![Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು](https://www.udayavani.com/wp-content/uploads/2024/07/karavali-415x229.jpg)
Masala dosa: ಮಸಾಲೆ ದೋಸೆಯೊಂದಿಗೆ ಸಾಂಬಾರ್ ನೀಡದ್ದಕ್ಕೆ ರೆಸ್ಟೋರೆಂಟ್ ಗೆ 3,500 ರೂ ದಂಡ
Team Udayavani, Jul 13, 2023, 4:41 PM IST
![TDY-17](https://www.udayavani.com/wp-content/uploads/2023/07/TDY-17-10-620x372.jpg)
ಪಾಟ್ನಾ: ಮಸಾಲೆ ದೋಸೆ ಜತೆ ಸಾಂಬಾರ್ ನೀಡದ ಕಾರಣಕ್ಕೆ ರೆಸ್ಟೋರೆಂಟ್ ವೊಂದಕ್ಕೆ ಗ್ರಾಹಕ ನ್ಯಾಯಾಲಯ 3,500 ರೂ.ಯ ದಂಡವನ್ನು ವಿಧಿಸಿರುವ ಘಟನೆ ಬಿಹಾರದ ಬಕ್ಸರ್ ನಲ್ಲಿ ನಡೆದಿದೆ.
ಎಲ್ಲಾ ಹೊಟೇಲ್ ನಲ್ಲಿ ಸಾಮಾನ್ಯವಾಗಿ ದೋಸೆಯೊಟ್ಟಿಗೆ ಸಾಂಬಾರ್ ಹಾಗೂ ಚಟ್ನಿ ಕೊಡುತ್ತಾರೆ. ಆದರೆ ಇಲ್ಲೊಂದು ಹೊಟೇಲ್ ಮಸಾಲೆ ದೋಸೆಯೊಂದಿಗೆ ಸಾಂಬಾರ್ ನೀಡದ್ದಕ್ಕೆ ದಂಡವನ್ನು ಕಟ್ಟುವ ಪಜೀತಿಗೆ ಸಿಲುಕಿದೆ.
ಘಟನೆ ವಿವರ: 2022 ರ ಆಗಸ್ಟ್ 15 ರಂದು ವಕೀಲ ಮನೀಶ್ ಗುಪ್ತಾ ಎನ್ನುವವರು ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಬಿಹಾರದ ಬಕ್ಸರ್ ನಲ್ಲಿರುವ ನಮಕ್ ರೆಸ್ಟೋರೆಂಟ್ ಗೆ ತೆರಳಿದ್ದಾರೆ. ಈ ವೇಳೆ 140 ರೂಪಾಯಿಯ ಸ್ಪೆಷಲ್ ಮಸಲಾ ದೋಸವನ್ನು ಆರ್ಡರ್ ಮಾಡಿದ್ದಾರೆ. ಸಾಮಾನ್ಯವಾಗಿ ಹೊಟೇಲ್ ನಲ್ಲಿ ಮಸಲಾ ದೋಸೆ ಜತೆ ಸಾಂಬರ್ ನೀಡುತ್ತಾರೆ. ಆದರೆ ತಾವು ಆರ್ಡರ್ ಮಾಡಿದ ಮಸಾಲೆ ದೋಸೆಯೊಟ್ಟಿಗೆ ಸಾಂಬಾರ್ ಇಲ್ಲದಿರುವುದನ್ನು ಮನೀಶ್ ಗಮನಿಸಿದ್ದಾರೆ.
ಇದನ್ನೂ ಓದಿ: ಆನ್ಲೈನ್ ಸಾಲದ ಕಿರುಕುಳಕ್ಕೆ ಸಿಲುಕಿದ ಕುಟುಂಬ: ಮಕ್ಕಳಿಗೆ ವಿಷವಿಕ್ಕಿ, ದಂಪತಿ ಆತ್ಮಹತ್ಯೆ
ಇದರ ಬಗ್ಗೆ ಪ್ರಶ್ನೆ ಮಾಡಲು ಮಾಲಕರ ಬಳಿ ತೆರಳಿದ್ದಾರೆ. ಈ ವೇಳೆ ರೆಸ್ಟೋರೆಂಟ್ ಮಾಲಕ ಸರಿಯಾಗಿ ಪ್ರತಿಕ್ರಿಯೆ ನೀಡದೆ. “”ನೀವು 140 ರೂ.ಗೆ ಇಡೀ ರೆಸ್ಟೋರೆಂಟ್ ಖರೀದಿಸಲು ಬಯಸಿದ್ದೀರಾ?”ಎಂದು ಉಡಾಫೆಯಾಗಿ ಉತ್ತರಿಸಿದ್ದಾರೆ.
