Haryana ಗೆಲ್ಲಲು ಕೈ ಕಸರತ್ತು: ರಾಹುಲ್ ಭೇಟಿಯಾದ ವಿನೇಶ್, ಬಜರಂಗ್ !

ಸಮರಾಂಗಣ ಸಿದ್ದ ... ಬಿಜೆಪಿ ವಿರುದ್ಧ ನಾನಾ ತಂತ್ರಗಳನ್ನು ಹಣೆಯುತ್ತಿರುವ ಕಾಂಗ್ರೆಸ್ ...

ವಿಷ್ಣುದಾಸ್ ಪಾಟೀಲ್, Sep 4, 2024, 1:26 PM IST

1-asaasas

ಲೋಕಸಭಾ ಚುನಾವಣೆಯಲ್ಲಿ ಹರಿಯಾಣದಲ್ಲಿ ಬಿಜೆಪಿಗೆ(BJP) ಸಮಬಲದ ಸ್ಪರ್ಧೆ ಒಡ್ಡಿದ್ದ ಕಾಂಗ್ರೆಸ್(Congress) ಈ ಬಾರಿ ಶತಾಯಗತಾಯ ಅಧಿಕಾರಕ್ಕೇರಲೇ ಬೇಕು ಎಂದು ಪಣತೊಟ್ಟಿದೆ. ಇದಕ್ಕೆ ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ ನಾಯಕರು ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ.

ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳಾಗಬಹುದು ಎಂಬ ಊಹಾಪೋಹಗಳ ನಡುವೆ, ರಾಜಕೀಯದ ಮಹತ್ವದ ವಿದ್ಯಮಾನದಲ್ಲಿ ಪ್ರಖ್ಯಾತ ಕುಸ್ತಿಪಟುಗಳಾದ ವಿನೇಶ್ ಫೋಗಟ್(Vinesh Phogat) ಮತ್ತು ಬಜರಂಗ್ ಪುನಿಯಾ(Bajrang Punia)  ರಾಹುಲ್ ಗಾಂಧಿ(Rahul Gandhi) ಅವರನ್ನು ಬುಧವಾರ(ಸೆ.4) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಹರಿಯಾಣ ವಿಧಾನಸಭೆಯ ಎಲ್ಲಾ 90 ಸ್ಥಾನಗಳಿಗೆ ಅಕ್ಟೋಬರ್ 5 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಫಲಿತಾಂಶ ಅಕ್ಟೋಬರ್ 8 ರಂದು ಘೋಷಣೆಯಾಗಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣ ಪ್ರಚಾರಕ್ಕೆ ಹೊರಡುವ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಾಲ್ಕು ದಿನಗಳ ಹಿಂದಷ್ಟೇ ವಿನೇಶ್ ಫೋಗಟ್ ಅವರು ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡು ತನ್ನ ಬೆಂಬಲವನ್ನು ಸೂಚಿಸಿದ್ದರು.

ಇಬ್ಬರೂ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಚರ್ಚೆಯ ಬಗ್ಗೆ ಇನ್ನಷ್ಟು ಕುತೂಹಲ ಕೆರಳಿಸಿದೆ. ಮುಂಬರುವ ಹರಿಯಾಣ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಕಾಂಗ್ರೆಸ್‌ನ ಕೇಂದ್ರ ಚುನಾವಣ ಸಮಿತಿ (CEC) ಸೋಮವಾರ ಸಭೆ ಸೇರಿದ ಬೆನ್ನಲ್ಲೇ ಈ ಭೇಟಿ ನಡೆದಿದೆ.

ವಿನೇಶ್ ಅವರನ್ನು ಬಿಜೆಪಿ ವಿರುದ್ಧ ಹೋರಾಟದ ಅಸ್ತ್ರವನ್ನಾಗಿಸಲು ಕಾಂಗ್ರೆಸ್ ಮುಂಚೂಣಿಯಲ್ಲಿ ನಿಲ್ಲಿಸಬಹುದು, ಮಾತ್ರವಲ್ಲದೆ ಆಕೆ ಒಲಂಪಿಕ್ ಪದಕ ಕಳೆದುಕೊಂಡ ಭಾವಾನಾತ್ಮಕ ವಿಚಾರವೂ ಪರಿಮಾಣಕಾರಿಯಾಗಿ ಕೆಲಸ ಮಾಡಬಹುದು ಎಂದು ಅಂದಾಜಿಸಲಾಗಿದೆ.

ಈ ಹಿಂದೆ, ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಹಿಂದಿರುಗಿದ ನಂತರ, ವಿನೇಶ್ ಫೋಗಟ್ ಅವರನ್ನು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ಭೇಟಿಯಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಸೇರಲು ಬಯಸುವ ಪ್ರತಿಯೊಬ್ಬರನ್ನು ಸ್ವಾಗತಿಸುತ್ತೇವೆ. ಕ್ರೀಡಾಪಟು ಯಾವುದೇ ನಿರ್ದಿಷ್ಟ ಪಕ್ಷ ಅಥವಾ ರಾಜ್ಯಕ್ಕೆ ಸೇರಿದವರಲ್ಲ. ಒಬ್ಬ ಕ್ರೀಡಾಪಟು ಇಡೀ ರಾಷ್ಟ್ರಕ್ಕೆ ಸೇರಿದವರು” ಎಂದು ಹೇಳಿದ್ದರು.

