Chia seeds: ಗರ್ಭಿಣಿಯರ ಆರೋಗ್ಯಕ್ಕೆ ಅತ್ಯುತ್ತಮ-ಚಿಯಾ ಬೀಜಗಳು


Team Udayavani, Aug 13, 2024, 6:09 PM IST

3-chia-seeds-4

ಚಿಯಾ ಬೀಜಗಳು ರೋಗ ನಿರೋಧಕ ಶಕ್ತಿ ಹೊಂದಿದ್ದು, ಆ ಬೀಜಗಳು ಪೋಷಕಾಂಶ ಸಮೃದ್ಧವಾಗಿದೆ. ಈ ಬೀಜಗಳು ಉರಿಯೂತ ಕಡಿಮೆ ಮಾಡಲು, ಹೆಚ್ಚಿನ ಕೊಲೆಸ್ಟ್ರಾಲ್(ಕೊಬ್ಬಿನಾಂಶ) ಕಡಿಮೆ ಮಾಡಲು, ಜೀರ್ಣಕ್ರಿಯೆ ಹಾಗೂ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಿದೆ.

ಚಿಯಾ ಬೀಜಗಳು ಫೈಬರ್‌ನ ಅತ್ಯುತ್ತಮ ಮೂಲವಾಗಿದೆ, ಇದು ಉರಿಯೂತವನ್ನು ಕಡಿಮೆ ಮಾಡಲು, ಕರುಳಿನ ಕಾರ್ಯವನ್ನು ನಿಯಂತ್ರಿಸಲು ಮತ್ತು ಕೊಲೆಸ್ಟ್ರಾಲ್ ಕಡಿಮೆ ಮಾಡಲು ಕೂಡಾ ಉತ್ತಮವಾಗಿದೆ. ಈ ಬೀಜಗಳು ಹಸಿವು ನಿಯಂತ್ರಿಸಲು ಸಹಾಯ ಮಾಡುತ್ತದೆ ಹಾಗೂ ತೂಕ ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

ಚಿಯಾ ಬೀಜಗಳು ಧಾನ್ಯಗಳಂತೆ ಇರುತ್ತವೆ. ಕಪ್ಪು ಹಾಗೂ ಬಿಳಿ ಬಣ್ಣಗಳಿಂದ ಕೂಡಿದ್ದು, ಗಾತ್ರದಲ್ಲಿ ಚಿಕ್ಕದಾಗಿರುವ ಈ ಬೀಜಗಳು ನಮ್ಮ ದೇಹಕ್ಕೆ ಸಾಕಷ್ಟು ಪ್ರಯೋಜನಕಾರಿಯಾಗಿವೆ. ಈ ಬೀಜಗಳ ಸೇವನೆಯಿಂದ ಹಲವು ಆರೋಗ್ಯ ಪ್ರಯೋಜನಗಳು ನಮಗೆ ಸಿಗಲಿದೆ. ಆ ಬಗ್ಗೆ ಮಾಹಿತಿಗಾಗಿ ಮುಂದೆ ಓದಿ..

ಆಂಟಿ-ಆಕ್ಸಿಡೆಂಟ್‌(ರೋಗ ನಿರೋಧಕ ಶಕ್ತಿ)ಗಳಿಂದ ಕೂಡಿದೆ:

ಚಿಯಾ ಬೀಜಗಳಲ್ಲಿ ಹೆಚ್ಚಿನ ಪ್ರಮಾಣದ ಆಂಟಿ-ಆಕ್ಸಿಡೆಂಟ್‌ಗಳಿವೆ. ಹಾಗಾಗಿ ಈ ಬೀಜಗಳನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಜೀವಕೋಶದಲ್ಲಿನ ಅಣುಗಳಿಗೆ ಹಾನಿ ಮಾಡುವ ಮತ್ತು ಕ್ಯಾನ್ಸರ್‌ ನಂತಹ ಕಾಯಿಲೆಗಳಿಗೆ ಕಾರಣವಾಗುವ ಸ್ವತಂತ್ರ ರಾಡಿಕಲ್‌ಗಳ ಉತ್ಪಾದನೆಯ ವಿರುದ್ಧ ಹೋರಾಡಲು ಅವು ಉಪಯುಕ್ತವಾಗಿದೆ.

