ಹೊಟೇಲಿಗನ ಪ್ರಾಕ್ಟಿಕಲ್‌ ವೇದಾಂತ

ಚಂದ್ರ, ಹಕ್ಕಿ, ಹುಳು ಹೀಗೆ ಪ್ರಕೃತಿಯ 24 ಗುರುಗಳಿಂದ ನಾನು ಆನಂದವಾಗಿರಲು ಕಲಿತೆ.

Team Udayavani, Jan 22, 2022, 6:15 AM IST

ಹೊಟೇಲಿಗನ ಪ್ರಾಕ್ಟಿಕಲ್‌ ವೇದಾಂತ

ಶ್ರೀಕೃಷ್ಣ ಎರಡು ಗೀತೆಗಳನ್ನು ಹೇಳಿದ್ದ. ಒಂದು ಭಗವದ್ಗೀತೆ, ಇನ್ನೊಂದು ಉದ್ಧವ ಗೀತೆ. ಮೊದಲ ನೆಯದ್ದನ್ನು 70ನೆಯ ವಯಸ್ಸಿನಲ್ಲಿ ಅರ್ಜುನನಿಗೆ ಹೇಳಿದ್ದರೆ, ಎರಡನೆಯದ್ದನ್ನು ಸುಮಾರು 10 ವರ್ಷಗಳ ಬಳಿಕ ಉದ್ಧವನಿಗೆ ಹೇಳಿದ್ದ.

ಉದ್ಧವ ಗೀತೆಯೊಳಗೊಂದು ಉಪಗೀತೆ ಬರುತ್ತದೆ. ಅದು ಅವಧೂತ ಗೀತೆ. ಯದು ವಂಶದ ಮೂಲಪುರುಷ ಯಯಾತಿ ಮಹಾರಾಜನ ಮಗ ಯದು ಅವಧೂತನೊಬ್ಬನಿಂದ ಕಂಡುಕೊಂಡ ಗೀತೆ ಇದು. ಆ ಅವಧೂತ ಬಹಳ ಆನಂದದಿಂದ ಇರುವುದನ್ನು ಕಂಡು ಯದು “ನಮಗೆ ಇಷ್ಟೆಲ್ಲ ಅಧಿಕಾರವಿದ್ದರೂ ಆನಂದವಿಲ್ಲ. ನಿನಗೆ ಹೇಗೆ ಆನಂದಮಯ ಬದುಕು ಸಾಧ್ಯವಾಯಿತು’ ಎಂದು ಪ್ರಶ್ನಿಸಿದ. “ನಾನು ಯಾರ್ಯಾರೋ ಗುರುಗಳಿಂದ ಕಲಿತವನಲ್ಲ. ಗಾಳಿ, ಬೆಳಕು, ಸೂರ್ಯ, ಚಂದ್ರ, ಹಕ್ಕಿ, ಹುಳು ಹೀಗೆ ಪ್ರಕೃತಿಯ 24 ಗುರುಗಳಿಂದ ನಾನು ಆನಂದವಾಗಿರಲು ಕಲಿತೆ. ಆನಂದವಾಗಿರಲು ಪ್ರಕೃತಿಯಿಂದಲೇ ಪಾಠ ಕಲಿತೆ. ಇದು ಜೀವನಪಾಠ’ ಎಂದ ಅವಧೂತ.

ಉತ್ತರ ಕರ್ನಾಟಕದ ಗದುಗಿನಲ್ಲಿ ಹೊಟೇಲ್‌ ಉದ್ಯಮವನ್ನು ಒಬ್ಬರು ನಡೆಸುತ್ತಿದ್ದರು. ಒಮ್ಮೆ ಇವರ ಹೊಟೇಲಿಗೆ ಬೆಂಕಿ ಬಿತ್ತು. ಹಿಂದಿನ ದಿನವಷ್ಟೇ ಲಕ್ಷಾಂತರ ರೂ. ತಂದು ಗಲ್ಲ ಪೆಟ್ಟಿಗೆಯಲ್ಲಿರಿಸಿದ್ದರು. ಎಲ್ಲವೂ ಸುಟ್ಟು ಕರಕಲಾಯಿತು. ಸಾಹುಕಾರರಿಗೆ ವಿಷಯ ತಿಳಿಸಿ ಅವರು ಬಂದರು. ಆಗ ಅವರು ತೆಗೆದ ಉದ್ಗಾರ: “ಅಯ್ಯೋ ಆ ಹಣವನ್ನು ನಿನ್ನೆಯೇ ಅಗತ್ಯವಿದ್ದವರಿಗೆ ಕೊಡಬಹುದಿತ್ತು. ಈಗ ಅನ್ಯಾಯವಾಗಿ ಸುಟ್ಟು ಭಸ್ಮವಾಯಿತಲ್ಲ?’. ಹಿಂದಿನ ದಿನ ಲಕ್ಷಾಧೀಶ, ಮರುದಿನ ಕಡುಬಡವನಾದವನೊಬ್ಬನ ಬಾಯಿಯಿಂದ ಬಂದ ಮಾತಿದು. ಇದಕ್ಕಿಂತ ದೊಡ್ಡ ಫಿಲಾಸಫಿ ಇನ್ನೇನು ಇದ್ದೀತು?

