Birthday: ರಸ್ತೆಯನ್ನೇ ಬ್ಲಾಕ್ ಮಾಡಿ ಹುಟ್ಟುಹಬ್ಬ ಆಚರಿಸಿದ ಪುಂಡರು… ವಿಡಿಯೋ ವೈರಲ್
Team Udayavani, May 31, 2024, 9:25 AM IST
ಲಕ್ನೋ: ರಸ್ತೆ ಮಧ್ಯದಲ್ಲೇ ಇಪ್ಪತ್ತಕ್ಕೂ ಹೆಚ್ಚು ಕಾರುಗಳನ್ನು ನಿಲ್ಲಿಸಿ ಹುಟ್ಟು ಹಬ್ಬ ಆಚರಿಸಿದ ವಿಚಿತ್ರ ಪ್ರಕರಣವೊಂದು ಲಕ್ನೋದಲ್ಲಿ ನಡೆದಿದ್ದು ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ವೀಡಿಯೊ ವೈರಲ್ ಆಗುತ್ತಿದ್ದಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ವಿಡಿಯೋದಲ್ಲಿ ಏನಿದೆ:
ವೈರಲ್ ಆಗಿರುವ ದೃಶ್ಯಗಳಲ್ಲಿ, ಏಕನಾ ಕ್ರೀಡಾಂಗಣದ ಬಳಿ ಇರುವ ಸರ್ವೀಸ್ ರಸ್ತೆಯಲ್ಲಿ ಸುಮಾರು 20ಕ್ಕೂ ಅಧಿಕ ಕಾರುಗಳು ನಿಂತಿರುವುದು ಕಾಣಬಹುದು ಅಲ್ಲದೆ ಕೆಲವರು ಕಾರಿನ ಮೇಲೆ ನಿಂತು ಸಂಭ್ರಮಿಸುತ್ತಿರುವುದು ಕಾಣಬಹುದು. ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇತರ ಕಾರಿನವರು ಈ ದೃಶ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ. ಇದು ಗುರುವಾರ ವೈರಲ್ ಆಗುತ್ತಿದ್ದಂತೆ ಪೊಲೀಸರು ಸ್ವಯಂಪ್ರೇರಿತರಾಗಿ ಕೇಸು ದಾಖಲಿಸಿಕೊಂಡಿದ್ದಾರೆ.
ವೈರಲ್ ವಿಡಿಯೋ ಸಂಬಂಧ ಹೇಳಿಕೆ ನೀಡಿರುವ ದಕ್ಷಿಣದ ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ಎಡಿಸಿಪಿ) ಶಶಾಂಕ್ ಸಿಂಗ್ ಇಲ್ಲಿನ ಕ್ರೀಡಾಂಗಣದ ಬಳಿ ಇರುವ ಸರ್ವಿಸ್ ರಸ್ತೆಯಲ್ಲಿ 20-25 ಕಾರುಗಳನ್ನು ನಿಲ್ಲಿಸಿರುವುದನ್ನು ವೈರಲ್ ವೀಡಿಯೊ ತೋರಿಸುತ್ತಿದೆ. ಈ ವ್ಯಕ್ತಿಗಳು ಹುಟ್ಟುಹಬ್ಬದ ಸಂಭ್ರಮಾಚರಣೆ ನಡೆಸುತ್ತಿರುವುದು ಗಮನಕ್ಕೆ ಬಂದಿದ್ದು ಪ್ರಕರಣ ಕೂಡ ದಾಖಲಾಗಿದೆ ಆದಷ್ಟು ಬೇಗ ತಪ್ಪಿತಸತರನ್ನು ವಶಕ್ಕೆ ಪಡೆಯಲಿದ್ದೇವೆ ಎಂದು ಹೇಳಿದ್ದಾರೆ.
लखनऊ – बीचों बीच रोड की गाड़ियां खड़ी कर जन्मदिन मनाया
➡मामले का वीडियो सोशल मीडिया में हुआ वायरल
➡यातायात नियम को ताख पर रखकर युवकों का कारनामा
➡थाना सुशांत गोल्फ सिटी क्षेत्र के ऐकाना स्टेडियम की घटना#Lucknow | #ViralNews | #BreakingNews | #LatestNewsUpdates | @lkopolice pic.twitter.com/GTQwEgn7A8— अमरेन्द्र पटेल बाहुबली (@amrendra566) May 30, 2024
सोशल मीडिया पर वायरल वीडियो जिसमें थाना सुशान्त गोल्फ सिटी क्षेत्रान्तर्गत लगभग 20 से अधिक गाड़ियो द्वारा रास्ता ब्लॉक करके वीडियो बनाने के सम्बन्ध में #ADCP_SOUTH द्वारा दी गई बाइट।#UPPolice #Lkopolice_On_Duty pic.twitter.com/D20f6HZmWE
— LUCKNOW POLICE (@lkopolice) May 30, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliment: ಸೆಂಗೋಲ್ ತೆರವುಗೊಳಿಸಿ ಎಂದ ಎಸ್ಪಿ ಸಂಸದ; ಬಿಜೆಪಿ ಆಕ್ಷೇಪ
Bihar ಮತ್ತೊಂದು ಸೇತುವೆ ಕುಸಿತ; ವಾರದೊಳಗೆ ನಾಲ್ಕನೇ ಘಟನೆ!
NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…
Miraculously Escapes: ರೀಲ್ಸ್ ಮಾಡಲು ಹೋಗಿ ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…
Emergency ಅಸಾಂವಿಧಾನಿಕ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಂಸತ್ ಜಂಟಿ ಅಧಿವೇಶನ
MUST WATCH
ಹೊಸ ಸೇರ್ಪಡೆ
R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು
Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್
Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ
Kiran Pahal: ವನಿತೆಯರ 400 ಮೀ.; ಕಿರಣ್ ಪಹಲ್ ಒಲಿಂಪಿಕ್ಸ್ ಗೆ ಅರ್ಹತೆ
MLA Harish Gowda: ನನಗೆ ಯಾರೂ ಹನಿಟ್ರ್ಯಾಪ್ ಮಾಡಲು ಸಾಧ್ಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.