ಬಿಜೆಪಿ ನಿರ್ಣಯಗಳಲ್ಲಿ ಬಿ.ಎಲ್.ಸಂತೋಷ್ ಮತ್ತೆ ಮೇಲುಗೈ

ಜಗ್ಗೇಶ್ ಅಚ್ಚರಿ ಆಯ್ಕೆಗೂ ಇವರೇ ಮೂಲ

Team Udayavani, May 30, 2022, 12:25 PM IST

B.L.Santhosh

ಬೆಂಗಳೂರು : ರಾಜ್ಯಸಭೆಯ ಅಭ್ಯರ್ಥಿಯಾಗಿ ಜಗ್ಗೇಶ್ ಅಚ್ಚರಿ ಆಯ್ಕೆ, ವಿಧಾನಪರಿಷತ್ ಚುನಾವಣೆಯಲ್ಲಿ ” ವಂಶವಾದ” ಕ್ಕೆ ಅವಕಾಶವಿಲ್ಲ ಎಂಬ ಪಕ್ಷದ ಸಿದ್ಧಾಂತ ಅನುಷ್ಠಾನಕ್ಕೆ ಪಟ್ಟು ಸೇರಿದಂತೆ ರಾಜ್ಯ ಬಿಜೆಪಿಯ ಪ್ರಭಾ ವಲಯದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ನಿರ್ಧಾರಗಳೇ ಈಗ ಮೇಲುಗೈ ಪಡೆದುಕೊಂಡಿದೆ.

ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣಾ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ರಾಜ್ಯ ಬಿಜೆಪಿ ವಲಯದಲ್ಲಿ ಒಂದು ವಿಚಾರದ ಚರ್ಚೆ ಪ್ರಾರಂಭಗೊಂಡಿತ್ತು. ಅದರಲ್ಲೂ ವಿಶೇಷವಾಗಿ ಜಗನ್ನಾಥ ಭವನದ ಸುತ್ತಮುತ್ತ ಪಿಸುಮಾತಿನಲ್ಲಿ ಕಾಲಕಳೆಯುವ ಗುಂಪಿನ ಮಧ್ಯೆ ಈ ಸಂಗತಿ ಕೆಲ ದಿನಗಳ ಕಾಲ ಹಾಟ್ ಟಾಪಿಕ್ ಆಗಿ ಚಾಲ್ತಿಯಲ್ಲಿತ್ತು. “ಈ ಬಾರಿ ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತದೆ ಎಂಬುದು ಸಂತೋಷ್ ಜಿ ಹಾಗೂ ಹೈಕಮಾಂಡ್ ನಡುವಿನ ವಿಶ್ವಾಸದ ಮಟ್ಟದ ಅಳತೆಗೋಲಾಗಲಿದೆ. ದಿಲ್ಲಿ ಮೂಲಗಳ ಪ್ರಕಾರ ಸಂತೋಷ್ ಜಿ ಬಗ್ಗೆ ಮೋದಿ ಹಾಗೂ ಅಮಿತ್ ಶಾ ಅವರಿಗೆ ಹಳೆಯ ವಿಶ್ವಾಸ ಉಳಿದಿಲ್ಲ. ಹೀಗಾಗಿ ಸಂತೋಷ್ ಜಿ ಅವರ ಶಿಫಾರಸ್ಸಿಗೆ ಈ ಬಾರಿ ಒಪ್ಪಿಗೆ ಸಿಗುವುದು ಅನುಮಾನ” ಎಂಬ ವ್ಯಾಖ್ಯಾನಗಳು ಈ ಗುಂಪು ಚರ್ಚೆಯಲ್ಲಿ ವ್ಯಕ್ತವಾಗುತ್ತಿತ್ತು. ಆದರೆ ವಾಸ್ತವಕ್ಕೂ, ಪಕ್ಷದ ವಲಯದಲ್ಲಿ ಸುಳಿಯುವ ಗಾಳಿ ಸುದ್ದಿಗಳಿಗೂ ಯಾವುದೇ ಸಂಬಂಧ ಇರುವುದಿಲ್ಲ ಎಂಬುದು ಈಗ ಮತ್ತೆ ಸಾಬೀತಾಗಿದೆ.