ಇವರು ಸಿರಿವಂತರಾಗಿದ್ದರೂ ಮನೆಯ ರೂಮಿಗೆ ಸೊಳ್ಳೆಪರದೆ ಹಾಕಿಸಿರಲಿಲ್ಲ. ಏಕೆಂದರೆ “ಲಾಡ್ಜ್  ನಲ್ಲಿ ಗ್ರಾಹಕ ರಿಂದ ಬಾಡಿಗೆ ಪಡೆಯುತ್ತಿದ್ದರೂ ಅಲ್ಲಿಗೆ ಸೊಳ್ಳೆ ಪರದೆ ಹಾಕದೆ ಇರುವಾಗ ಮನೆಯ ರೂಮಿಗೆ ಸೊಳ್ಳೆ ಪರದೆ ಹಾಕುವ ನೈತಿಕತೆ, ಅಧಿಕಾರ ನನಗೆ ಇದೆಯೆ?’

ಸಿರಿವಂತ ಹೊಟೇಲ್‌ ಸಾಹುಕಾರರೊಬ್ಬರ ಮನೆ ಅತ್ಯಾಧುನಿಕವಾಗಿರಲಿಲ್ಲ. “ಭಗವಂತ ನನ್ನನ್ನು ಕ್ಯಾಶಿಯರ್‌ ಆಗಿ ನೇಮಿಸಿದ್ದಾನೆ. ಬ್ಯಾಂಕ್‌ನ ಕ್ಯಾಶಿಯರ್‌ ಹಗಲೆಲ್ಲ ನಗದು ಎಣಿಸಿ ಅಲ್ಲೇ ತಿಜೋರಿಯಲ್ಲಿರಿಸಿ ಹೋಗಬೇಕಲ್ಲ? ಮನೆಗೆ ಕೊಂಡೊಯ್ದರೆ ಏನಾದೀತು? ಒಂದು ಹೊತ್ತು ಊಟಕ್ಕಿಲ್ಲದ ಎಷ್ಟು ಜನರು ಇದ್ದಾರೆ? ಭಗವಂತ ನನಗೆ ಸಂಪತ್ತು ಕೊಟ್ಟದ್ದು ಅಗತ್ಯವುಳ್ಳವರಿಗೆ ವಿತರಿಸಲು, ನನ್ನ ಐಶಾರಾಮಿತನಕ್ಕೆ ಅಲ್ಲ’ ಎಂಬ ಉತ್ತರ ಇವರದ್ದಾಗಿತ್ತು.
ಅವಧೂತ ಗೀತೆ ಬಗ್ಗೆ ಉಪನ್ಯಾಸ ನೀಡುತ್ತಿದ್ದ ಹಿರಿಯ ವಿದ್ವಾಂಸ ಡಾ| ಬನ್ನಂಜೆ ಗೋವಿಂದಾಚಾರ್ಯ, ಹೊಟೇಲ್‌ ಸಾಹುಕಾರರು ತನ್ನ ಕಣ್ಣು ತೆರೆಸಿದ ಉದಾಹರಣೆಗಳನ್ನು ಸಾಂದರ್ಭಿಕವಾಗಿ ವಿವರಿ ಸಿದ್ದಾರೆ. “ವೇದಾಂತದ ಗಂಧಗಾಳಿ ಇಲ್ಲದ ಇಂತ ಹವರಿಂದ ನಾನು ಸಾಕಷ್ಟು ತಿಳಿದು ಬೆಳೆದೆ. ಪ್ರಾಮಾಣಿಕತೆ ಇಲ್ಲದಿದ್ದರೆ ಎಂಥ ವೇದಾಂತ? ಈ ಹೊಟೇಲ್‌ ಸಾಹುಕಾರರನ್ನು ಕಂಡಾಗ ನನಗೆ ಗಾಂಧೀಜಿಯವರನ್ನು ಕಂಡಷ್ಟು ಸಂತೋಷವಾಯಿತು. ಸಾರ್ವ ಜನಿಕರಿಂದ ಸಂಗ್ರಹವಾದ ದೇಣಿಗೆಯಲ್ಲಿ ಎಂಟಾಣೆ (50 ಪೈಸೆ) ವ್ಯತ್ಯಾಸವಾದದ್ದಕ್ಕೆ ಗಾಂಧೀಜಿ 50 ಪೈಸೆ ಲೆಕ್ಕ ಸರಿಪಡಿಸದ ಹೊರತು ಮನೆಗೆ ಬರಬೇಡ ಎಂದು ಮಗನಿಗೆ ಹೇಳಿದ್ದರು’ ಎಂದು ಬನ್ನಂಜೆಯವರು ಬೆಟ್ಟು ಮಾಡಿದ್ದರು.