ಹೃದಯ ಆರೋಗ್ಯಕ್ಕೆ:

ಚಿಯಾ ಬೀಜಗಳನ್ನು ಸೇವಿಸುವುದರಿಂದ ನಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುವುದು ಹಾಗೂ ರಕ್ತದೊತ್ತಡ ನಿಯಂತ್ರಿಸಲು ಸಹಾಯ ಮಾಡಲು ಅತ್ಯಂತ ಪ್ರಯೋಜನಕಾರಿಯಾಗಿದೆ. ಉತ್ತಮ ಹೃದಯದ ಆರೋಗ್ಯಕ್ಕೆ ಚಿಯಾ ಬೀಜಗಳನ್ನು ಸೇವಿಸುವುದು ತುಂಬಾ ಒಳ್ಳೆಯದು. ನಮ್ಮ ದೈನಂದಿನ ಆಹಾರದಲ್ಲಿ ಚೀಯಾ ಬೀಜಗಳನ್ನು ಸೇವಿಸಿದರೆ ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಯುತ್ತದೆ. ನಿರ್ದಿಷ್ಟವಾಗಿ, ದೇಹದ ಅಂಗಾಂಗಗಳ ಉರಿಯೂತ ಕಡಿಮೆಯಾಗುತ್ತದೆ.

ಮೂಳೆಗಳ ಆರೋಗ್ಯಕ್ಕೆ:

ಮೂಳೆಗಳ ಆರೋಗ್ಯಕ್ಕೆ ಚೀಯಾ ಬೀಜಗಳು ಉತ್ತಮ ಆಹಾರ. ನಮ್ಮ ಮೂಳೆಗಳನ್ನು ಬಲಪಡಿಸುವ ಕ್ಯಾಲ್ಸಿಯಂ, ಪ್ರೊಟೀನ್, ಮೆಗ್ನೀಸಿಯಮ್ ಮತ್ತು ರಂಜಕದಂತಹ ಪೋಷಕಾಂಶಗಳನ್ನು ಈ ಬೀಜಗಳು ಹೊಂದಿರುತ್ತವೆ.

ಮಧುಮೇಹಕ್ಕೆ:

ಚಿಯಾ ಬೀಜಗಳು ಫೈಬರ್ ಮತ್ತು ಆಲ್ಫಾ-ಲಿನೋಲೆನಿಕ್ ಆಮ್ಲದಲ್ಲಿ ಸಮೃದ್ಧವಾಗಿವೆ. ಇದು ಇನ್ಸುಲಿನ್ ಪ್ರತಿರೋಧ ಮತ್ತು ಡಿಸ್ಲಿಪಿಡೆಮಿಯಾದಂತಹ ಚಯಾಪಚಯ ಅಸ್ವಸ್ಥತೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಈ ಎರಡು ಅಂಶಗಳು ಮಧುಮೇಹದ ಬೆಳವಣಿಗೆಗೆ ಕಾರಣವಾಗಿದ್ದು, ಈ ಬೀಜಗಳನ್ನು ತಿನ್ನುವುದರಿಂದ ಡಿಸ್ಲಿಪಿಡೆಮಿಯಾ ಆಕ್ರಮಣ ತಡೆಯಬಹುದು ಎಂಬುದು ಆರೋಗ್ಯ ತಜ್ಞರ ಸಲಹೆಯಾಗಿದೆ. ಚೀಯಾ ಬೀಜಗಳು ಒಮೆಗಾ -3 ಕೊಬ್ಬಿನಾಮ್ಲಗಳು, ಫೈಬರ್ ಮತ್ತು ಮೆಗ್ನೀಸಿಯಮ್ ಗಳ ಉತ್ತಮ ಮೂಲವಾಗಿದೆ.

