![what if rain interrupts to icc t20 world cup final? What does the rule say?](https://www.udayavani.com/wp-content/uploads/2024/06/final-415x229.jpg)
Anegundi; ಕೆಂಪೇಗೌಡರನ್ನು ಬಂಧನದಲ್ಲಿಟ್ಟಿದ್ದ ಆನೆಗೊಂದಿ ಸೆರೆಮನೆ ಪತ್ತೆ
ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡರಿಗೆ ಶಿಕ್ಷೆಯಾಗಿದ್ದು ಯಾಕೆ?
Team Udayavani, Jun 26, 2024, 1:11 PM IST
![1-qweqewqe](https://www.udayavani.com/wp-content/uploads/2024/06/1-qweqewqe-620x398.jpg)
ಗಂಗಾವತಿ: ಯಲಹಂಕ ನಾಡಿನ ಪಾಳೇಗಾರ, ಆಧುನಿಕ ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡರು ಬಂಧನದಲ್ಲಿದ್ದ ಆನೆಗೊಂದಿಯ ಸೆರೆಮನೆ ಪತ್ತೆಯಾಗಿದೆ.
ಗಂಗಾವತಿಯ ಪ್ರಾಚ್ಯ ಇತಿಹಾಸ ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ್ ಅವರು ಹಲವಾರು ವರ್ಷಗಳಿಂದ ನಡೆಸಿದ ನಿರಂತರ ಶೋಧನೆಯಲ್ಲಿ ಅಂತಿಮವಾಗಿ ಆನೆಗೊಂದಿಯ ಜಿಂಜರ ಬೆಟ್ಟದಲ್ಲಿ ಸೆರೆಮನೆಯನ್ನು ಪತ್ತೆ ಹಚ್ಚಿದ್ದಾರೆ . ವಿಜಯನಗರ ಸಾಮ್ರಾಜ್ಯದ ನಿಷ್ಠಾವಂತ ಮಾಂಡಲಿಕರಾಗಿದ್ದ ಯಲಹಂಕ ನಾಡಪ್ರಭು ಕೆಂಪೇಗೌಡರು ಅಳಿಯ ರಾಮರಾಯನ ಕಾಲದಲ್ಲಿ ತನ್ನ ರಾಜ್ಯದಲ್ಲಿ ಉಂಟಾದ ಆರ್ಥಿಕ ದುಸ್ಥಿತಿಯನ್ನು ಸುಧಾರಿಸಲು ಮತ್ತು ಪ್ರಜೆಗಳ ಹಿತರಕ್ಷಣೆಗಾಗಿ ಸಾಮ್ರಾಟನ ಅನುಮತಿ ಪಡೆಯದೆ ಬೈರೇಶ್ವರ ಹೆಸರಿನ ಸ್ವಂತ ನಾಣ್ಯಗಳನ್ನು ಚಲಾಯಿಸಿದ್ದರು. ಇದರಿಂದ ಕೆರಳಿದ ಅಳಿಯ ರಾಮರಾಯ ಕೆಂಪೇಗೌಡರನ್ನು ರಾಜಧಾನಿ ವಿಜಯನಗರದಲ್ಲಿ ಜರುಗುತ್ತಿದ್ದ ದಸರಾ ಉತ್ಸವಕ್ಕೆ ಆಹ್ವಾನಿಸಿ, ಬಂಧಿಸಿ ಆನೆಗೊಂದಿ ಸೆರೆಮನೆಗೆ ತಳ್ಳುತ್ತಾನೆ. ಕೆಂಪೇಗೌಡರು ಪ್ರಸಕ್ತ ಶಕೆ 1560 ರಿಂದ 5 ವರ್ಷಗಳ ಕಾಲ ಆನೆಗೊಂದಿ ಸೆರೆಮನೆಯಲ್ಲಿ ಬಂಧನದಲ್ಲಿದ್ದರು. ಪ್ರಸಕ್ತ ಶಕೆ 1565ರಲ್ಲಿ ಭಾರಿ ದಂಡ ತೆತ್ತು ಬಿಡುಗಡೆಗೊಳಿಸಲಾಗಿತ್ತು.
