ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್,ದುಬಾರಿ ಕಾರು; ಈತ ಶ್ರೀಮಂತ ಕಳ್ಳ
Team Udayavani, Jul 6, 2024, 6:04 PM IST
ಗುಜರಾತ್: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಬಂಧಿತವಾಗಿರುವ ಕಳ್ಳನ ಹಿನ್ನೆಲೆಯನ್ನು ಕೇಳಿ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.
ಗುಜರಾತ್ ಪೊಲೀಸರು ಇತ್ತೀಚೆಗೆ ವಾಪಿಯಲ್ಲಿ ನಡೆದ 1 ಲಕ್ಷ ರೂಪಾಯಿಯ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ರೋಹಿತ್ ಕನುಭಾಯಿ ಸೋಲಂಕಿ ಎಂಬ ಕಳ್ಳನನ್ನು ಬಂಧಿಸಿದ್ದರು. ಕಳ್ಳತನ ವಿಚಾರದ ಬಗ್ಗೆ ತನಿಖೆ ನಡೆಸಿದಾಗ ಬೆಳಕಿಗೆ ಬಂದ ಮಾಹಿತಿಯನ್ನು ಕೇಳಿ ಪೊಲೀಸರು ಬೆಚ್ಚಿ ಬಿದ್ದಿದ್ದಾರೆ.
ಅಂತಿಂಥ ಕಳ್ಳ ಇವನಲ್ಲ..: ಪೊಲೀಸರು ರೋಹಿತ್ ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ಈತನ ಬಗ್ಗೆ ಇನ್ನಷ್ಟು ಮಾಹಿತಿ ಹೊರಬಿದ್ದಿದೆ. ರೋಹಿತ್ ಇದುವರೆಗೆ 19 ದರೋಡೆಗಳನ್ನು ಮಾಡಿದ್ದಾನೆ. ಐಷಾರಾಮಿ ಜೀವನಶೈಲಿಯನ್ನು ಹೊಂದಿದ್ದಾನೆ. ಇದಲ್ಲದೆ ಈತ ಮುಂಬೈನ ಮುಂಬ್ರಾ ಪ್ರದೇಶದಲ್ಲಿ 1 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅದ್ದೂರಿ ಫ್ಲಾಟ್ನಲ್ಲಿ ವಾಸಿಸುತ್ತಿದ್ದ. ಈತ ದುಬಾರಿ ಆಡಿ ಕಾರನ್ನು ಓಡಿಸುತ್ತಿದ್ದ ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.
19 ದರೋಡೆ ಪ್ರಕರಣದಲ್ಲಿ ವಲ್ಸಾದ್ನಲ್ಲಿ ಮೂರು, ಸೂರತ್ನಲ್ಲಿ ಒಂದು, ಪೋರಬಂದರ್ನಲ್ಲಿ ಒಂದು, ಸೆಲ್ವಾಲ್ನಲ್ಲಿ ಒಂದು, ತೆಲಂಗಾಣದಲ್ಲಿ ಎರಡು, ಆಂಧ್ರಪ್ರದೇಶದಲ್ಲಿ ಎರಡು, ಮಧ್ಯಪ್ರದೇಶದಲ್ಲಿ ಎರಡು ಮತ್ತು ಮಹಾರಾಷ್ಟ್ರದಲ್ಲಿ ಒಂದು. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಲಂಚದ ಮೂಲಕ ಇನ್ನೂ ಆರು ಕಳ್ಳತನ ಮಾಡಿರುವುದಾಗಿ ಈತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಮುಸ್ಲಿಂ ಯುವತಿಯನ್ನು ಮದುವೆಯಾಗಲು ಈತ ತನ್ನ ಹೆಸರನ್ನು ಹೆಸರನ್ನು ಅರ್ಹಾನ್ ಎಂದು ಬದಲಾಯಿಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಕಳ್ಳತನ ಮಾಡಲು ಸೋಲಂಕಿ ಅವರು ಕಳ್ಳತನ ಮಾಡಲು ಐಷಾರಾಮಿ ಹೋಟೆಲ್ಗಳಲ್ಲಿ ತಂಗುತ್ತಿದ್ದ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ. ಹಗಲಿನಲ್ಲಿ ಹೋಟೆಲ್ ಕ್ಯಾಬ್ಗಳನ್ನು ಬುಕ್ ಮಾಡುತ್ತಿದ್ದ. ಕಳ್ಳತನವನ್ನು ಯೋಜಿಸಲು ಹಗಲಿನಲ್ಲಿ ತಿರುಗಾಡಿ ಸ್ಥಳವನ್ನು ಗುರುತು ಮಾಡಿಕೊಳ್ಳುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿ ಮುಂಬೈನ ಡ್ಯಾನ್ಸ್ ಬಾರ್ ಮತ್ತು ನೈಟ್ಕ್ಲಬ್ಗಳಲ್ಲಿ ಪಾರ್ಟಿ ಮಾಡುತ್ತಿದ್ದ. ಈತ ಮಾದಕ ವ್ಯಸನಿಯೂ ಆಗಿದ್ದು, ಅದಕ್ಕಾಗಿ ತಿಂಗಳಿಗೆ 1.50 ಲಕ್ಷ ರೂ. ವ್ಯಯಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…
Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
Kadaba: ಕಾರು – ಬೈಕ್ ಅಪಘಾತ; ಸವಾರ ಮೃತ್ಯು
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.