ಈ ಎಲ್ಲಾ ಪೋಷಕಾಂಶಗಳು ಟೈಪ್ 2 ಮಧುಮೇಹದ ತೊಡಕುಗಳ ಅಪಾಯ ತಗ್ಗಿಸಲು ಸಹಾಯ ಮಾಡುತ್ತದೆ. ತೂಕ ಕಳೆದುಕೊಳ್ಳುವುದರಿಂದ ಕೂಡಾ ಮಧುಮೇಹ ನಿಯಂತ್ರಿಸಲು ಸಾಧ್ಯವಾಗುತ್ತದೆ. ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟ ನಿಯಂತ್ರಿಸಲು ಸಹಾಯ ಮಾಡುತ್ತದೆ. ದೈನಂದಿನ ದಿನಗಳಲ್ಲಿ ಈ ಬೀಜಗಳನ್ನು ನಿಯಮಿತವಾಗಿ ಸೇವಿಸುವುದು ಅಗತ್ಯ.

ದೇಹದ ತೂಕ ನಿಯಂತ್ರಿಸಲು:

ಚಿಯಾ ಬೀಜಗಳು ಪ್ರೋಟೀನ್ ಮತ್ತು ಫೈಬರ್ ಸಮೃದ್ಧವಾಗಿದ್ದು, ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಚೀಯಾ ಬೀಜಗಳನ್ನು ಸೇವಿಸುವುದರಿಂದ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಹೀಗಾಗಿ ಆಹಾರ ಸೇವಿಸಿದ ಬಳಿಕ ತಡರಾತ್ರಿ ಹಸಿವು ಅಥವಾ ತಿಂಡಿ ತಿನ್ನುವ ಬಯಕೆ ನಿಯಂತ್ರಿಸಲು ಸಹಾಯ ಮಾಡುತ್ತದೆ. ಚಿಯಾ ಬೀಜಗಳಲ್ಲಿ ಒಮೆಗಾ 3 ಕೊಬ್ಬಿನಾಮ್ಲಗಳು ಅಧಿಕವಾಗಿವೆ. ಅವು ದೇಹಕ್ಕೆ ಪ್ರಯೋಜನಕಾರಿಯಾಗಿದೆ.

ಚರ್ಮ ಮತ್ತು ವಯಸ್ಸಾದಂತೆ ಕಾಣುವುದನ್ನು ತಡೆಯಲು:

ಚಿಯಾ ಬೀಜಗಳ ಉನ್ನತ ಪ್ರಯೋಜನವೆಂದರೆ ಅದು ಹೆಚ್ಚಿನ ಪ್ರಮಾಣದ ಆಂಟಿ-ಆಕ್ಸಿಡೆಂಟ್‌ಗಳನ್ನು ಒಳಗೊಂಡಿರುತ್ತದೆ. ಉರಿಯೂತ ಮತ್ತು ಆಮೂಲಾಗ್ರ ಹಾನಿಯಿಂದ ಉಂಟಾಗುವ ಅಕಾಲಿಕ ಚರ್ಮದ ವಯಸ್ಸನ್ನು ತಡೆಗಟ್ಟುವಲ್ಲಿ ಇದು ತುಂಬಾ ಪ್ರಯೋಜನಕಾರಿಯಾಗಿದೆ. ಆಂಟಿ-ಆಕ್ಸಿಡೆಂಟ್‌ಗಳಿಂದ ಚರ್ಮದ ದುರಸ್ತಿ ವ್ಯವಸ್ಥೆಗಳನ್ನು ಸರಿಪಡಿಸಲಾಗುತ್ತದೆ ಮತ್ತು ಚರ್ಮಕ್ಕೆ ಮತ್ತಷ್ಟು ಹಾನಿಯಾಗದಂತೆ ತಡೆಯುತ್ತದೆ. ಜೊತೆಗೆ ವಯಸ್ಸಾಗುವಂತೆ ಕಾಣುವುದನ್ನು ತಡೆಯುತ್ತದೆ.

ಗರ್ಭಿಣಿಯರ ಆರೋಗ್ಯಕ್ಕೆ ಅತ್ಯುತ್ತಮ:

ಈ ಚಿಕ್ಕ ಬೀಜಗಳು ದೇಹಕ್ಕೆ ತುಂಬಾ ಪೌಷ್ಟಿಕ ಮತ್ತು ಆರೋಗ್ಯಕರವಾಗಿವೆ. ಗರ್ಭಿಣಿಯರು ತಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿಕೊಳ್ಳಬೇಕು. ಇದು ಮಗುವಿನ ಬೆಳವಣಿಗೆಗೂ ಅಷ್ಟೇ ಒಳ್ಳೆಯದು.

