಕಿತ್ಸೆ ನಡೆಸಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.
ಆಂಧ್ರಪ್ರದೇಶದ ಕಾಕಿನಾಡದಲ್ಲಿರುವ ಸರ್ಕಾರಿ ಜನರಲ್ ಆಸ್ಪತ್ರೆಯ ವೈದ್ಯರ ತಂಡವು ರೋಗಿಯೊಬ್ಬರ ಮೆದುಳಿನ ಶಸ್ತ್ರಚಿಕಿತ್ಸೆಯನ್ನು ನಡೆಸಿ ಯಶಸ್ವಿಯಾಗಿದೆ.
ಕೊತಪಲ್ಲಿಯ ಎ ಅನಂತಲಕ್ಷ್ಮಿ ಅವರಿಗೆ ತಮ್ಮ ಕೈಕಾಲುಗಳಲ್ಲಿ ಮರಗಟ್ಟುವಿಕೆ ಮತ್ತು ನಿರಂತರ ತಲೆನೋವಿನಂತಹ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಅವರ ಮೆದುಳಿನ ಎಡಭಾಗದಲ್ಲಿ 3.3 x 2.7 ಸೆಂ.ಮೀ ಗಡ್ಡೆಯಿರುವುದು ಪತ್ತೆಯಾಗಿತ್ತು. ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಚಿಕಿತ್ಸಾ ವೆಚ್ಚದ ಕಾರಣ ಅವರು ಶಸ್ತ್ರಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಯನ್ನು ಆಯ್ಕೆ ಮಾಡಿಕೊಂಡು ಶಸ್ತ್ರ ಚಿಕಿತ್ಸೆ ಮಾಡಿಸಲು ಮುಂದಾಗುತ್ತಾರೆ.
Doctors at the Government General Hospital, Kakinada for the first time removed a brain tumor from a female patient through “Awake Craniotomy” surgery, while showing her favorite movie Adhurs, starring Jr NTR.
The 55-year-old patient A Anantalakshmi from A… pic.twitter.com/s9jS9r7mGK
— NewsMeter (@NewsMeter_In) September 18, 2024
ಈ ಮೆದುಳಿನ ಶಸ್ತ್ರ ಚಿಕಿತ್ಸೆಗೆ ʼಅವೇಕ್ ಕ್ರಾನಿಯೊಟಮಿ’(Awake craniotomy) ಅಥವಾ ʼಅವೇಕ್ ಬ್ರೈನ್ ಸರ್ಜರಿʼ(Awake Brain Surgery) ಎಂದೂ ಕರೆಯುತ್ತಾರೆ. ಈ ಶಸ್ತ್ರ ಚಿಕಿತ್ಸಾ ವಿಧಾನದಲ್ಲಿ ರೋಗಿಯು ಎಚ್ಚರವಾಗಿರಬೇಕಾಗುತ್ತದೆ. ಮೆದುಳಿನ ನರಗಳಿಗೆ ಯಾವುದೇ ರೀತಿಯ ಹಾನಿಯಾಗದಂತೆ ಎಚ್ಚರಿಕೆಯಿಂದ ಈ ಸರ್ಜರಿಯನ್ನು ನಡೆಸಬೇಕಾಗುತ್ತದೆ. ಆಗಾಗ ರೋಗಿಯ ಬಳಿ ಶಸ್ತ್ರಚಿಕಿತ್ಸಾ ತಂಡ ಸಂವಹನ ನಡೆಸಬೇಕಾಗುತ್ತದೆ.
ಹೀಗಾಗಿ ರೋಗಿ ಎಚ್ಚರದಿಂದ ಇರಬೇಕಾಗುವ ಹಿನ್ನೆಲೆಯಲ್ಲಿ, ಅನಂತಲಕ್ಷ್ಮಿ ಸರ್ಜರಿ ನಡೆಸುವಾಗ ಎಚ್ಚರದಿಂದ ಇದ್ದು ತನ್ನ ನೆಚ್ಚಿನ ಹೀರೋ ಜೂ.ಎನ್ ಟಿಆರ್ ಅವರ ʼಅಧುರ್ಸ್ʼ ಸಿನಿಮಾವನ್ನು ನೋಡಿದ್ದಾರೆ.
ಮೂರು ಗಂಟೆಗಳ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸ್ವಲ್ಪ ಸಮಯದ ನಂತರ ರೋಗಿಯು ಎದ್ದು ಉಪಹಾರ ಸೇವಿಸಲು ಸಾಧ್ಯವಾಯಿತು. ವರದಿಗಳ ಪ್ರಕಾರ, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಐದು ದಿನಗಳಲ್ಲಿ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ.
ಸದ್ಯ ಅವರು ಸಿನಿಮಾ ವೀಕ್ಷಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ತೆಲುಗು ಗೊತ್ತಿಲ್ಲದ ನಾಯಕಿಯರನ್ನು ಬೆಂಬಲಿಸುತ್ತೇವೆ – ವಿವಾದ ಎಬ್ಬಿಸಿದ ನಿರ್ಮಾಪಕನ ಹೇಳಿಕೆ
Tollywood: ಅಲ್ಲು ಅರ್ಜುನ್ಗೆ ಅಟ್ಲಿ ಆ್ಯಕ್ಷನ್ ಕಟ್: ಶ್ರೀದೇವಿ ಪುತ್ರಿ ನಾಯಕಿ?
Tollywood: ರಾತ್ರೋರಾತ್ರಿ ಖ್ಯಾತ ಟಾಲಿವುಡ್ ನಟ ಪೊಲೀಸ್ ವಶಕ್ಕೆ
Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್ ಹಿಟ್ ಕಂಡ ಶ್ರೀವಲ್ಲಿ
Kollywood: ಬರ್ತ್ ಡೇಗೆ ʼಮದರಾಸಿʼಯಾಗಿ ಮಾಸ್ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್
You seem to have an Ad Blocker on.
To continue reading, please turn it off or whitelist Udayavani.