![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Aug 19, 2024, 2:50 PM IST
ತೆಲಂಗಾಣ: ಎಲ್ಲೆಡೆ ರಕ್ಷಾ ಬಂಧನದ ಹಬ್ಬ ಮನೆಮಾಡಿದೆ. ಅಣ್ಣ – ತಂಗಿ ಪ್ರೀತಿಯ ಬಂಧವನ್ನು ನಮ್ಮಲ್ಲಿ ಸಂಭ್ರಮದಲ್ಲಿ ಆಚರಿಸಲಾಗುತ್ತದೆ. ಸಹೋದರರಿಗೆ ರಾಖಿ ಕಟ್ಟಿದ ಕೆಲವೇ ಗಂಟೆಗಳಲ್ಲಿ ಸಹೋದರಿಯೊಬ್ಬಳು ಕೊನೆಯುಸಿರೆಳೆದ ದಾರುಣ ಘಟನೆ ತೆಲಂಗಾಣದಲ್ಲಿ ನಡೆದಿರುವುದು ವರದಿಯಾಗಿದೆ.
ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ (ಹೈದರಾಬಾದ್ನಿಂದ ಸುಮಾರು 200 ಕಿ.ಮೀ ದೂರ) ಕುಟುಂಬವೊಂದರಲ್ಲಿ ರಕ್ಷಾ ಬಂಧನದ ದಿನವೇ ದುರಂತ ಘಟನೆ ನಡೆದಿದೆ.
ನರಸಿಂಹುಲಪೇಟ್ ಮಂಡಲದ ಬುಡಕಟ್ಟು ಕುಗ್ರಾಮದ ನಿವಾಸಿಯಾಗಿರುವ ಅಪ್ರಾಪ್ತ ಬಾಲಕಿ ಕೊಡಾದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಪಾಲಿಟೆಕ್ನಿಕ್ ವಿದ್ಯಾರ್ಥಿನಿಯಾಗಿದ್ದಳು. ಯುವಕನೊಬ್ಬ ಆಕೆಯನ್ನು ಪ್ರೀತಿಸುವ ನೆಪದಲ್ಲಿ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಕಿರುಕುಳ ತಾಳಲಾರದೆ ಬಾಲಕಿ ತನ್ನ ಜೀವನವನ್ನೇ ಅಂತ್ಯಗೊಳಿಸಲು ನಿರ್ಧರಿಸಿ ವಿಷ ಸೇವಿಸಿದ್ದಾಳೆ.
ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆರೋಗ್ಯ ಹದಗೆಡುತ್ತಿದ್ದ ಬೆನ್ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ತನ್ನ ಸಹೋದರರನ್ನು ಆಸ್ಪತ್ರೆಗೆ ಕರೆಸಿ ಅವರ ಕೈಗೆ ರಾಖಿ ಕಟ್ಟಿದ್ದಾಳೆ. ಹಣೆಗೆ ಮುತ್ತಿಟ್ಟು ತನ್ನ ಸಹೋದರರಿಗೆ ರಾಖಿ ಕಟ್ಟಿದ್ದಾಳೆ. ರಾಖಿ ಕಟ್ಟಿದ ಕೆಲವೇ ಗಂಟೆಗಳಲ್ಲಿ ಅಂದರೆ ಸೋಮವಾರ ಮುಂಜಾನೆ(ಆ.19ರಂದು) ಆಕೆ ಕೊನೆಯುಸಿರೆಳೆದಿದ್ದಾಳೆ.
View this post on Instagram
ಸಹೋದರನಿಗೆ ರಾಖಿ ಕಟ್ಟಿದ ಭಾವನಾತ್ಮಕ ಕ್ಷಣ ಮೊಬೈಲ್ನಲ್ಲಿ ಸೆರೆಯಾಗಿದೆ. ಕಿರುಕುಳ ನೀಡಿದ ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿ ನರಸಿಂಹಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.