ದೇಹದ ಚಯಾಪಚಾಯ ಹೆಚ್ಚಿಸಲು:

ಚಿಯಾ ಬೀಜಗಳು ದೇಹದ ಚಯಾಪಚಾಯ ಕ್ರಿಯೆ ಹೆಚ್ಚಿಸಲು ಸಹಾಯ ಮಾಡುತ್ತದೆ. ಚಿಯಾ ಬೀಜಗಳನ್ನು ಸೇವಿಸುವುದರಿಂದ ಒಳಾಂಗಗಳ ಅಡಿಪೋಸ್ ಅಂಗಾಂಶ ಕಡಿಮೆಯಾಗಲು ಸಹಾಯ ಮಾಡುತ್ತದೆ. ಈ ಅಂಗಾಂಶಗಳು ವಾಸ್ತವವಾಗಿ ಹೊಟ್ಟೆಯಲ್ಲಿನ ಕೊಬ್ಬಿನ ಅಂಗಾಂಶಕ್ಕೆ ಸಂಬಂಧಿಸಿವೆ ಮತ್ತು ಸ್ಥೂಲಕಾಯದ ಪ್ರಮುಖ ಅಂಶವಾಗಿದೆ.

ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ವಿರುದ್ಧ ಹೋರಾಡಲು:

ಈ ಬೀಜಗಳು ALA ಅಥವಾ ಆಲ್ಫಾ ಲಿಪೊಯಿಕ್ ಆಮ್ಲದಲ್ಲಿ ಸಮೃದ್ಧವಾಗಿವೆ ಎಂದು ಹೇಳಲಾಗಿದೆ. ಇದು ಗರ್ಭಕಂಠದ ಪ್ರದೇಶದಲ್ಲಿ ಮತ್ತು ಸ್ತನ ಕ್ಯಾನ್ಸರ್‌ ಗೆ ಕ್ಯಾನ್ಸರ್ ಕೋಶಗಳ ಬೆಳವಣಿಗೆ ಮಿತಿಗೊಳಿಸಲು ಸಹಾಯ ಮಾಡುತ್ತದೆ. ಚೀಯಾ ಬೀಜಗಳು ದೇಹದಲ್ಲಿನ ಆರೋಗ್ಯಕರ ಕೋಶಗಳಿಗೆ ತೊಂದರೆಯಾಗದಂತೆ ಹಾನಿಕಾರಕ ಕ್ಯಾನ್ಸರ್ ಕೋಶಗಳನ್ನು ನಾಶಮಾಡುತ್ತವೆ. ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಹಿಳೆಯರು ತಮ್ಮ ಆಹಾರದಲ್ಲಿ ಚಿಯಾ ಬೀಜಗಳನ್ನು ಸೇರಿಸಿಕೊಳ್ಳಬೇಕು. ಹೀಗಾಗಿ ಚೀಯಾ ಬೀಜಗಳು ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯಕವಾಗಿದೆ.

*ಕಾವ್ಯಶ್ರೀ

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

smi irani

Smriti Irani ದೆಹಲಿ ಬಿಜೆಪಿಯಲ್ಲಿ ಸಕ್ರಿಯ: ”ಸಿಎಂ ಫೇಸ್” ಆಗಿ ಕೇಳಿ ಬರುತ್ತಿರುವ ಹೆಸರು!

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

Tan removalಗೆ ಟೊಮೆಟೊ ಫೇಸ್‌ ಪ್ಯಾಕ್‌; ನೈಸರ್ಗಿಕ ತ್ವಚೆ ಕಾಳಜಿ

Beauty Tips: ಮುಖದ ಕಾಂತಿ ಹೆಚ್ಚಿಸಲು ಟೊಮ್ಯಾಟೋ ಫೇಸ್‌ ಪ್ಯಾಕ್‌; ಇದರ ಲಾಭವೇನು ಗೊತ್ತಾ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.