![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Feb 16, 2023, 1:29 PM IST
ಜಮ್ಮು- ಕಾಶ್ಮೀರ: 4,080 ಕಿಮೀಗಳ ಭಾರತ್ ಜೋಡೋ ಯಾತ್ರೆಯು ಯಶಸ್ವಿ ಮುಕ್ತಾಯ ಕಂಡ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಲಿಡೇ ಮೂಡ್ಗೆ ಜಾರಿದ್ದಾರೆ. ಯಾತ್ರೆಯ ಬಳಿಕ ಸದನದಲ್ಲಿ ಕಾಣಿಸಿಕೊಂಡಿದ್ದ ರಾಹುಲ್ ಇದೀಗ ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್ನ ಪ್ರಸಿದ್ಧ ಸ್ಕೀಯಿಂಗ್ ಜಾಗಕ್ಕೆ ತೆರಳಿದ್ದಾರೆ.
ಕಣಿವೆ ನಾಡಿನಲ್ಲಿ ಎರಡು ದಿನದ ಪ್ರವಾಸದಲ್ಲಿರುವ ಕಾಂಗ್ರೆಸ್ ಸಂಸದನ ವಿಡಿಯೋಗಳು ಟ್ವಿಟರ್ನಲ್ಲಿ ಹರಿದಾಡುತ್ತಿದೆ. ಇದರಲ್ಲಿ ಅವರು ಹಿಮಾಚ್ಛಾದಿತ ಉತ್ತರ ಕಾಶ್ಮೀರದ ಗುಲ್ಮಾರ್ಗ್ ಪ್ರದೇಶದಲ್ಲಿ ಇರುವ ಬಗ್ಗೆ ಹೇಳಲಾಗಿದೆ.
“ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಕೊನೆಗೊಂಡ ಬಳಿಕ ರಾಹುಲ್ ಗಾಂಧಿ ಅವರು ತಮಗೆ ತಾವೇ ಉತ್ತಮ ಉಡುಗೊರೆಯನ್ನು ಆಯ್ದುಕೊಂಡಿದ್ದಾರೆ. ಅವರು ಕಾಶ್ಮೀರದ ಗುಲ್ಮಾರ್ಗ್ನಲ್ಲಿ ತಮ್ಮ ರಜೆಯನ್ನು ಕಳೆಯುತ್ತಿದ್ದಾರೆ” ಎಂದು ವ್ಯಕ್ತಿಯೊಬ್ಬರು ಟ್ವಿಟರ್ನಲ್ಲಿ ರಾಹುಲ್ ಗಾಂಧಿಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಫೆ. 15 ರಂದು ರಾಹುಲ್ ಗುಲ್ಮಾರ್ಗ್ಗೆ ತೆರಳುವೆ ದಾರಿ ಮಧ್ಯೆ ಕೊಂಚ ಹೊತ್ತು ಗಾಡಿ ನಿಲ್ಲಿಸಿದ್ದಾಗ ಯಾರೋ ಅವರ ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿತ್ತು.
ಜಾಲಿ ಮೂಡ್ನಲ್ಲಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಲು ಮನ ಮಾಡಲಿಲ್ಲ. ಕೇವಲ ʻನಮಸ್ಕಾರʼ ಎನ್ನುವ ಮೂಲಕ ಪ್ರಶ್ನೆಗಳಿಗೆ ಉತ್ತರಿಸದೆ ತೆರಳಿದ್ರು. ಅಷ್ಟೇ ಅಲ್ಲದೇ ಅಲ್ಲಿ ನೆರೆದಿದ್ದ ಪ್ರವಾಸಿಗರಿಗೆ ಸೆಲ್ಫಿಗೆ ಫೋಸ್ ಕೊಡುವ ಮೂಲಕ ಎಂಜಾಯ್ ಮಾಡಿದ್ದಾರೆ.
As a reward, Rahul Ji treating himself to a perfect vacation in Gulmarg after successful #BharatJodoYatra.#RahulGandhi@RahulGandhi pic.twitter.com/DDHCDluwCC
— Farhat Naik (@Farhat_naik_) February 15, 2023
On vacation, Rahul Gandhi Ji in Gulmarg, Jammu and Kashmir. pic.twitter.com/WXaRpPKBG3
— Ritu Choudhary (@RituChoudhryINC) February 15, 2023
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…
Jamui: ಸಾಲ ರಿಕವರಿಗೆ ಬಂದ ಏಜೆಂಟ್ ನನ್ನೇ ಮದುವೆಯಾದ ವಿವಾಹಿತ ಮಹಿಳೆ!
Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ
Malaysia; ಭಾರತ ಮೂಲದ ಮಹಿಳೆಯಿಂದ ಕೆಲಸಕ್ಕಾಗಿ ಪ್ರತಿದಿನ 700 ಕಿ.ಮೀ. ವಿಮಾನ ಯಾನ!
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.