29ರ ಹರೆಯದ ವಿನೇಶ್ ಭಾರತಕ್ಕೆ ಹಿಂದಿರುಗಿದಾಗಿನಿಂದಲೂ ಆಕೆಯೊಂದಿಗೆ ಕಾಂಗ್ರೆಸ್ ನಾಯಕರು ಕಾಣಿಸಿಕೊಂಡಿದ್ದರು. ರೋಹ್ಟಕ್ ಸಂಸದ ದೀಪೇಂದರ್ ಹೂಡಾ ಅವರು ಆಕೆಯನ್ನು ಸ್ವಾಗತಿಸಲು ದೆಹಲಿಯ ಐಜಿಐ ವಿಮಾನ ನಿಲ್ದಾಣವನ್ನು ತಲುಪಿದ ಮೊದಲ ರಾಜಕೀಯ ನಾಯಕರಾಗಿದ್ದರು.

ಲೈಂಗಿಕ ಕಿರುಕುಳದ ಆರೋಪದ ಮೇಲೆ ಅಂದಿನ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಮತ್ತು ಬಿಜೆಪಿ ನಾಯಕ ಬ್ರಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಹರಿಯಾಣದ ವಿನೇಶ್ ಮತ್ತು ಇತರ ಕುಸ್ತಿಪಟುಗಳ ಆಂದೋಲನವನ್ನು ದೀಪೇಂದರ್ ಗಟ್ಟಿ ಧ್ವನಿಯಿಂದ ಬೆಂಬಲಿಸಿದ್ದರು.

ಸಮರಾಂಗಣ ಸಿದ್ದ
ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಅಡಿಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ರಾಜ್ಯದ 10 ಲೋಕಸಭಾ ಕ್ಷೇತ್ರಗಳ ಪೈಕಿ ಒಂಬತ್ತರಲ್ಲಿ ಸ್ಪರ್ಧಿಸಿತ್ತು, ಕುರುಕ್ಷೇತ್ರವನ್ನು ಎಎಪಿಗೆ ಬಿಟ್ಟುಕೊಟ್ಟಿತ್ತು. 5 ರಲ್ಲಿ ಬಿಜೆಪಿ ಗೆದ್ದಿದ್ದರೆ, 5 ರಲ್ಲಿ ಕಾಂಗ್ರೆಸ್ ಗೆದ್ದು ಬಲ ಪ್ರದರ್ಶನ ಮಾಡಿತ್ತು. 90 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 42ರಲ್ಲಿ ಮೇಲುಗೈ ಸಾಧಿಸಿತ್ತು. ಎಎಪಿ ನಾಲ್ಕರಲ್ಲಿ ಮುನ್ನಡೆ ಸಾಧಿಸಿತ್ತು ಆದರೆ ಕ್ಷೇತ್ರ ಗೆಲ್ಲಲು ವಿಫಲವಾಗಿತ್ತು. ಈಗ ಮೈತ್ರಿ ಮಾತುಕತೆಗಳು ನಡೆಯುತ್ತಿದ್ದು ಏಳು ಸ್ಥಾನಗಳ ಬೇಡಿಕೆಯನ್ನು ಕಾಂಗ್ರೆಸ್ ಮುಂದೆ ಆಪ್ ಇಟ್ಟಿದೆ.

2019 ರಲ್ಲಿ ಬಿಜೆಪಿ 40 ಸ್ಥಾನಗಳಲ್ಲಿ ಜಯಗಳಿಸಿತ್ತು. ಬಹುಮತಕ್ಕೆ ಆರು ಸ್ಥಾನಗಳು ಕಡಿಮೆಯಾಗಿತ್ತು. ಆದರೂ ಸರಕಾರ ರಚಿಸುವಲ್ಲಿ ಯಶಸ್ವಿಯಾಗಿತ್ತು. ಕಾಂಗ್ರೆಸ್ 31 ಸ್ಥಾನ, ಜನನಾಯಕ ಜನತಾ ಪಕ್ಷ 10, ಪಕ್ಷೇತರರು 7 ಸ್ಥಾನ ಗೆದ್ದಿದ್ದರು. ಲೋಕದಳ 1, ಲೋಕ್ ಹಿತ್ ಪಾರ್ಟಿ 1 ಸ್ಥಾನಗಲ್ಲಿ ಜಯ ಸಾಧಿಸಿತ್ತು. ಬಿಜೆಪಿ ಜನನಾಯಕ ಜನತಾ ಪಾರ್ಟಿ ಮತ್ತು ಪಕ್ಷೇತರರು 7 ಶಾಸಕರ ಬೆಂಬಲದಿಂದ ಸುಲಭವಾಗಿ ಸರಕಾರ ರಚಿಸಿತ್ತು. ಮನೋಹರ್ ಲಾಲ್ ಖಟ್ಟರ್ ಮುಖ್ಯಮಂತ್ರಿ ಮತ್ತು ಜೆಜೆಪಿ ಅಧ್ಯಕ್ಷ ದುಷ್ಯಂತ್ ಚೌಟಾಲಾ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಬಾರಿ ಚಿತ್ರಣ ಬದಲಾಗುವ ಸಾಧ್ಯತೆಗಳಿವೆ ಎಂದು ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕಿಕೊಂಡಿದ್ದಾರೆ.ಈಗ ನಾಯಕತ್ವ ಬದಲಾಗಿದ್ದು ಬಿಜೆಪಿಯು ಸಿಎಂ ನಯಾಬ್ ಸಿಂಗ್ ಸೈನಿ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆಯಲ್ಲಿ ಜಾಗರೂಕತೆ ಬಯಸುವ ಎಲ್ಲ ಸಾಧ್ಯತೆಗಳಿವೆ. ಇದಕ್ಕೆ ಕಾರಣ ಲೋಕಸಭಾ ಚುನಾವಣೆಯಲ್ಲಿ ಆದ ಹಿನ್ನಡೆ.