ಇದಾದ ಬಳಿಕ ಮನೀಶ್ ರೆಸ್ಟೋರೆಂಟ್ ಗೆ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ. ಮಾಲೀಕರಿಂದ ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದಾಗ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರನ್ನೂ ನೀಡಿದ್ದಾರೆ.
11 ತಿಂಗಳ ಬಳಿಕ ಗ್ರಾಹಕ ಆಯೋಗದ ಅಧ್ಯಕ್ಷ ವೇದ್ ಪ್ರಕಾಶ್ ಸಿಂಗ್ ಮತ್ತು ಸದಸ್ಯ ವರುಣ್ ಕುಮಾರ್ ಅವರ ವಿಭಾಗೀಯ ಪೀಠವು ರೆಸ್ಟೋರೆಂಟ್ ನ್ನು ತಪ್ಪಿತಸ್ಥ ಎಂದು ಪರಿಗಣಿಸಿ, ರೂ 3,500 ದಂಡವನ್ನು ವಿಧಿಸಿದೆ.
ಸರಿಯಾದ ರೀತಿಯಲ್ಲಿ ರೆಸ್ಟೋರೆಂಟ್ ಅವರು ಪ್ರತಿಕ್ರಿಯೆ ನೀಡದೆ ಇರುವುದರಿಂದ ಅರ್ಜಿದಾರ ಮನೀಶ್ ಗುಪ್ತಾ ಅವರಿಗೆ “ಮಾನಸಿಕ, ದೈಹಿಕ ಮತ್ತು ಆರ್ಥಿಕ” ನೋವು ಉಂಟಾಗಿದೆ. ರೂ 1,500 ವ್ಯಾಜ್ಯ ವೆಚ್ಚ ಮತ್ತು ರೂ 2,000 ಮೂಲ ದಂಡ ಎಂಬುದಾಗಿ ದಂಡವನ್ನು ಎರಡು ಭಾಗಗಳಲ್ಲಿ ವಿಧಿಸಲಾಗಿದೆ.
ದಂಡವನ್ನುನಿಗದಿತ ಸಮಯದಲ್ಲಿ ಪಾವತಿ ಮಾಡದಿದ್ದರೆ, ದಂಡದ ಮೊತ್ತಕ್ಕೆ ರೆಸ್ಟೋರೆಂಟ್ನಿಂದ ಶೇಕಡಾ 8 ರಷ್ಟು ಬಡ್ಡಿಯನ್ನು ಸಹ ಪಾವತಿಸಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.
ಟಾಪ್ ನ್ಯೂಸ್
![Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು](https://www.udayavani.com/wp-content/uploads/2024/07/karavali-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![thief](https://www.udayavani.com/wp-content/uploads/2024/07/thief-150x84.jpg)
Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ
![Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ](https://www.udayavani.com/wp-content/uploads/2024/07/ayodhya-150x84.jpg)
Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ
![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-150x89.jpg)
Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ
![Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ](https://www.udayavani.com/wp-content/uploads/2024/07/rahul-3-150x84.jpg)
Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
MUST WATCH
ಹೊಸ ಸೇರ್ಪಡೆ
![Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು](https://www.udayavani.com/wp-content/uploads/2024/07/karavali-150x83.jpg)
Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು
![Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ](https://www.udayavani.com/wp-content/uploads/2024/07/kumata-150x93.jpg)
Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ
![Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!](https://www.udayavani.com/wp-content/uploads/2024/07/7-3-150x90.jpg)
Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!
![Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ](https://www.udayavani.com/wp-content/uploads/2024/07/6-3-150x90.jpg)
Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ
![Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?](https://www.udayavani.com/wp-content/uploads/2024/07/5-3-150x90.jpg)
Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.