Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
ಶ್ರೀರಾಮ್ ನಾಯಕ್, Apr 23, 2024, 5:35 PM IST
ಹಣ್ಣುಗಳ ರಾಜನೆಂದೇ ಪ್ರಸಿದ್ಧಿ ಪಡೆದಿರುವ ಮಾವು ಈಗ ಮಾರುಕಟ್ಟೆಯಲ್ಲಿ ತನ್ನದೇ ಆದ ಚಾಪು ಮೂಡಿಸುತ್ತಿವೆ. ಒಂದೆಡೆ ಉರಿ ಬಿಸಿಲು, ಮತ್ತೊಂದೆಡೆ ಚುನಾವಣೆ ಕಾವು ಇದರ ನಡುವೆ ಮಾವಿನಹಣ್ಣುಗಳದ್ದೇ ಕಾರುಬಾರು. ಮಾವಿನ ಹಣ್ಣು ತಿನ್ನಲು ಬಹಳ ರುಚಿ ಹಾಗೇ ಇದರಿಂದ ಮಾಡುವ ಬಗೆಬಗೆಯ ಖಾದ್ಯಗಳು ಕೂಡ ಅಷ್ಟೇ ರುಚಿಕರ.
ಜನರು ಸಾಮಾನ್ಯವಾಗಿ ಹಲವಾರು ಬಗೆಯ ಬಜ್ಜಿಗಳನ್ನು (ಪೋಡಿ) ತಿಂದಿರಬಹುದು. ಉದಾಃ ಕ್ಯಾಪ್ಸಿಕಂ ಬಜ್ಜಿ, ಬಟಾಟೆ ಬಜ್ಜಿ, ಬಾಳೇಕಾಯಿ ಬಜ್ಜಿ, ಬದನೆಕಾಯಿ ಬಜ್ಜಿ, ಹೀಗೆ ಹೇಳ್ತಾ ಹೋದರೆ ಒಂದು ದೊಡ್ಡ ಪಟ್ಟಿಯೇ ಮಾಡಬಹುದು. ಹಾಗೆಯೇ ಮಾವಿನ ಕಾಯಿಯಿಂದ ಕೂಡ ಹಲವು ಬಗೆಯ ತಿಂಡಿ-ತಿನಿಸುಗಳನ್ನು ತಯಾರಿಸುತ್ತಾರೆ.
ಬನ್ನಿ ನಾವಿಂದು ನಿಮಗಾಗಿ ವಿಭಿನ್ನ ಟೇಸ್ಟ್ನ “ಮಾವಿನ ಕಾಯಿಯ ಬಜ್ಜಿ”ಯನ್ನು ಹೇಗೆ ಮಾಡುವುದು ಎಂಬುವುದರ ಬಗ್ಗೆ ಹೇಳಿಕೊಡುತ್ತೇವೆ ಇದನ್ನು ನೀವು ಮನೆಯಲ್ಲಿಯೇ ಸುಲಭವಾಗಿ ಮಾಡಿ ಸವಿಯಬಹುದು.
ಮಾವಿನ ಕಾಯಿ ಬಜ್ಜಿ
ಬೇಕಾಗುವ ಸಾಮಗ್ರಿಗಳು
ಮಾವಿನ ಕಾಯಿ-2, ಕಡ್ಲೆಹಿಟ್ಟು-1ಕಪ್, ಅರಶಿನ ಪುಡಿ-ಸ್ವಲ್ಪ, ಶುಂಠಿ-ಬೆಳ್ಳುಳ್ಳಿ ಪೇಸ್ಟ್-1ಚಮಚ, ಮೆಣಸಿನ ಪುಡಿ-2ಚಮಚ, ಅಡುಗೆ ಸೋಡಾ-1 ಚಿಟಿಕೆ, ರುಚಿಗೆ ತಕ್ಕಷ್ಟು ಉಪ್ಪು, ಕರಿಯಲು ಎಣ್ಣೆ.
ತಯಾರಿಸುವ ವಿಧಾನ
ಮೊದಲಿಗೆ ಮಾವಿನ ಕಾಯಿಯನ್ನು ಚೆನ್ನಾಗಿ ತೊಳೆದು ನಿಮಗೆ ಬೇಕಾಗುವ ರೀತಿಯಲ್ಲಿ ಕಟ್ ಮಾಡಿಕೊಳ್ಳಿ. ನಂತರ ಒಂದು ಬೌಲ್ಗೆ ಕಡ್ಲೆಹಿಟ್ಟು,ಅಡುಗೆ ಸೋಡಾ, ಮೆಣಸಿನ ಪುಡಿ,ಅರಶಿನ ಪುಡಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಸ್ವಲ್ಪ ನೀರನ್ನು ಸೇರಿಸಿ ಹಿಟ್ಟನ್ನು ಚೆನ್ನಾಗಿ ಕಲಸಿಕೊಳ್ಳಿ.
ಆಮೇಲೆ ಒಂದು ಬಾಣಲೆಯಲ್ಲಿ ಕರಿಯಲು ಬೇಕಾಗುವಷ್ಟು ಎಣ್ಣೆ ಹಾಕಿ ಬಿಸಿ ಮಾಡಿ ಅದು ಬಿಸಿಯಾದ ಮೇಲೆ ಹೆಚ್ಚಿಟ್ಟುಕೊಂಡ ಮಾವಿನಕಾಯಿಯನ್ನು ಮಾಡಿಟ್ಟ ಹಿಟ್ಟಿನ ಮಿಶ್ರಣಕ್ಕೆ ಮುಳುಗಿಸಿ ಎಣ್ಣೆಗೆ ಹಾಕಿ ಎರಡೂ ಬದಿಯನ್ನು ಚೆನ್ನಾಗಿ ಬೇಯಿಸಿರಿ. ಬಿಸಿ-ಬಿಸಿಯಾದ ಮಾವಿನ ಕಾಯಿ ಬಜ್ಜಿ/ಪೋಡಿ ಪುದೀನಾ ಚಟ್ನಿಯೊಂದಿಗೆ ಸವಿಯಿರಿ.
-ಶ್ರೀರಾಮ್ ಜಿ. ನಾಯಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Success: ಬಡತನವನ್ನೇ ಸೋಲಿಸಿದಾಕೆಯ ಯಶೋಗಾಥೆ-ಭಿಕ್ಷೆ ಬೇಡುತ್ತಿದ್ದ ಬಾಲಕಿ ಈಗ ಡಾಕ್ಟರ್!
Maharashtra; ಚುನಾವಣ ಅಖಾಡ ಸಿದ್ದ: ಬಿಜೆಪಿ ಪಾಲಿಗೆ ಈ ಬಾರಿ ಭಾರೀ ಸವಾಲಿನ ಸ್ಥಿತಿ!
ಹೊಳೆಯುವ, ಆರೋಗ್ಯಕರ ತ್ವಚೆಗೆ 10 ಅತ್ಯುತ್ತಮ ನೈಸರ್ಗಿಕ ಪಾನೀಯಗಳು
Recipe: ಈ ಬಾರಿಯ ಹಬ್ಬಕ್ಕೆ ಸಕ್ಕರೆ-ಬೆಲ್ಲ ಬಳಸದೇ ಈ ಸಿಹಿ ಖಾದ್ಯ ತಯಾರಿಸಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.