Chia seeds: ಗರ್ಭಿಣಿಯರ ಆರೋಗ್ಯಕ್ಕೆ ಅತ್ಯುತ್ತಮ-ಚಿಯಾ ಬೀಜಗಳು


Team Udayavani, Aug 13, 2024, 6:09 PM IST

3-chia-seeds-4

ಚಿಯಾ ಬೀಜಗಳು ರೋಗ ನಿರೋಧಕ ಶಕ್ತಿ ಹೊಂದಿದ್ದು, ಆ ಬೀಜಗಳು ಪೋಷಕಾಂಶ ಸಮೃದ್ಧವಾಗಿದೆ. ಈ ಬೀಜಗಳು ಉರಿಯೂತ ಕಡಿಮೆ ಮಾಡಲು, ಹೆಚ್ಚಿನ ಕೊಲೆಸ್ಟ್ರಾಲ್(ಕೊಬ್ಬಿನಾಂಶ) ಕಡಿಮೆ ಮಾಡಲು, ಜೀರ್ಣಕ್ರಿಯೆ ಹಾಗೂ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಿದೆ.

ಚಿಯಾ ಬೀಜಗಳು ಫೈಬರ್‌ನ ಅತ್ಯುತ್ತಮ ಮೂಲವಾಗಿದೆ, ಇದು ಉರಿಯೂತವನ್ನು ಕಡಿಮೆ ಮಾಡಲು, ಕರುಳಿನ ಕಾರ್ಯವನ್ನು ನಿಯಂತ್ರಿಸಲು ಮತ್ತು ಕೊಲೆಸ್ಟ್ರಾಲ್ ಕಡಿಮೆ ಮಾಡಲು ಕೂಡಾ ಉತ್ತಮವಾಗಿದೆ. ಈ ಬೀಜಗಳು ಹಸಿವು ನಿಯಂತ್ರಿಸಲು ಸಹಾಯ ಮಾಡುತ್ತದೆ ಹಾಗೂ ತೂಕ ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

ಚಿಯಾ ಬೀಜಗಳು ಧಾನ್ಯಗಳಂತೆ ಇರುತ್ತವೆ. ಕಪ್ಪು ಹಾಗೂ ಬಿಳಿ ಬಣ್ಣಗಳಿಂದ ಕೂಡಿದ್ದು, ಗಾತ್ರದಲ್ಲಿ ಚಿಕ್ಕದಾಗಿರುವ ಈ ಬೀಜಗಳು ನಮ್ಮ ದೇಹಕ್ಕೆ ಸಾಕಷ್ಟು ಪ್ರಯೋಜನಕಾರಿಯಾಗಿವೆ. ಈ ಬೀಜಗಳ ಸೇವನೆಯಿಂದ ಹಲವು ಆರೋಗ್ಯ ಪ್ರಯೋಜನಗಳು ನಮಗೆ ಸಿಗಲಿದೆ. ಆ ಬಗ್ಗೆ ಮಾಹಿತಿಗಾಗಿ ಮುಂದೆ ಓದಿ..

ಆಂಟಿ-ಆಕ್ಸಿಡೆಂಟ್‌(ರೋಗ ನಿರೋಧಕ ಶಕ್ತಿ)ಗಳಿಂದ ಕೂಡಿದೆ:

ಚಿಯಾ ಬೀಜಗಳಲ್ಲಿ ಹೆಚ್ಚಿನ ಪ್ರಮಾಣದ ಆಂಟಿ-ಆಕ್ಸಿಡೆಂಟ್‌ಗಳಿವೆ. ಹಾಗಾಗಿ ಈ ಬೀಜಗಳನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಜೀವಕೋಶದಲ್ಲಿನ ಅಣುಗಳಿಗೆ ಹಾನಿ ಮಾಡುವ ಮತ್ತು ಕ್ಯಾನ್ಸರ್‌ ನಂತಹ ಕಾಯಿಲೆಗಳಿಗೆ ಕಾರಣವಾಗುವ ಸ್ವತಂತ್ರ ರಾಡಿಕಲ್‌ಗಳ ಉತ್ಪಾದನೆಯ ವಿರುದ್ಧ ಹೋರಾಡಲು ಅವು ಉಪಯುಕ್ತವಾಗಿದೆ.