ಆ ಹೊಟೇಲ್‌ ಸಾಹುಕಾರ ಮಹಾನುಭಾವ ಕೆ.ನಾರಾಯಣ ರಾವ್‌. 1911ರ ಸೆ. 3ರಂದು ದ.ಕ. ಜಿಲ್ಲೆಯ ಪುತ್ತೂರು ತಾಲೂಕು ಕೊçಲದಲ್ಲಿ ಜನಿಸಿದ ರಾವ್‌ ಬಂಟ್ವಾಳದಲ್ಲಿ 4ನೆಯ ಫಾರ್ಮ್ ಓದುವಾಗಲೇ ಬಡತನದಿಂದ ಊರು ಬಿಟ್ಟವರು. 1930ರಲ್ಲಿ 250 ರೂ. ಬಂಡವಾಳದೊಂದಿಗೆ ಸಣ್ಣ ಹೊಟೇಲ್‌ ಆರಂಭಿಸಿದ ರಾವ್‌ 1948ರಲ್ಲಿ ದುರ್ಗಾ ಲಾಡ್ಜ್ ಪ್ರಾರಂಭಿಸಿದರು. ಹೊಟೇಲ್‌ಗೆ ಬೆಂಕಿ ಬಿದ್ದ ಘಟನೆ 1971ರಲ್ಲಿ ಸಂಭವಿಸಿತು. 1977ರ ಡಿ. 18ರಂದು ಇಹಲೋಕ ತ್ಯಜಿಸಿದರು.

ಸುಮಾರು 750 ವರ್ಷಗಳ ಹಿಂದಿನ ವಿಶ್ವದ ಅತೀ ಪ್ರಾಚೀನ ಹಸ್ತಪ್ರತಿ ಎನ್ನಲಾದ ಉಡುಪಿ ಪಲಿಮಾರು ಮಠದಲ್ಲಿದ್ದ ಶ್ರೀ ಹೃಷೀಕೇಶತೀರ್ಥರು ಬರೆದಿಟ್ಟ ಮಧ್ವಾಚಾರ್ಯರ ಸರ್ವಮೂಲಗ್ರಂಥವನ್ನು ಬನ್ನಂಜೆ ಗೋವಿಂದಾಚಾರ್ಯರು ಎಡಿಟ್‌ ಮಾಡಿದಾಗ ಅದರ ಪ್ರಕಟನೆಯ ಸಂಪೂರ್ಣ ವೆಚ್ಚ ಭರಿಸಿದವರು ನಾರಾಯಣ ರಾವ್‌. ಇವರಿಂದಾಗಿ ಭಂಡಾರಕೇರಿ, ಪೇಜಾವರ ಶ್ರೀಗಳ ಚಟುವಟಿಕೆಗಳ ಕೇಂದ್ರ ಕಾರ್ಯಾಲಯವಿದ್ದದ್ದು ಆಗ ಗದುಗಿನಲ್ಲಿ.

“ನೋಟಿನ ಬಂಡಲ್‌ಗ‌ಳು ಕರಕಲಾದುದನ್ನು ಬ್ಯಾಂಕ್‌ನವರಿಗೆ ದಾಖಲೆಗಾಗಿ ಕೊಟ್ಟಿದ್ದರು. ಆದರೆ ಬ್ಯಾಂಕ್‌ನವರು ನಿರಾಕರಿಸಿದರು’ ಎಂದು ಈಗ ಹೊಟೇಲ್‌ನ್ನು ನೋಡಿಕೊಳ್ಳುತ್ತಿರುವ ನಾರಾಯಣ ರಾಯರ ಅಳಿಯ ನಿಟ್ಟೆ ಕೆಮ್ಮಣ್ಣು ಮೂಲದ ಸುಧಾಕರ ರಾವ್‌ ಹೇಳುತ್ತಾರೆ.

