![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 30, 2023, 10:40 AM IST
ಅಹಮದಬಾದ್: ಐಪಿಎಲ್ ನ ರೋಚಕ ಫೈನಲ್ ಮುಕ್ತಾಯ ಕಂಡಿದೆ. ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 5ನೇ ಬಾರಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.
ಫೈನಲ್ ಪಂದ್ಯವನ್ನು ವೀಕ್ಷಿಸಲು ಮಳೆಯನ್ನು ಲೆಕ್ಕಿಸದೇ 75 ಸಾವಿರ ಮಂದಿ ಸ್ಟೇಡಿಯಂಗೆ ಬಂದಿದ್ದಾರೆ. ಪಂದ್ಯ ನಡೆಯುತ್ತಿರುವಾಗ ಜನಪ್ರಿಯ ಫುಡ್ ಡೆಲಿವರಿ ಸ್ವಿಗ್ಗಿ ಆ್ಯಪ್ ಮಾಡಿರುವ ಟ್ವೀಟ್ ವೈರಲ್ ಆಗಿದೆ.
ಪಂದ್ಯದ ವೇಳೆ ಪ್ರತಿ ನಿಮಿಷಕ್ಕೆ 212 ಬಿರಿಯಾನಿಗಳು ಆರ್ಡರ್ ಆಗಿವೆ. ಒಟ್ಟು 12 ಮಿಲಿಯನ್ ಬಿರಿಯಾನಿಗಳು ಫೈನಲ್ ಪಂದ್ಯದ ವೇಳೆ ಆರ್ಡರ್ ಆಗಿವೆ ಎಂದು ಸ್ವಿಗ್ಗಿ ಟ್ವೀಟ್ ಮಾಡಿದೆ.
ಇದರರೊಂದಿಗೆ ಮಾಡಿರುವ ಮತ್ತೊಂದು ಟ್ವೀಟ್ ವೈರಲ್ ಆಗಿದ್ದು, ನೆಟ್ಟಿಗರು ನಾನಾ ಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.
ಇದನ್ನೂ ಓದಿ:ನಿವೃತ್ತಿ ಘೋಷಣೆ ಮಾಡುವುದು ಸುಲಭ ಆದರೆ…: ಕ್ರಿಕೆಟ್ ವಿಶ್ವದ ಕುತೂಹಲ ತಣಿಸಿದ Dhoni ಉತ್ತರ
ಸ್ವಿಗ್ಗಿ ಇನ್ಸ್ಟಾಮಾರ್ಟ್ ನಲ್ಲಿ 2423 ಕಾಂಡೋಮ್ಗಳನ್ನು ಆರ್ಡರ್ ಮಾಡಿದ್ದಾರೆ ಎಂದು ಸಂಸ್ಥೆ ಟ್ವೀಟ್ ಮಾಡಿದೆ.
ಸ್ವಿಗ್ಗಿ ಇನ್ಸ್ಟಾಮಾರ್ಟ್ ಮೂಲಕ ಇದುವರೆಗೆ 2423 ಕಾಂಡೋಮ್ಗಳನ್ನು ವಿತರಿಸಲಾಗಿದೆ. ಇಂದು ರಾತ್ರಿ 22 ಕ್ಕೂ ಹೆಚ್ಚು ಆಟಗಾರರು ಆಡುತ್ತಿರುವಂತೆ ತೋರುತ್ತಿದೆ ಎಂದು ಕಾಂಡೋಮ್ ಕಂಪೆನಿಯೊಂದನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದು ವೈರಲ್ ಆಗಿದೆ.
ಈ ಟ್ವೀಟ್ 793.3 ಲಕ್ಷ ಜನರಿಗೆ ತಲುಪಿದ್ದು, 8,878 ಸಾವಿರ ಮಂದಿ ಲೈಕ್ ಮಾಡಿದ್ದಾರೆ.
“ಇದು ಸ್ವಿಗ್ಗಿಯ ನಿಜವಾದ ಮಟ್ಟ” ಎಂದು ಒಬ್ಬರು ರಿಟ್ವೀಟ್ ಮಾಡಿದ್ದಾರೆ. “ನನಗೆ 22 ಆಟಗಾರರ ಬಗ್ಗೆ ತಿಳಿದಿಲ್ಲ, ಆದರೆ ಇತರ 2423 ಆಟಗಾರರು ನಿಜವಾಗಿಯೂ ಸುರಕ್ಷಿತವಾಗಿ ಆಡುತ್ತಿದ್ದಾರೆ” ಎಂದು ಕಮೆಂಟ್ ಮಾಡಿದ್ದಾರೆ. “ಈ ಅಂಕಿಅಂಶಗಳನ್ನು ನೋಡಿದ ಬಳಿಕ ಸಿಂಗಲ್ಸ್ ಒಂದು ಬದಿಯಲ್ಲಿ ಕೂತು ಅಳುತ್ತಾರೆ” ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.
2423 condoms have been delivered via @SwiggyInstamart so far, looks like there are more than 22 players playing tonight 👀 @DurexIndia
— Swiggy (@Swiggy) May 29, 2023
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…
Jamui: ಸಾಲ ರಿಕವರಿಗೆ ಬಂದ ಏಜೆಂಟ್ ನನ್ನೇ ಮದುವೆಯಾದ ವಿವಾಹಿತ ಮಹಿಳೆ!
Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ
Malaysia; ಭಾರತ ಮೂಲದ ಮಹಿಳೆಯಿಂದ ಕೆಲಸಕ್ಕಾಗಿ ಪ್ರತಿದಿನ 700 ಕಿ.ಮೀ. ವಿಮಾನ ಯಾನ!
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.