ಪಕ್ಷಾಂತರ ಪರ್ವ ಜೋರು

ಲೋಕಸಭೆ ಚುನಾವಣೆಗೆ ಮುನ್ನ ಜೆಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ ಜೆಜೆಪಿ ಪ್ರತ್ಯೇಕವಾಗಿ ಹೋರಾಟಕ್ಕೆ ಸಿದ್ಧವಾಗಿದೆ. ಈ ನಡುವೆ ಮೂವರು ಜೆಜೆಪಿ ಶಾಸಕರು, ಪ್ರಮುಖ ನಾಯಕ ನಾಯಕ ದೇವೆಂದರ್ ಸಿಂಗ್ ಬಬ್ಲಿ ಅವರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಮೂವರೂ ಜಾಟ್ ಸಮುದಾಯದ ನಾಯಕರೆನ್ನುವುದು ವಿಶೇಷ. ಇನ್ನೂ ಕೆಲವರು ಪಕ್ಷಾಂತರಕ್ಕೆ ಸಿದ್ಧವಾಗಿದ್ದಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಕ್ರಮ ವಲಸಿಗರ ನೀತಿ: ಅಮೇರಿಕಾದ ನಡೆ ಭಾರತೀಯರ ಸ್ವಾಭಿಮಾನದ ಪ್ರಶ್ನೆ?

ಅಕ್ರಮ ವಲಸಿಗರ ನೀತಿ: ಅಮೇರಿಕಾದ ನಡೆ ಭಾರತೀಯರ ಸ್ವಾಭಿಮಾನದ ಪ್ರಶ್ನೆ?

 Delhi Results:27 ವರ್ಷದ ಬಳಿಕ ಬಿಜೆಪಿಗೆ ದೆಹಲಿ ಗದ್ದುಗೆ-ಐವರು CM ಹುದ್ದೆ ರೇಸ್‌ ನಲ್ಲಿ…

Delhi Results:27 ವರ್ಷದ ಬಳಿಕ ದೆಹಲಿಯಲ್ಲಿ ಅರಳಿದ ಕಮಲ-ಐವರು CM ಹುದ್ದೆ ರೇಸ್‌ ನಲ್ಲಿ…

Delhi Results: ದೆಹಲಿ ಗೆಲುವಿನೊಂದಿಗೆ ಪ್ರಾಬಲ್ಯ ಹೆಚ್ಚಿಸಿಕೊಂಡ ಬಿಜೆಪಿ-AAP ಕನಸು ಭಗ್ನ!

Delhi Results: ದೆಹಲಿ ಗೆಲುವಿನೊಂದಿಗೆ ಪ್ರಾಬಲ್ಯ ಹೆಚ್ಚಿಸಿಕೊಂಡ ಬಿಜೆಪಿ-AAP ಕನಸು ಭಗ್ನ!

Illegal Immigrants: 15 ವರ್ಷಗಳಿಂದ ಅಮೆರಿಕದಿಂದ ಗಡಿಪಾರಾದ ಭಾರತೀಯರ ಸಂಖ್ಯೆ ಎಷ್ಟು?

Illegal Immigrants: 15 ವರ್ಷಗಳಿಂದ ಅಮೆರಿಕದಿಂದ ಗಡಿಪಾರಾದ ಭಾರತೀಯರ ಸಂಖ್ಯೆ ಎಷ್ಟು?

Union Budget 2025: ಮಧ್ಯಮ ವರ್ಗಕ್ಕೆ ಸಂತೃಪ್ತಿ ತಂದ ಜನಪರ ಬಜೆಟ್

Union Budget 2025: ಮಧ್ಯಮ ವರ್ಗಕ್ಕೆ ಸಂತೃಪ್ತಿ ತಂದ ಜನಪರ ಬಜೆಟ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.