Video: ಏಕಾಏಕಿ ಮೈದಾನಕ್ಕೆ ಓಡಿ ಬಂದ ಅಭಿಮಾನಿ… ಬೆಚ್ಚಿ ಬಿದ್ದ ರೋಹಿತ್ ಶರ್ಮ
Team Udayavani, Apr 2, 2024, 10:14 AM IST
ಮುಂಬಯಿ: ಮೊನ್ನೆ ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ವಿರಾಟ್ ಕೊಹ್ಲಿ ಅಭಿಮಾನಿಯೊಬ್ಬ ಭದ್ರತಾ ವೈಫಲ್ಯದಿಂದ ಮೈದಾನಕ್ಕೆ ಪ್ರವೇಶಿಸಿ ಕೊಹ್ಲಿಯ ಕಾಲು ಹಿಡಿದ ಅಭಿಮಾನಿಯ ವಿಡಿಯೋ ವೈರಲ್ ಆಗುತ್ತಿದ್ದ ಬೆನ್ನಲ್ಲೇ ಮುಂಬಯಿಯಲ್ಲಿ ಅಂತದ್ದೇ ಘಟನೆಯೊಂದು ಬೆಳಕಿಗೆ ಬಂದಿದೆ.
ಐಪಿಎಲ್ ನ ಹದಿನಾಲ್ಕನೇ ಪಂದ್ಯಾಟ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿತ್ತು ಈ ವೇಳೆ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಪಂದ್ಯದ ವೇಳೆ ರೋಹಿತ್ ಶರ್ಮಾ ಅಭಿಮಾನಿಯೊಬ್ಬ ಇದ್ದಕಿದ್ದಂತೆ ಮೈದಾನಕ್ಕೆ ನುಗ್ಗಿದ್ದಾನೆ ಇದನ್ನು ಕಂಡ ರೋಹಿತ್ ಶರ್ಮ ಒಮ್ಮೆ ಬೆಚ್ಚಿ ಬಿದ್ದಿದ್ದಾರೆ ಬಳಿಕ ಅಭಿಮಾನಿ ರೋಹಿತ್ ಶರ್ಮ ಅವರನ್ನು ತಬ್ಬಿಕೊಂಡಿದ್ದಾನೆ ಇದಾದ ಬಳಿಕ ಅಲ್ಲೇ ಇದ್ದ ಇಶಾನ್ ಕಿಶನ್ ಅವರನ್ನೂ ತಬ್ಬಿ ಹಿಡಿದು ಸಂಭ್ರಮಪಟ್ಟಿದ್ದಾನೆ.
ಈ ವೇಳೆ ಮೈದಾನಕ್ಕೆ ಬಂದ ಭದ್ರತಾ ಸಿಬಂದಿ ಕೂಡಲೇ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾಟದ ವೇಳೆ ವಿರಾಟ್ ಕೊಹ್ಲಿ ಅಭಿಮಾನಿಯೊಬ್ಬ ಮೈದಾನಕ್ಕೆ ಓಡಿ ಬಂದು ಕೊಹ್ಲಿಯ ಕಾಲು ಹಿಡಿಯಲು ಹೋಗಿ ಬಳಿಕ ಭದ್ರತಾ ಸಿಬಂದಿ ಆತನನ್ನು ವಶಕ್ಕೆ ಪಡೆದು ಥಳಿಸಿದ್ದರು ಎಂದು ಹೇಳಲಾಗಿತ್ತು ಈ ಘಟನೆಯ ಬೆನ್ನಲ್ಲೇ ಮುಂಬೈ ನಲ್ಲಿ ಮತ್ತೊಂದು ಘಟನೆ ನಡೆದಿರುವುದು ಭದ್ರತಾ ಲೋಪ ಸಾಬೀತುಪಡಿಸಿದಂತಾಗಿದೆ.
ಇದನ್ನೂ ಓದಿ: Gayathri Siddeshwara: ಜಿಲ್ಲೆ ಅಭಿವೃದ್ಧಿಗೆ ಮೋದಿ ಲಕ್ಷೀ ಕಟಾಕ್ಷ : ಗಾಯತ್ರಿ ಸಿದ್ದೇಶ್ವರ
BHAI YEA SAB KYA HORA HAI YAHAN …#ipl #matchinterupp #crazyfan #mivsrr pic.twitter.com/SrAYGVNcBg
— SouL Mayavi (@soul_mayavi) April 1, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.