ಭಾರತ್ ಜೋಡೋ ಯಾತ್ರೆ ಮುಕ್ತಾಯ… ಹಾಲಿಡೇ ಮೂಡ್ನಲ್ಲಿ ರಾಹುಲ್ ಗಾಂಧಿ
Team Udayavani, Feb 16, 2023, 1:29 PM IST
ಜಮ್ಮು- ಕಾಶ್ಮೀರ: 4,080 ಕಿಮೀಗಳ ಭಾರತ್ ಜೋಡೋ ಯಾತ್ರೆಯು ಯಶಸ್ವಿ ಮುಕ್ತಾಯ ಕಂಡ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಲಿಡೇ ಮೂಡ್ಗೆ ಜಾರಿದ್ದಾರೆ. ಯಾತ್ರೆಯ ಬಳಿಕ ಸದನದಲ್ಲಿ ಕಾಣಿಸಿಕೊಂಡಿದ್ದ ರಾಹುಲ್ ಇದೀಗ ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್ನ ಪ್ರಸಿದ್ಧ ಸ್ಕೀಯಿಂಗ್ ಜಾಗಕ್ಕೆ ತೆರಳಿದ್ದಾರೆ.
ಕಣಿವೆ ನಾಡಿನಲ್ಲಿ ಎರಡು ದಿನದ ಪ್ರವಾಸದಲ್ಲಿರುವ ಕಾಂಗ್ರೆಸ್ ಸಂಸದನ ವಿಡಿಯೋಗಳು ಟ್ವಿಟರ್ನಲ್ಲಿ ಹರಿದಾಡುತ್ತಿದೆ. ಇದರಲ್ಲಿ ಅವರು ಹಿಮಾಚ್ಛಾದಿತ ಉತ್ತರ ಕಾಶ್ಮೀರದ ಗುಲ್ಮಾರ್ಗ್ ಪ್ರದೇಶದಲ್ಲಿ ಇರುವ ಬಗ್ಗೆ ಹೇಳಲಾಗಿದೆ.
“ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಕೊನೆಗೊಂಡ ಬಳಿಕ ರಾಹುಲ್ ಗಾಂಧಿ ಅವರು ತಮಗೆ ತಾವೇ ಉತ್ತಮ ಉಡುಗೊರೆಯನ್ನು ಆಯ್ದುಕೊಂಡಿದ್ದಾರೆ. ಅವರು ಕಾಶ್ಮೀರದ ಗುಲ್ಮಾರ್ಗ್ನಲ್ಲಿ ತಮ್ಮ ರಜೆಯನ್ನು ಕಳೆಯುತ್ತಿದ್ದಾರೆ” ಎಂದು ವ್ಯಕ್ತಿಯೊಬ್ಬರು ಟ್ವಿಟರ್ನಲ್ಲಿ ರಾಹುಲ್ ಗಾಂಧಿಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಫೆ. 15 ರಂದು ರಾಹುಲ್ ಗುಲ್ಮಾರ್ಗ್ಗೆ ತೆರಳುವೆ ದಾರಿ ಮಧ್ಯೆ ಕೊಂಚ ಹೊತ್ತು ಗಾಡಿ ನಿಲ್ಲಿಸಿದ್ದಾಗ ಯಾರೋ ಅವರ ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿತ್ತು.
ಜಾಲಿ ಮೂಡ್ನಲ್ಲಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಲು ಮನ ಮಾಡಲಿಲ್ಲ. ಕೇವಲ ʻನಮಸ್ಕಾರʼ ಎನ್ನುವ ಮೂಲಕ ಪ್ರಶ್ನೆಗಳಿಗೆ ಉತ್ತರಿಸದೆ ತೆರಳಿದ್ರು. ಅಷ್ಟೇ ಅಲ್ಲದೇ ಅಲ್ಲಿ ನೆರೆದಿದ್ದ ಪ್ರವಾಸಿಗರಿಗೆ ಸೆಲ್ಫಿಗೆ ಫೋಸ್ ಕೊಡುವ ಮೂಲಕ ಎಂಜಾಯ್ ಮಾಡಿದ್ದಾರೆ.
As a reward, Rahul Ji treating himself to a perfect vacation in Gulmarg after successful #BharatJodoYatra.#RahulGandhi@RahulGandhi pic.twitter.com/DDHCDluwCC
— Farhat Naik (@Farhat_naik_) February 15, 2023
On vacation, Rahul Gandhi Ji in Gulmarg, Jammu and Kashmir. pic.twitter.com/WXaRpPKBG3
— Ritu Choudhary (@RituChoudhryINC) February 15, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Mumbai: ST ಮೀಸಲಾತಿ ಬೇಡಿಕೆ- 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್!
Fact Check: ಇರಾನ್ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್ ಬಂಕರ್ ನತ್ತ ಓಡಿದ್ದರೇ?
Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.