Video: ತ್ರಿವರ್ಣ ಧ್ವಜ ಹಿಡಿಯುತ್ತಲೇ ಹೃದಯಾಘಾತವಾಗಿ ವೇದಿಕೆಯಲ್ಲಿ ಕುಸಿದು ಬಿದ್ದ ವ್ಯಕ್ತಿ


Team Udayavani, Jun 1, 2024, 4:24 PM IST

Video: ತ್ರಿವರ್ಣ ಧ್ವಜ ಹಿಡಿಯುತ್ತಲೇ ಹೃದಯಾಘಾತವಾಗಿ ವೇದಿಕೆಯಲ್ಲಿ ಕುಸಿದು ಬಿದ್ದ ವ್ಯಕ್ತಿ

ಇಂದೋರ್:‌ ದೇಶಭಕ್ತಿ ಗೀತೆಗೆ ರಾಷ್ಟ್ರ ಧ್ವಜವನ್ನು ಹಿಡಿದು ವೇದಿಕೆಯಲ್ಲಿ ನೃತ್ಯ ಮಾಡುತ್ತಿರುವಾಗಲೇ ಹೃದಯಾಘಾತವಾಗಿ ಕುಸಿದುಬಿದ್ದು ಯೋಧನ ಧಿರಿಸು ಧರಿಸಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಇಂದೋರ್‌ನಲ್ಲಿ ಶುಕ್ರವಾರ(ಮೇ.31 ರಂದು) ನಡೆದಿದೆ.

ಬಲ್ವಿಂದರ್ ಸಿಂಗ್ ಛಾಬ್ರಾ ಮೃತ ವ್ಯಕ್ತಿ.

ನಗರದ ಫುಟಿ ಕೋಠಿ ಪ್ರದೇಶದ ಅಗ್ರಸೇನ್ ಧಾಮ್‌ನಲ್ಲಿ ಆಸ್ತಾ ಯೋಗ ಕ್ರಾಂತಿ ಅಭಿಯಾನ ಎಂಬ ಗುಂಪಿನಿಂದ ಉಚಿತ ಯೋಗ ಶಿಬಿರ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಲ್ವಿಂದರ್‌ ಅವರನ್ನು ಕರೆಯಲಾಗಿತ್ತು. ಬಲ್ವಿಂದರ್‌ ಹಲವು ಕಾರ್ಯಕ್ರಮಗಳಿಗೆ ಸಾಂಸ್ಕೃತಿಕವಾಗಿ ಮನರಂಜನೆ ನೀಡಲು ಹೋಗುತ್ತಾರೆ. ಹಾಗಾಗಿ ಈ ಯೋಗ ಶಿಬಿರಕ್ಕೆ ಅವರನ್ನು ಕರೆಯಲಾಗಿತ್ತು ಎಂದು ವರದಿ ತಿಳಿಸಿದೆ.

ವೇದಿಕೆಯಲ್ಲಿ ಬಲ್ವಿಂದರ್ ಯೋಧನ ಸಮವಸ್ತ್ರವನ್ನು ಧರಿಸಿ ದೇಶಭಕ್ತಿ ಗೀತೆ ‘ಮಾ ತುಜೆ ಸಲಾಮ್’ ಹಾಡಿಗೆ ರಾಷ್ಟ್ರ ಧ್ವಜವನ್ನು ಹಿಡಿದು ನೆರೆದಿದ್ದ ಜನರತ್ತ ಕೈ ಬೀಸುತ್ತಿದ್ದರು. ದೇಶ ಭಕ್ತಿಯ ಹಾಡಿಗೆ ನೃತ್ಯ ಮಾಡುತ್ತಿದ್ದ ಬಲ್ವಿಂದರ್‌ ಇದ್ದಕ್ಕಿದ್ದಂತೆ ಸ್ವಲ್ಪ ಕುಸಿದು ಬೀಳುವಂತೆ ಆಗಿದ್ದಾರೆ.

ತ್ರಿವರ್ಣ ಧ್ವಜ ಕೈಯಲ್ಲಿ ಹಿಡಿಯುತ್ತಲೇ ಬಲ್ವಿಂದರ್‌ ವೇದಿಕೆಯಲ್ಲಿ ಕುಸಿದು ಬಿದ್ದಿದ್ದಾರೆ. ಆದರೆ ಅವರು ಕುಸಿದು ಬಿದ್ದಿರುವುದು ನೃತ್ಯದ ಒಂದು ಭಾಗವೆಂದುಕೊಂಡಿದ್ದ ಅಲ್ಲಿರುವ ಜನರು ಚಪ್ಪಾಳೆಯನ್ನು ತಟ್ಟುತ್ತಲೇ ಇದ್ದರು.

ಆದರೆ ಇದಾದ ಕೆಲ ಸಮಯದ ಬಳಿಕ ಬಲ್ವಿಂದರ್ ಅವರಿಗೆ ಹೃದಯಾಘಾತವಾಗಿರುವುದು ಗೊತ್ತಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಆದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಬಲ್ವಿಂದರ್‌ ಈ ಹಿಂದೆ 2008 ರಲ್ಲಿ ಬೈಪಾಸ್ ಸರ್ಜರಿಗೆ ಒಳಗಾಗಿದ್ದರು.

 

ಟಾಪ್ ನ್ಯೂಸ್

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

crime (2)

Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!

1-wqewewq

Dubai; ಪತ್ನಿ ಬಿಕಿನಿ ಧರಿಸಲು 418 ಕೋಟಿ ರೂ.ಗೆ ದ್ವೀಪ ಖರೀದಿ!

Ujjain: ಮಹಾಕಾಲ್‌ ಮಹಾಲೋಕ್‌ ಆವರಣದಲ್ಲಿ ಹುಟ್ಟುಹಬ್ಬ ಆಚರಣೆ-10 ಸಿಬಂದಿ ಅಮಾನತು

Ujjain: ಮಹಾಕಾಲ್‌ ಮಹಾಲೋಕ್‌ ಆವರಣದಲ್ಲಿ ಹುಟ್ಟುಹಬ್ಬ ಆಚರಣೆ-10 ಸಿಬಂದಿ ಅಮಾನತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.