ಹಾವು ಕಡಿತದಿಂದ ಚಿಕಿತ್ಸೆ ಪಡೆದು ಮನೆಗೆ ಬಂದ ಮರುದಿನ ಮತ್ತೆ ಕಚ್ಚಿದ ಹಾವು: ವ್ಯಕ್ತಿ ಸಾವು
ಸಾವಿಗೆ ಕಾರಣವಾದ ಹಾವನ್ನು ಮೃತರ ಕುಟುಂಬಸ್ಥರು ಕೊಂದು ಹಾಕಿದ್ದಾರೆ.
Team Udayavani, Jul 1, 2023, 10:38 AM IST
ಜೈಪುರ: ಸಾವಿನ ದವಡೆಯಿಂದ ಆಗಷ್ಟೇ ಹೊರಗೆ ಬಂದ ವ್ಯಕ್ತಿಯೊಬ್ಬನಿಗೆ ಮತ್ತೆ ಸಾವೇ ಎದುರಾದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.!
ರಾಜಸ್ಥಾನದ ಜೋಧ್ಪುರ ಜಿಲ್ಲೆಯ ಮೆಹ್ರಾನ್ಗಢ ಗ್ರಾಮದ ನಿವಾಸಿ ಜಸಾಬ್ ಖಾನ್ (44) ಮೃತ ವ್ಯಕ್ತಿ.
ಜೂ.20 ರಂದು ಜಸಾಬ್ ಖಾನ್ ಅವರ ಕಾಲಿಗೆ ಹಾವು ಕಚ್ಚಿದೆ. ಹಾವು ಕಡಿತದಿಂದ ಅವರನ್ನು ಪೋಖ್ರಾನ್ನ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಯಲ್ಲಿ 4 ದಿನ ಚಿಕಿತ್ಸೆ ಪಡೆದ ಬಳಿಕ ಸಾವಿನಿಂದ ಅವರು ಪಾರಾಗಿದ್ದಾರೆ. ಚಿಕಿತ್ಸೆ ಪಡೆದು ಮನೆಗೆ ಬಂದ ಒಂದು ದಿನದ ಬಳಿಕ (ಜೂ.26 ರಂದು) ಅವರಿಗೆ ಮತ್ತೆ ಹಾವು ಕಚ್ಚಿದೆ. ಈ ಬಾರಿ ಅವರ ಮತ್ತೊಂದು ಕಾಲಿಗೆ ಹಾವು ಕಚ್ಚಿದೆ. ಮೊದಲ ಹಾವು ಕಡಿತದಿಂದ ಆಗಷ್ಟೇ ಗುಣಮುಖರಾಗಿ ಬಂದಿದ್ದ ಜಸಾಬ್ ಖಾನ್ ಈ ಬಾರಿಯ ಕಡಿತದಿಂದ ಮತ್ತಷ್ಟು ಗಂಭೀರವಾಗಿದ್ದರು. ಆದರೆ ಎರಡನೇ ಬಾರಿ ಹಾವಿನ ವಿಷ ಅವರ ದೇಹದೊಳಗೆ ಹೆಚ್ಚು ಹೊಕ್ಕಿದ ಪರಿಣಾಮ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ: Neeraj Chopra ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ: ಡೈಮಂಡ್ ಲೀಗ್ ಗೆದ್ದ ಬಂಗಾರದ ಹುಡುಗ
ಎರಡೂ ಬಾರಿಯೂ ಖಾನ್ ಅವರಿಗೆ ‘ಬಂಡಿ’ ಎಂದು ಕರೆಯಲ್ಪಡುವ ಹಾವು ಕಚ್ಚಿದೆ ಎಂದು ಹೇಳಲಾಗುತ್ತದೆ, ಇದು ಸಾಮಾನ್ಯವಾಗಿ ರಾಜಸ್ಥಾನದ ಮರುಭೂಮಿ ಪ್ರದೇಶಗಳಲ್ಲಿ ಕಂಡುಬರುವ ವೈಪರ್ನ ಉಪ-ಜಾತಿಯ ಹಾವಾಗಿದೆ ಎಂದು ವರದಿ ತಿಳಿಸಿದೆ.
ಜಸಾಬ್ ಅವರು ತಾಯಿ, ಪತ್ನಿ, ನಾಲ್ವರು ಪುತ್ರಿಯರು ಹಾಗೂ 5 ವರ್ಷದ ಪುತ್ರನನ್ನು ಅಗಲಿದ್ದಾರೆ. ಜಸಾಬ್ ಸಾವಿಗೆ ಕಾರಣವಾದ ಹಾವನ್ನು ಕುಟುಂಬಸ್ಥರು ಕೊಂದು ಹಾಕಿದ್ದಾರೆ.
ಈ ದುರಂತ ಮತ್ತು ವಿಲಕ್ಷಣ ಘಟನೆಯನ್ನು ಇದೀಗ ಭನಿಯಾನ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.