Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ


Team Udayavani, Jul 27, 2024, 2:38 PM IST

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

ಮುಂಬಯಿ: ದಿನ ಬೆಳಗಾದರೆ ಜನ ಮೊದಲು ಎದ್ದು ನೋಡುವುದು ಮೊಬೈಲ್… ಅದು ಗಂಟೆ ನೋಡಲು ಆಗಿರಬಹುದು ಅಥವಾ ಬೇರೆಯಾವುದೇ ವಿಚಾರಗಳೂ ಆಗಿರಬಹುದು ಆಮೇಲೆ ಉಳಿದ ಕೆಲಸ, ಹಾಗಾಗಿ ಮೊಬೈಲ್ ಗೀಳು ಎಲ್ಲರ ಮೇಲೂ ಪ್ರಭಾವ ಬೀರಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.

ಇದರ ಬೆನ್ನಲ್ಲೇ ಯುವಕ, ಯುವತಿಯರಲ್ಲಿ ರೀಲ್ಸ್ ಹುಚ್ಚಾಟ ಹೆಚ್ಚಾಗತೊಡಗಿದೆ ತಾವು ಹೋದಲ್ಲೆಲ್ಲಾ ಸಣ್ಣ ಸಣ್ಣ ವಿಡಿಯೋ ಕ್ಲಿಪ್ಪಿಂಗ್ಸ್ ಮಾಡಿ ಅಪ್ ಲೋಡ್ ಮಾಡುವುದು ಅಥವಾ ಬೇರೆ ರೀಲ್ಸ್ ಗಳನ್ನು ನೋಡುವುದರಲ್ಲೇ ಹೆಚ್ಚಿನ ಸಮಯಗಳನ್ನು ಕಳೆಯುತ್ತಾರೆ, ಇನ್ನೂ ಕೆಲವರು ರೀಲ್ಸ್ ಗಾಗಿ ತಮ್ಮ ಜೀವವನ್ನೇ ಅಪಾಯಕ್ಕೆ ಸಿಲುಕಿಸಿದ್ದೂ ಉಂಟು ಇದಕ್ಕೆ ಒಂದು ಉದಾಹರಣೆ ಮುಂಬೈ ಮೂಲದ ಫರ್ಹಾತ್ ಎಂಬ ಯುವಕ.

ಈತನಿಗೆ ರೀಲ್ಸ್ ಮಾಡುವ ಹುಚ್ಚು ಅದರಂತೆ ತನ್ನದೇ ಆದ ಅಕೌಂಟ್ ಕ್ರಿಯೇಟ್ ಮಾಡಿ ಅದರಲ್ಲಿ ಅನೇಕ ರೀಲ್ಸ್ ಗಳನ್ನು ಅಪ್ ಲೋಡ್ ಮಾಡುತ್ತಿದ್ದ ಇತ್ತೀಚಿನ ದಿನಗಳಲ್ಲಿ ಆತನ ಒಂದು ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು ಅದು ಯಾವುದೆಂದರೆ ಚಲಿಸುತ್ತಿರುವ ರೈಲಿನ ಬಾಗಿಲಿನಲ್ಲಿ ನೇತಾಡುವ ವಿಡಿಯೋ. ಇದು ವೈರಲ್ ಆಗುತ್ತಿದ್ದಂತೆ ರೈಲ್ವೆ ಪೊಲೀಸರು ಯುವಕನ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ ಅಲ್ಲದೆ ಆತ ನೆಲೆಸಿರುವ ಪ್ರದೇಶದ ಜಾಡು ಹಿಡುದು ಹೋದ ಪೊಲೀಸರು ಆತನ ಸ್ಥಿತಿಯನ್ನು ಕಂಡು ದಂಗಾಗಿದ್ದಾರೆ.

ಚಲಿಸುತ್ತಿದ್ದ ರೈಲಿನಲ್ಲಿ ರೀಲ್ಸ್ ಮಾಡಲು ಹೋಗಿ ಅಯತಪ್ಪಿ ಬಿದ್ದು ಎಡ ಕೈ, ಎಡ ಕಾಲು ಎರಡನ್ನೂ ಕಳೆದುಕೊಂಡಿರುವ ವಿಚಾರ ಆತನ ಮನೆಗೆ ಭೇಟಿ ನೀಡಿದ ಬಳಿಕ ಪೊಲೀಸರಿಗೆ ಗೊತ್ತಾಗಿದೆ, ಆತನ ಸ್ಥಿತಿಯನ್ನು ಕಂಡ ಪೊಲೀಸರೇ ಶಾಕ್ ಗೆ ಒಳಗಾಗಿದ್ದಾರೆ.

ಅಲ್ಲದೆ ಪೊಲೀಸರ ಬಳಿ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾನೆ ಜೊತೆಗೆ ಯಾರೂ ಕೂಡ ಅಪಾಯಕಾರಿ ರೀಲ್ಸ್ ಮಾಡುವ ಹುಚ್ಚಾಟಕ್ಕೆ ಕೈಹಾಕಿ ನಾನು ಅನುಭವಿಸುತ್ತಿರುವ ನರಕಯಾತನೆ ಸಾಕು ನೀವು ಮಾಡಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾನೆ. ಯುವಕನ ಹೇಳಿಕೆಯನ್ನು ವಿಡಿಯೋ ಮಾಡಿದ ರೈಲ್ವೆ ಪೊಲೀಸರು ‘X’ ನಲ್ಲಿ ಹಂಚಿಕೊಂಡಿದ್ದು ರೈಲುಗಳಲ್ಲಿ ಸಾಹಸ ಪ್ರದರ್ಶನ ಮಾಡುವುದು ಅಪಾಯದ ಜೊತೆಗೆ ನಿಷಿದ್ಧ, ಒಂದು ವೇಳೆ ಇಂತಹ ತಪ್ಪು ಕೆಲಸಕ್ಕೆ ಕೈ ಹಾಕಿದರೆ ಕಠಿಣ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಸಂದೇಶ ನೀಡಿದ್ದಾರೆ.

ಟಾಪ್ ನ್ಯೂಸ್

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.