Video… ಆನೆ ಜೊತೆ ಸೆಲ್ಫಿ ತೆಗೆಯಲು ಹೋಗಿ ಜೀವ ಕೈಯಲ್ಲಿ ಹಿಡಿದು ಓಡಿ ಬಂದ ಯುವಕರು


Team Udayavani, Jul 6, 2023, 2:00 PM IST

Video… ಆನೆ ಜೊತೆ ಸೆಲ್ಫಿ ತೆಗೆಯಲು ಹೋಗಿ ಜೀವ ಕೈಯಲ್ಲಿ ಹಿಡಿದು ಓಡಿ ಬಂದ ಯುವಕರು

ಉತ್ತರ ಪ್ರದೇಶ: ಕಾಡು ಪ್ರಾಣಿಗಳ ಜೊತೆ ಎಚ್ಚರದಿಂದ ಇರಬೇಕು ಎನ್ನುವುದು ಎಲ್ಲರಿಗೂ ಗೊತ್ತು ಯಾವ ಕಾಲದಲ್ಲಿ ಕಾಡು ಪ್ರಾಣಿಗಳು ಏನು ಮಾಡುತ್ತವೆ ಎಂದು ಹೇಳಲು ಸಾಧ್ಯವಿಲ್ಲ ಆದಷ್ಟು ಕಾಡು ಪ್ರಾಣಿಗಳಿಂದ ದೂರವಿರುವುದು ಸುರಕ್ಷಿತ. ಆದರೆ ಉತ್ತರ ಪ್ರದೇಶದ ದುಧ್ವಾ ರಾಷ್ಟ್ರೀಯ ಉದ್ಯಾನವನದಲ್ಲಿ ಆನೆಗಳ ಹಿಂಡು ರಸ್ತೆ ದಾಟುತ್ತಿದ್ದಾಗ ಮೂವರು ವ್ಯಕ್ತಿಗಳು ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ್ದಾರೆ ಈ ವೇಳೆ ಆನೆಗಳ ಹಿಂಡು ಈ ಮೂವರ ಮೇಲೆ ದಾಳಿಗೆ ಮುಂದಾದ ಘಟನೆ ನಡೆದಿದೆ.

ರಾಷ್ಟ್ರೀಯ ಉದ್ಯಾನದ ಬಳಿ ಆನೆಗಳ ಹಿಂಡು ಯುವಕರನ್ನು ಓಡಿಸಿಕೊಂಡು ಬಂದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜೀವ ಉಳಿಸಿಕೊಳ್ಳಲು ಮೂವರು ಎದ್ನೋ ಬಿದ್ನೋ ಎಂದು ಓಡಿ ಜೀವ ಉಳಿಸಿಕೊಂಡಿದ್ದಾರೆ.

ಕೆಲ ದಿನಗಳ ಹಿಂದೆ ಉತ್ತರ ಪ್ರದೇಶದ ದುಧ್ವಾ ರಾಷ್ಟ್ರೀಯ ಉದ್ಯಾನವನದ ಬಳಿ ಮೂವರು ಯುವಕರು ವಾಹನದಲ್ಲಿ ಬರುತ್ತಿದ್ದ ವೇಳೆ ಆನೆಗಳ ಹಿಂಡು ರಸ್ತೆ ದಾಟುತ್ತಿತ್ತು ಈ ವೇಳೆ ಮೂವರು ಯುವಕರು ಆನೆಗಳ ಜೊತೆ ಸೆಲ್ಫಿ ತೆಗೆಯಲು ಮುಂದಾಗಿದ್ದಾರೆ ಅದಕ್ಕಾಗಿ ಮೂವರು ಆನೆಗಳು ಇದ್ದ ಕಡೆ ತೆರಳಿದ್ದಾರೆ ಇದನ್ನು ದೂರದಲ್ಲಿ ಇದ್ದ ಇತರರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಇನ್ನೇನು ಸೆಲ್ಫಿ ತೆಗೆದುಕೊಳ್ಳಬೇಕು ಎನ್ನುವಷ್ಟರಲ್ಲಿ ಒಂದು ಆನೆ ಈ ಮೂವರನ್ನು ಅಟ್ಟಾಡಿಸಿಕೊಂಡು ಬಂದಿದೆ ಈ ವೇಳೆ ಮೂವರು ಜೀವ ಭಯದಲ್ಲಿ ಓಡಿ ಬಂದಿದ್ದಾರೆ ಓಡುವ ಭರದಲ್ಲಿ ಓರ್ವ ರಸ್ತೆಯಲ್ಲೇ ಬಿದ್ದಿದ್ದಾನೆ ಈ ವೇಳೆ ಆತನ ಮೊಬೈಲ್ ರಸ್ತೆಗೆ ಬಿದ್ದಿದೆ ಜೀವ ಭಯದಲ್ಲಿದ್ದ ಯುವಕ ಮೊಬೈಲ್ ಅಲ್ಲೇ ಬಿಟ್ಟು ಎದ್ದು ಓಡಿ ಬಂದು ಜೀವ ಉಳಿಸಿಕೊಂಡಿದ್ದಾನೆ.

ಈ ಎಲ್ಲ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಭಾರಿ ವೈರಲ್ ಆಗಿದೆ. ಆನೆಗಳನ್ನು ದೂರದಲ್ಲೇ ನೋಡಿ ಹೋಗುತ್ತಿದ್ದಾರೆ ಏನೂ ಆಗುತ್ತಿರಲಿಲ್ಲ ಆದರೆ ಅದರ ಹತ್ತಿರ ಹೋಗಿ ಅವುಗಳಿಗೆ ತೊಂದರೆ ಕೊಟ್ಟದ್ದಕ್ಕೆ ಕಾಡು ಪ್ರಾಣಿಗಳು ದಾಳಿಗೆ ಮುಂದಾಗಿವೆ.

ಇದನ್ನೂ ಓದಿ: Btown: ಅಂದು ಹಣಕ್ಕಾಗಿ ಬಟರ್‌ ಚಿಕನ್‌ ಮಾರಾಟ ಮಾಡುತ್ತಿದ್ದವ ಇಂದು ಬಾಲಿವುಡ್‌ನ ಸ್ಟಾರ್‌ ನಟ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

1-ewwwe

KTR ವಿರುದ್ಧದ ಪೋಸ್ಟ್‌ ತೆಗೆಯಿರಿ: ಸಚಿವೆಗೆ ಕೋರ್ಟ್‌

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.