ಹೃದಯ ಆರೋಗ್ಯಕ್ಕೆ:

ಚಿಯಾ ಬೀಜಗಳನ್ನು ಸೇವಿಸುವುದರಿಂದ ನಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುವುದು ಹಾಗೂ ರಕ್ತದೊತ್ತಡ ನಿಯಂತ್ರಿಸಲು ಸಹಾಯ ಮಾಡಲು ಅತ್ಯಂತ ಪ್ರಯೋಜನಕಾರಿಯಾಗಿದೆ. ಉತ್ತಮ ಹೃದಯದ ಆರೋಗ್ಯಕ್ಕೆ ಚಿಯಾ ಬೀಜಗಳನ್ನು ಸೇವಿಸುವುದು ತುಂಬಾ ಒಳ್ಳೆಯದು. ನಮ್ಮ ದೈನಂದಿನ ಆಹಾರದಲ್ಲಿ ಚೀಯಾ ಬೀಜಗಳನ್ನು ಸೇವಿಸಿದರೆ ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಯುತ್ತದೆ. ನಿರ್ದಿಷ್ಟವಾಗಿ, ದೇಹದ ಅಂಗಾಂಗಗಳ ಉರಿಯೂತ ಕಡಿಮೆಯಾಗುತ್ತದೆ.

ಮೂಳೆಗಳ ಆರೋಗ್ಯಕ್ಕೆ:

ಮೂಳೆಗಳ ಆರೋಗ್ಯಕ್ಕೆ ಚೀಯಾ ಬೀಜಗಳು ಉತ್ತಮ ಆಹಾರ. ನಮ್ಮ ಮೂಳೆಗಳನ್ನು ಬಲಪಡಿಸುವ ಕ್ಯಾಲ್ಸಿಯಂ, ಪ್ರೊಟೀನ್, ಮೆಗ್ನೀಸಿಯಮ್ ಮತ್ತು ರಂಜಕದಂತಹ ಪೋಷಕಾಂಶಗಳನ್ನು ಈ ಬೀಜಗಳು ಹೊಂದಿರುತ್ತವೆ.

ಮಧುಮೇಹಕ್ಕೆ:

ಚಿಯಾ ಬೀಜಗಳು ಫೈಬರ್ ಮತ್ತು ಆಲ್ಫಾ-ಲಿನೋಲೆನಿಕ್ ಆಮ್ಲದಲ್ಲಿ ಸಮೃದ್ಧವಾಗಿವೆ. ಇದು ಇನ್ಸುಲಿನ್ ಪ್ರತಿರೋಧ ಮತ್ತು ಡಿಸ್ಲಿಪಿಡೆಮಿಯಾದಂತಹ ಚಯಾಪಚಯ ಅಸ್ವಸ್ಥತೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಈ ಎರಡು ಅಂಶಗಳು ಮಧುಮೇಹದ ಬೆಳವಣಿಗೆಗೆ ಕಾರಣವಾಗಿದ್ದು, ಈ ಬೀಜಗಳನ್ನು ತಿನ್ನುವುದರಿಂದ ಡಿಸ್ಲಿಪಿಡೆಮಿಯಾ ಆಕ್ರಮಣ ತಡೆಯಬಹುದು ಎಂಬುದು ಆರೋಗ್ಯ ತಜ್ಞರ ಸಲಹೆಯಾಗಿದೆ. ಚೀಯಾ ಬೀಜಗಳು ಒಮೆಗಾ -3 ಕೊಬ್ಬಿನಾಮ್ಲಗಳು, ಫೈಬರ್ ಮತ್ತು ಮೆಗ್ನೀಸಿಯಮ್ ಗಳ ಉತ್ತಮ ಮೂಲವಾಗಿದೆ.