ಇದನ್ನೂ ಓದಿ : ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಖಾನ್

ರಾಜ್ಯಸಭೆಗೆ ಜಗ್ಗೇಶ್ ಹೆಸರು ಅಂತಿಮಗೊಂಡಾಗ ಬಿಜೆಪಿಯ ಬಹುತೇಕರಿಗೆ ಅಚ್ಚರಿ ಕಾದಿತ್ತು. ಏಕೆಂದರೆ ಮಾಧ್ಯಮದಲ್ಲಿ ಚರ್ಚೆಯಾದ ಹೆಸರುಗಳಲ್ಲಿ ಜಗ್ಗೇಶ್ ಪ್ರಸ್ತಾಪವೇ ಇರಲಿಲ್ಲ. ಅಷ್ಟಕ್ಕೂ ಕೋರ್ ಕಮಿಟಿ ಸಭೆಯಲ್ಲಿ ಜಗ್ಗೇಶ್ ಹೆಸರನ್ನು ಪ್ರಸ್ತಾಪಿಸಲಾಗಿತ್ತೇ ? ಎಂಬುದರ ಬಗ್ಗೆ ಯೂ ಸ್ಪಷ್ಟತೆ ಇಲ್ಲ. ಆದರೆ ಕೋರ್ ಕಮಿಟಿ ಸಭೆ ನಡೆದ ದಿನ ಜಗ್ಗೇಶ್ ಪಕ್ಷದ ಕಚೇರಿಯಲ್ಲಿದ್ದರು ! ಆದರೆ ಹಳೆ ಮೈಸೂರು ಭಾಗದಲ್ಲಿ ರಾಜಕೀಯ ಸಮೀಕರಣ ದೃಷ್ಟಿಯಿಂದ ಜಗ್ಗೇಶ್ ನೇಮಕ ಸೂಕ್ತ ಎಂದು ಖುದ್ದು ಬಿ.ಎಲ್.ಸಂತೋಷ್ ಅವರೇ ವರಿಷ್ಠರಿಗೆ ಮನದಟ್ಟು ಮಾಡಿದ್ದರಿಂದ ಈ ನೇಮಕವಾಗಿದೆ ಎಂದು ಹೇಳಲಾಗುತ್ತಿದೆ. ಅದೇ ರೀತಿ ಪರಿಷತ್ ಆಭ್ಯರ್ಥಿಗಳಾದ ಕೇಶವ ಪ್ರಸಾದ್, ಹೇಮಲತಾ ನಾಯಕ್, ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ ಹೆಸರು ಅಂತಿಮಗೊಳ್ಳುವುದಕ್ಕೂ ಸಂತೋಷ್ ಅವರೇ ಕಾರಣ.

ಮರುಜೀವ
ಈ ನೇಮಕದಿಂದ ಜಗ್ಗೇಶ್ ಅವರಿಗೆ ರಾಜಕೀಯ ದಲ್ಲಿ ಮರುಜೀವ ದೊರೆತಂತಾಗಿದೆ. ತುರುವೆಕೆರೆಯಲ್ಲಿ ಆಪರೇಷನ್ ಕಮಲದ ಬಳಿಕ ನಡೆದ ಚುನಾವಣೆಯಲ್ಲಿ ಸೋತಿದ್ದ ಜಗ್ಗೇಶ್ ಮತ್ತೆ ಗೆಲುವಿನ ಮುಖ ನೋಡಿಲ್ಲ. ವಿಧಾನಪರಿಷತ್ ಗೆ ನೇಮಕಗೊಂಡರೂ ರಾಜಕೀಯ ಏಳಿಗೆ ಸಾಧ್ಯವಾಗಿರಲಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಶವಂತಪುರದಿಂದ ಸ್ಪರ್ಧಿಸಿದ್ದರೂ ಗೆಲುವು ಸಿಕ್ಕಿರಲಿಲ್ಲ. ಆದರೆ ರಾಜಕೀಯ ಹಿನ್ನಡೆಯ ಬಗ್ಗೆ ಎಲ್ಲಿಯೂ ತುಟಿ ಬಿಚ್ಚದ ಜಗ್ಗೇಶ್ ಮೌನಕ್ಕೆ ಶರಣಾಗಿದ್ದರು. ಆದರೆ ಈ ಹೊಸ ಅವಕಾಶ ಜಗ್ಗೇಶ್ ಅವರ ವ್ಯಾಪ್ತಿಯನ್ನು ಬದಲಾಯಿಸಿದೆ ಎಂದು ಪಕ್ಷದ ವಲಯದಲ್ಲಿ ವ್ಯಾಖ್ಯಾನಿಸಲಾಗುತ್ತಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.