Viral: ತಮ್ಮಂದಿರ ಕೈಗೆ ರಾಖಿ ಕಟ್ಟಿ ಕೊನೆಯುಸಿರೆಳೆದ ಅಕ್ಕ.. ಭಾವುಕ ಕ್ಷಣದ ವಿಡಿಯೋ ವೈರಲ್
Team Udayavani, Aug 19, 2024, 2:50 PM IST
ತೆಲಂಗಾಣ: ಎಲ್ಲೆಡೆ ರಕ್ಷಾ ಬಂಧನದ ಹಬ್ಬ ಮನೆಮಾಡಿದೆ. ಅಣ್ಣ – ತಂಗಿ ಪ್ರೀತಿಯ ಬಂಧವನ್ನು ನಮ್ಮಲ್ಲಿ ಸಂಭ್ರಮದಲ್ಲಿ ಆಚರಿಸಲಾಗುತ್ತದೆ. ಸಹೋದರರಿಗೆ ರಾಖಿ ಕಟ್ಟಿದ ಕೆಲವೇ ಗಂಟೆಗಳಲ್ಲಿ ಸಹೋದರಿಯೊಬ್ಬಳು ಕೊನೆಯುಸಿರೆಳೆದ ದಾರುಣ ಘಟನೆ ತೆಲಂಗಾಣದಲ್ಲಿ ನಡೆದಿರುವುದು ವರದಿಯಾಗಿದೆ.
ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ (ಹೈದರಾಬಾದ್ನಿಂದ ಸುಮಾರು 200 ಕಿ.ಮೀ ದೂರ) ಕುಟುಂಬವೊಂದರಲ್ಲಿ ರಕ್ಷಾ ಬಂಧನದ ದಿನವೇ ದುರಂತ ಘಟನೆ ನಡೆದಿದೆ.
ನರಸಿಂಹುಲಪೇಟ್ ಮಂಡಲದ ಬುಡಕಟ್ಟು ಕುಗ್ರಾಮದ ನಿವಾಸಿಯಾಗಿರುವ ಅಪ್ರಾಪ್ತ ಬಾಲಕಿ ಕೊಡಾದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಪಾಲಿಟೆಕ್ನಿಕ್ ವಿದ್ಯಾರ್ಥಿನಿಯಾಗಿದ್ದಳು. ಯುವಕನೊಬ್ಬ ಆಕೆಯನ್ನು ಪ್ರೀತಿಸುವ ನೆಪದಲ್ಲಿ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಕಿರುಕುಳ ತಾಳಲಾರದೆ ಬಾಲಕಿ ತನ್ನ ಜೀವನವನ್ನೇ ಅಂತ್ಯಗೊಳಿಸಲು ನಿರ್ಧರಿಸಿ ವಿಷ ಸೇವಿಸಿದ್ದಾಳೆ.
ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆರೋಗ್ಯ ಹದಗೆಡುತ್ತಿದ್ದ ಬೆನ್ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ತನ್ನ ಸಹೋದರರನ್ನು ಆಸ್ಪತ್ರೆಗೆ ಕರೆಸಿ ಅವರ ಕೈಗೆ ರಾಖಿ ಕಟ್ಟಿದ್ದಾಳೆ. ಹಣೆಗೆ ಮುತ್ತಿಟ್ಟು ತನ್ನ ಸಹೋದರರಿಗೆ ರಾಖಿ ಕಟ್ಟಿದ್ದಾಳೆ. ರಾಖಿ ಕಟ್ಟಿದ ಕೆಲವೇ ಗಂಟೆಗಳಲ್ಲಿ ಅಂದರೆ ಸೋಮವಾರ ಮುಂಜಾನೆ(ಆ.19ರಂದು) ಆಕೆ ಕೊನೆಯುಸಿರೆಳೆದಿದ್ದಾಳೆ.
View this post on Instagram
ಸಹೋದರನಿಗೆ ರಾಖಿ ಕಟ್ಟಿದ ಭಾವನಾತ್ಮಕ ಕ್ಷಣ ಮೊಬೈಲ್ನಲ್ಲಿ ಸೆರೆಯಾಗಿದೆ. ಕಿರುಕುಳ ನೀಡಿದ ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿ ನರಸಿಂಹಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.