ನಾರಾಯಣ ರಾಯರಿಗೆ 60 ವರ್ಷ ತುಂಬಿದಾಗ ಕುಮಾರವ್ಯಾಸನ ಆರಾಧ್ಯದೇವನಾದ ವೀರನಾರಾಯಣನ ಸನ್ನಿಧಿಯಲ್ಲಿ ಪೇಜಾವರ ಶ್ರೀಗಳ ಸಮ್ಮುಖದಲ್ಲಿ ಗೌರವಿಸಿದಾಗ ಜಾತಿಮತಭೇದವಿಲ್ಲದೆ ಇಡೀ ಗದುಗಿನ ನಗರವೇ ಅಭಿನಂದಿಸಿದ ಹಾಗೆ ಅನಿಸಿತ್ತು.

ಸುಮಾರು 60-70 ವರ್ಷಗಳ ಹಿಂದೆ ಬ್ರಹ್ಮಾವರದ ಚಾಂತಾರಿ ನಲ್ಲಿ ಕೋಳಿ ಅಂಕದ ನಿಪುಣ ಲಿಂಗಯ್ಯ ಪೂಜಾರಿ ಇದ್ದರು. ಇವರು ಬಹು ಸಮಯ ಕೋಳಿ ಜೂಜಿನಲ್ಲಿ ನಿರತರಾದರೂ ಚಾಂತಾರಿನ ಗರೋಡಿಯಲ್ಲಿ ಶಿವರಾಯನ ಪಾತ್ರಿಗಳಾಗಿ ದರ್ಶನಕ್ಕೆ ನಿಂತಾಗ ಅಟ್ಟಹಾಸದ ಸಿರಿವಂತರಿಗೆ ಸಿಂಹಸ್ವಪ್ನ. ಬಬ್ಬುಸ್ವಾಮಿ ದರ್ಶನದ ಬೆಳ್ಳೆಯ ಸೂರ್ಯಪಾತ್ರಿಯವರದೂ ಇಂತಹ ಶೈಲಿ. ಕೌಶಿಕನೆಂಬ ಋಷಿ, ಓರ್ವ ಗೃಹಿಣಿ, ಮಾಂಸ ಮಾರುವ ವ್ಯಾಧ ಈ ಮೂವರಲ್ಲಿ ಸಾಧನೆಯ ತುಲನೆ ಮಾಡುವ ಪ್ರಸಂಗ ಮಹಾಭಾರತದಲ್ಲಿ ಬರುತ್ತದೆ. ವ್ಯಾಧ “ಧರ್ಮವ್ಯಾಧ’ ಎನಿಸುತ್ತಾನೆ. ವೃತ್ತಿ ಯಾವುದೇ ಇದ್ದರೂ ಕರ್ತವ್ಯಪ್ರಜ್ಞೆ, ನಿರಹಂಕಾರ, ಅಂತರಂಗದ ಶುದ್ಧಿಯ ಮಹತ್ವ ಈ ಕಥಾನಕದಲ್ಲಿ ತಿಳಿಯುತ್ತದೆ.

ಬದುಕಿನ ಸಾರ್ಥಕ್ಯಕ್ಕೆ ನೈತಿಕ ಬಲ ಬಹಳ ಅಗತ್ಯ. ಹಣ, ಅಧಿಕಾರದಿಂದ ನೆಮ್ಮದಿ ಬರಲೂಬಹುದು- ಕೆಡಲೂಬಹುದು. ಹಣ, ಅಧಿಕಾರವಿಲ್ಲದಿದ್ದರೂ ನೆಮ್ಮದಿ ಗಳಿಸಲೂಬಹುದು- ಕಳೆದುಕೊಳ್ಳಲೂಬಹುದು. ವೃತ್ತಿ, ಹಣ, ಅಧಿಕಾರ, ಜಾತಿ, ಓದಿನ “ಅಂಟು’, “ಅಹಂ’ ದುಃಖ ತರಿಸಬಹುದು, ಅಂಟು, ಅಹಮಿಕೆ ಇಲ್ಲದಿದ್ದರೆ ಅಂತರಂಗದ ಶುದ್ಧಿಯಿಂದ ನೆಮ್ಮದಿ ಬರಬಹುದು. ಅವಧೂತ ಗೀತೆಯಂತೆ ಬಡವನಾಗಿಯೂ ಸುಖಿಸಬಹುದು. ಸಿರಿವಂತ ನಾರಾಯಣರಾಯರಂತೆ ತಾನಲ್ಲದೆ ಸುತ್ತಮುತ್ತಲ ಜಗತ್ತನ್ನೂ ಸುಖದಲ್ಲಿರಿಸಬಹುದು.

-ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.