ಈ ಎಲ್ಲಾ ಪೋಷಕಾಂಶಗಳು ಟೈಪ್ 2 ಮಧುಮೇಹದ ತೊಡಕುಗಳ ಅಪಾಯ ತಗ್ಗಿಸಲು ಸಹಾಯ ಮಾಡುತ್ತದೆ. ತೂಕ ಕಳೆದುಕೊಳ್ಳುವುದರಿಂದ ಕೂಡಾ ಮಧುಮೇಹ ನಿಯಂತ್ರಿಸಲು ಸಾಧ್ಯವಾಗುತ್ತದೆ. ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟ ನಿಯಂತ್ರಿಸಲು ಸಹಾಯ ಮಾಡುತ್ತದೆ. ದೈನಂದಿನ ದಿನಗಳಲ್ಲಿ ಈ ಬೀಜಗಳನ್ನು ನಿಯಮಿತವಾಗಿ ಸೇವಿಸುವುದು ಅಗತ್ಯ.

ದೇಹದ ತೂಕ ನಿಯಂತ್ರಿಸಲು:

ಚಿಯಾ ಬೀಜಗಳು ಪ್ರೋಟೀನ್ ಮತ್ತು ಫೈಬರ್ ಸಮೃದ್ಧವಾಗಿದ್ದು, ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಚೀಯಾ ಬೀಜಗಳನ್ನು ಸೇವಿಸುವುದರಿಂದ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಹೀಗಾಗಿ ಆಹಾರ ಸೇವಿಸಿದ ಬಳಿಕ ತಡರಾತ್ರಿ ಹಸಿವು ಅಥವಾ ತಿಂಡಿ ತಿನ್ನುವ ಬಯಕೆ ನಿಯಂತ್ರಿಸಲು ಸಹಾಯ ಮಾಡುತ್ತದೆ. ಚಿಯಾ ಬೀಜಗಳಲ್ಲಿ ಒಮೆಗಾ 3 ಕೊಬ್ಬಿನಾಮ್ಲಗಳು ಅಧಿಕವಾಗಿವೆ. ಅವು ದೇಹಕ್ಕೆ ಪ್ರಯೋಜನಕಾರಿಯಾಗಿದೆ.

ಚರ್ಮ ಮತ್ತು ವಯಸ್ಸಾದಂತೆ ಕಾಣುವುದನ್ನು ತಡೆಯಲು:

ಚಿಯಾ ಬೀಜಗಳ ಉನ್ನತ ಪ್ರಯೋಜನವೆಂದರೆ ಅದು ಹೆಚ್ಚಿನ ಪ್ರಮಾಣದ ಆಂಟಿ-ಆಕ್ಸಿಡೆಂಟ್‌ಗಳನ್ನು ಒಳಗೊಂಡಿರುತ್ತದೆ. ಉರಿಯೂತ ಮತ್ತು ಆಮೂಲಾಗ್ರ ಹಾನಿಯಿಂದ ಉಂಟಾಗುವ ಅಕಾಲಿಕ ಚರ್ಮದ ವಯಸ್ಸನ್ನು ತಡೆಗಟ್ಟುವಲ್ಲಿ ಇದು ತುಂಬಾ ಪ್ರಯೋಜನಕಾರಿಯಾಗಿದೆ. ಆಂಟಿ-ಆಕ್ಸಿಡೆಂಟ್‌ಗಳಿಂದ ಚರ್ಮದ ದುರಸ್ತಿ ವ್ಯವಸ್ಥೆಗಳನ್ನು ಸರಿಪಡಿಸಲಾಗುತ್ತದೆ ಮತ್ತು ಚರ್ಮಕ್ಕೆ ಮತ್ತಷ್ಟು ಹಾನಿಯಾಗದಂತೆ ತಡೆಯುತ್ತದೆ. ಜೊತೆಗೆ ವಯಸ್ಸಾಗುವಂತೆ ಕಾಣುವುದನ್ನು ತಡೆಯುತ್ತದೆ.

ಗರ್ಭಿಣಿಯರ ಆರೋಗ್ಯಕ್ಕೆ ಅತ್ಯುತ್ತಮ:

ಈ ಚಿಕ್ಕ ಬೀಜಗಳು ದೇಹಕ್ಕೆ ತುಂಬಾ ಪೌಷ್ಟಿಕ ಮತ್ತು ಆರೋಗ್ಯಕರವಾಗಿವೆ. ಗರ್ಭಿಣಿಯರು ತಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿಕೊಳ್ಳಬೇಕು. ಇದು ಮಗುವಿನ ಬೆಳವಣಿಗೆಗೂ ಅಷ್ಟೇ ಒಳ್ಳೆಯದು.