ಈ ಸಂಗತಿಯನ್ನು ಮೈಸೂರ್ ಗ್ಯಾಜೆಟಿಯರ್ ನಲ್ಲಿ ಉಲ್ಲೇಖಿಸಿದ್ದಾರೆ (1997). ಕೆಂಪೇಗೌಡರು ಬಂಧನದಲ್ಲಿದ್ದ ಸೆರೆಮನೆ ಹುಡುಕಾಟ ನಡೆಸಿದ ಡಾ. ಕೋಲ್ಕಾರ್ ಸಾಂದರ್ಭಿಕ ಸನ್ನಿವೇಶಗಳನ್ನು ಅನುಲಕ್ಷಿಸಿ ಆನೆಗೊಂದಿಯ ಒಂಟಿ ಸಾಲು ಆನೆ ಸಾಲು ಎಂಬ ಕಟ್ಟಡವೇ ಆನೆಗೊಂದಿ ಸೆರೆಮನೆ ಇರಬೇಕೆಂದು ಅಂದಾಜಿಸಿದ್ದರು. ಆದರೆ ಆನೆಗೊಂದಿಯಲ್ಲಿ ಪ್ರಚಲಿತವಾಗಿರುವ ಮೌಖಿಕ ಹೇಳಿಕೆಗಳು ಕೆಂಪೇಗೌಡರು ಜಿಂಜರ ಬೆಟ್ಟದಲ್ಲಿ ಬಂಧನದಲ್ಲಿದ್ದರು ಎಂಬುದನ್ನು ಸೂಚಿಸುತ್ತಿದ್ದವು. ಆ ಮೌಖಿತ ಮಾಹಿತಿಯನ್ನು ಅನುಲಕ್ಷಿಸಿ ಬೆಟ್ಟವನ್ನು ಅಮೂಲಾಗ್ರವಾಗಿ ಪರಿಶೋಧಿಸಿದಾಗ ಬೆಟ್ಟದ ಮೇಲೆ ವಿಶಾಲವಾದ ಜಾಗದಲ್ಲಿ ಸುತ್ತಲೂ ರಕ್ಷಣಾ ಗೋಡೆಗಳು, ಅಲ್ಲಲ್ಲಿ ಕಾವಲು ಗೋಪುರಗಳು, ಕಾವಲುಗಾರರ ಮನೆಗಳು, ಸೈನಿಕರ ವಸತಿಗಳು, ಭದ್ರತಾ ಕಟ್ಟಡ ( ಸೆರೆಮನೆ), ಕಣಜ ಮತ್ತು ನೈಸರ್ಗಿಕ ನೀರಿನ ಕೊಳಗಳು ಕಂಡು ಬಂದವು ಮತ್ತು ಬೆಟ್ಟವು ಸುಮಾರು 400 ಮೀಟರ್ ಎತ್ತರವಾಗಿದ್ದು, ಮೇಲಿನ ಸ್ಥಳ ಅತ್ಯಂತ ಗೌಪ್ಯವಾಗಿದೆ.
ಕೆಳಗಿನಿಂದ ಮೇಲೆ ಈ ಎಲ್ಲಾ ಕಟ್ಟಡಗಳಿವೆ ಎಂದು ತಿಳಿಯುವುದೇ ಇಲ್ಲ ಹಾಗಾಗಿ ಈ ಎಲ್ಲಾ ಕಟ್ಟಡದ ಅವಶೇಷಗಳು ಅದುವೇ ಸೆರೆಮನೆ ಎಂಬುದನ್ನು ಬಿಂಬಿಸುತ್ತವೆ ಹಾಗಾಗಿ ಮೌಖಿಕ ಪರಂಪರೆ ಮತ್ತು ಕಟ್ಟಡಗಳ ಸಾಂದರ್ಭಿಕ ಸನ್ನಿವೇಶವನ್ನು ಅನುಲಕ್ಷಿಸಿ, ಆನೆಗೊಂದಿಯ ಜಿಂಜರಬೆಟ್ಟದ ಈ ಕಟ್ಟಡಗಳೇ ಕೆಂಪೇಗೌಡರು ಬಂಧನದಲ್ಲಿದ್ದ ವಿಜಯನಗರ ಕಾಲದ ಸೆರೆಮನೆ ಎಂದು ನಿರ್ಧರಿಸಲಾಗಿದೆ ಎಂದು ಡಾ. ಶರಣಬಸಪ್ಪ ಕೋಲ್ಕಾರ್ ತಿಳಿಸಿದ್ದಾರೆ.
ಈ ಸೆರೆಮನೆಯ ಬಗ್ಗೆ ರಾಜ್ಯ ಪ್ರಾಚ್ಯ ವಸ್ತು, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯು ಹಂಪಿ ಉತ್ಸವದ ಸಂದರ್ಭದಲ್ಲಿ ನಡೆಸಿದ ವಿಜಯನಗರ ಅಧ್ಯಯನ ವಿಚಾರ ಸಂಕಿರಣದಲ್ಲೂ ಪ್ರಬಂಧ ಮಂಡಿಸಿರುವುದಾಗಿ ಅವರು ತಿಳಿಸಿದ್ದಾರೆ.
ಕೆ.ನಿಂಗಜ್ಜ
ಟಾಪ್ ನ್ಯೂಸ್
![what if rain interrupts to icc t20 world cup final? What does the rule say?](https://www.udayavani.com/wp-content/uploads/2024/06/final-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![what if rain interrupts to icc t20 world cup final? What does the rule say?](https://www.udayavani.com/wp-content/uploads/2024/06/final-150x83.jpg)
ICC T20 World Cup; ಫೈನಲ್ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ? ನಿಯಮ ಏನು ಹೇಳುತ್ತದೆ?
![13-tn-sitharama](https://www.udayavani.com/wp-content/uploads/2024/06/13-tn-sitharama-150x90.jpg)
T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್. ಸೀತಾರಾಮ
![Gujarat: ಭಾರೀ ಮಳೆಗೆ ರಾಜ್ ಕೋಟ್ ಏರ್ ಪೋರ್ಟ್ ಟರ್ಮಿನಲ್ ನ ಕೆನೋಪಿ ಕುಸಿತ](https://www.udayavani.com/wp-content/uploads/2024/06/Kenop-150x90.jpg)
Gujarat: ಭಾರೀ ಮಳೆಗೆ ರಾಜ್ ಕೋಟ್ ಏರ್ ಪೋರ್ಟ್ ಟರ್ಮಿನಲ್ ನ ಕೆನೋಪಿ ಕುಸಿತ
![No problem anyone comes in front of Martin…: Producer Uday Mehta](https://www.udayavani.com/wp-content/uploads/2024/06/martin-150x83.jpg)
Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್ ಮೆಹ್ತಾ
![Swamijis should talk to High command about CM change: Chaluvarayaswamy](https://www.udayavani.com/wp-content/uploads/2024/06/chaluvata-150x83.jpg)
CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.