![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 8, 2023, 2:43 PM IST
ಚೆನ್ನೈ: ನಮಗೆ ಬ್ಯಾಂಕ್ ಖಾತೆಯಲ್ಲಿ ಯಾವುದೇ ಕಾರಣವಿಲ್ಲದೆ ಹಣ ಕಡಿತವಾದರೆ, ಒಮ್ಮೆ ನಮ್ಮ ಖಾತೆ ಹ್ಯಾಕ್ ಆಗಿದೆ ಎಂದು ಗಾಬರಿಪಟ್ಟುಕೊಳ್ಳುತ್ತೇವೆ. ಆದರೆ ಅನಿರೀಕ್ಷಿತವಾಗಿ ನಮ್ಮ ಖಾತೆಗೆ ಹಣ ಬಂದರೆ ಏನಾಗಬಹುದು? ಅದು ಕೂಡ ಒಂದಲ್ಲ, ಎರಡಲ್ಲ, ಸಾವಿರಾರು ರೂಪಾಯಿ ಖಾತೆಗೆ ಬಂದು ಬಿದ್ದರೆ ಏನಾಗಬಹುದು?
ಅಂಥದ್ದೇ ಒಂದು ಘಟನೆ ಚೆನ್ನೈನಲ್ಲಿ ನಡೆದಿದೆ. ಚೆನ್ನೈನ ಫಾರ್ಮಸಿ ಉದ್ಯೋಗಿಯೊಬ್ಬರ ಖಾತೆಯಲ್ಲಿ ಕೋಟಿಗಟ್ಟಲೆ ಹಣ ಕಾಣಿಸಿಕೊಂಡಿದೆ.
ಚೆನ್ನೈನ ಫಾರ್ಮಸಿವೊಂದರಲ್ಲಿ ಕೆಲಸ ಮಾಡುತ್ತಿರುವ ಮುಹಮ್ಮದ್ ಇದ್ರಿಸ್ ಎನ್ನುವವರು ಶುಕ್ರವಾರ (ಅ.6 ರಂದು) ತನ್ನ ಕೋಟಕ್ ಮಹೀಂದ್ರಾ ಬ್ಯಾಂಕ್ ಖಾತೆಯಿಂದ 2,000 ರೂ.ಗಳನ್ನು ಸ್ನೇಹಿತರೊಬ್ಬರಿಗೆ ವರ್ಗಾವಣೆ ಮಾಡಿದ್ದಾರೆ.
ಹಣ ವರ್ಗಾವಣೆ ಮಾಡಿದ ಬಳಿಕ ತನ್ನ ಬ್ಯಾಂಕ್ ಬ್ಯಾಲೆನ್ಸ್ ನ್ನು ಚೆಕ್ ಮಾಡಿದ್ದಾರೆ. ಈ ವೇಳೆ ಅವರ ಬ್ಯಾಂಕ್ ಬ್ಯಾಲೆನ್ಸ್ ನೋಡಿ ಇದ್ರಿಸ್ ದಂಗಾಗಿದ್ದಾರೆ. ಏಕೆಂದರೆ ಜೀವನವಿಡೀ ದುಡಿದರೂ ಅವರು ಅಷ್ಟು ಹಣ ಗಳಿಸಲು ಸಾಧ್ಯವಾಗುತ್ತಿರಲಿಲ್ಲ. ಇದ್ರಿಸ್ ಅವರ ಖಾತೆಯಲ್ಲಿ 753 ಕೋಟಿ ರೂಪಾಯಿ ಬ್ಯಾಲೆನ್ಸ್ ತೋರಿಸಿದೆ.!
ಈ ಬಗ್ಗೆ ಬ್ಯಾಂಕ್ ಗೆ ಹೋಗಿ ಸಮಸ್ಯೆ ಕುರಿತು ವರದಿ ಮಾಡಿದ್ದಾರೆ. ಆ ಬಳಿಕ ಕೂಡಲೇ ಬ್ಯಾಂಕ್ ನವರು ಇದ್ರಿಸ್ ಅವರ ಖಾತೆಯನ್ನು ಸ್ಥಗಿತ ಮಾಡಿದ್ದಾರೆ.
ಚೆನ್ನೈನಲ್ಲಿ ಇಂತಹ ಘಟನೆಗಳು ನಡೆದಿರುವುದು ಇದೇ ಮೊದಲಲ್ಲ. ಈ ಹಿಂದೆ ರಾಜ್ಕುಮಾರ್ ಎಂಬ ಕ್ಯಾಬ್ ಚಾಲಕನ ಖಾತೆಯಲ್ಲಿ 9,000 ಕೋಟಿ ರೂ. ಬ್ಯಾಲೆನ್ಸ್ ತೋರಿಸಿತ್ತು.
ತಂಜಾವೂರಿನ ಗಣೇಶನ್ ಎಂಬ ವ್ಯಕ್ತಿ ತನ್ನ ಬ್ಯಾಂಕ್ ಖಾತೆಯಲ್ಲಿ 756 ಕೋಟಿ ರೂ.ಗಳನ್ನು ಕಂಡು ದಿಗ್ಭ್ರಮೆಗೊಂಡ ಮತ್ತೊಂದು ಘಟನೆ ಸಂಭವಿಸಿತ್ತು.
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…
Jamui: ಸಾಲ ರಿಕವರಿಗೆ ಬಂದ ಏಜೆಂಟ್ ನನ್ನೇ ಮದುವೆಯಾದ ವಿವಾಹಿತ ಮಹಿಳೆ!
Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ
Malaysia; ಭಾರತ ಮೂಲದ ಮಹಿಳೆಯಿಂದ ಕೆಲಸಕ್ಕಾಗಿ ಪ್ರತಿದಿನ 700 ಕಿ.ಮೀ. ವಿಮಾನ ಯಾನ!
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.