ದೇಹದ ಚಯಾಪಚಾಯ ಹೆಚ್ಚಿಸಲು:

ಚಿಯಾ ಬೀಜಗಳು ದೇಹದ ಚಯಾಪಚಾಯ ಕ್ರಿಯೆ ಹೆಚ್ಚಿಸಲು ಸಹಾಯ ಮಾಡುತ್ತದೆ. ಚಿಯಾ ಬೀಜಗಳನ್ನು ಸೇವಿಸುವುದರಿಂದ ಒಳಾಂಗಗಳ ಅಡಿಪೋಸ್ ಅಂಗಾಂಶ ಕಡಿಮೆಯಾಗಲು ಸಹಾಯ ಮಾಡುತ್ತದೆ. ಈ ಅಂಗಾಂಶಗಳು ವಾಸ್ತವವಾಗಿ ಹೊಟ್ಟೆಯಲ್ಲಿನ ಕೊಬ್ಬಿನ ಅಂಗಾಂಶಕ್ಕೆ ಸಂಬಂಧಿಸಿವೆ ಮತ್ತು ಸ್ಥೂಲಕಾಯದ ಪ್ರಮುಖ ಅಂಶವಾಗಿದೆ.

ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ವಿರುದ್ಧ ಹೋರಾಡಲು:

ಈ ಬೀಜಗಳು ALA ಅಥವಾ ಆಲ್ಫಾ ಲಿಪೊಯಿಕ್ ಆಮ್ಲದಲ್ಲಿ ಸಮೃದ್ಧವಾಗಿವೆ ಎಂದು ಹೇಳಲಾಗಿದೆ. ಇದು ಗರ್ಭಕಂಠದ ಪ್ರದೇಶದಲ್ಲಿ ಮತ್ತು ಸ್ತನ ಕ್ಯಾನ್ಸರ್‌ ಗೆ ಕ್ಯಾನ್ಸರ್ ಕೋಶಗಳ ಬೆಳವಣಿಗೆ ಮಿತಿಗೊಳಿಸಲು ಸಹಾಯ ಮಾಡುತ್ತದೆ. ಚೀಯಾ ಬೀಜಗಳು ದೇಹದಲ್ಲಿನ ಆರೋಗ್ಯಕರ ಕೋಶಗಳಿಗೆ ತೊಂದರೆಯಾಗದಂತೆ ಹಾನಿಕಾರಕ ಕ್ಯಾನ್ಸರ್ ಕೋಶಗಳನ್ನು ನಾಶಮಾಡುತ್ತವೆ. ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಹಿಳೆಯರು ತಮ್ಮ ಆಹಾರದಲ್ಲಿ ಚಿಯಾ ಬೀಜಗಳನ್ನು ಸೇರಿಸಿಕೊಳ್ಳಬೇಕು. ಹೀಗಾಗಿ ಚೀಯಾ ಬೀಜಗಳು ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯಕವಾಗಿದೆ.

*ಕಾವ್ಯಶ್ರೀ

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಬಚ್ಚನ್, ಮೋಹನ್‌ಲಾಲ್‌ ನಂತಹ 20 ಸ್ಟಾರ್ಸ್‌ಗಳಿದ್ದರೂ ಅತ್ಯಂತ ಹೀನಾಯವಾಗಿ ಸೋತ ಸಿನಿಮಾವಿದು..

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

ಅಳಿವಿನಂಚಿನ ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

Birds Mystery: ಭಾರತದಲ್ಲೊಂದು ಪಕ್ಷಿಗಳು ಆತ್ಮಹ*ತ್ಯೆ ಮಾಡಿಕೊಳ್ಳುವ ನಿಗೂಢ ಸ್ಥಳ!

Birds Mystery: ಭಾರತದಲ್ಲೊಂದು ಪಕ್ಷಿಗಳು ಆತ್ಮಹ*ತ್ಯೆ ಮಾಡಿಕೊಳ್ಳುವ ನಿಗೂಢ ಸ್ಥಳ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.