Recipe: ಭಿನ್ನ ರುಚಿಯ ದೋಸೆ ತಿನ್ನಬೇಕು ಅನ್ನಿಸಿದ್ರೆ ಈ ತರ ದೋಸೆ ಟ್ರೈ ಮಾಡಿ…
ಮಕ್ಕಳಿಗೂ ಇಷ್ಟ ಆಗುತ್ತೆ ಈ ರೆಸಿಪಿ...
ಶ್ರೀರಾಮ್ ನಾಯಕ್, Oct 21, 2024, 6:23 PM IST
ದಿನಾ ಒಂದೇ ರೀತಿಯ ತಿಂಡಿ ಮಾಡಿ ಮಾಡಿ ಬೇಜಾರಾಗಿದ್ದರೆ ಚಿಂತಿಸ್ಬೇಡಿ ನಾವೊಂದು ನಿಮಗೆ ಸಿಂಪಲ್ ಆಗಿ ಸ್ಪೆಷಲ್ ದೋಸೆಯೊಂದನ್ನು ಮಾಡುವ ವಿಧಾನ ಹೇಳ್ತೇವೆ. ದೋಸೆ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಕೆಲವರಿಗೆ ಮಸಾಲಾ ದೋಸೆ ,ರವೆ ದೋಸೆ ಇಷ್ಟವಾದರೆ ಇನ್ನು ಕೆಲವರಿಗೆ ಈರುಳ್ಳಿ ದೋಸೆ ಇಷ್ಟವಾಗುತ್ತದೆ. ಆದರೆ ನಾವು ಇಂದು ಹತ್ತರಿಂದ ಹದಿನೈದು ನಿಮಿಷದಲ್ಲಿ ಸುಲಭದಲ್ಲಿ ಮಾಡಬಹುದಾದ ಮಸಾಲ ನೀರ್ ದೋಸೆ ಮಾಡುವುದು ಹೇಗೆ ಎಂಬುದನ್ನು ಸುಲಭ ರೀತಿಯಲ್ಲಿ ಹೇಳಿಕೊಡುತ್ತೇವೆ.
ಬನ್ನಿ ಹಾಗಾದರೆ ಮತ್ಯಾಕೆ ತಡ “ಮಸಾಲ ನೀರ್ ದೋಸೆ” ಮಾಡುವುದು ಹೇಗೆಂಬುದನ್ನು ತಿಳಿದುಕೊಂಡು ಬರೋಣ…
ಮಸಾಲ ನೀರ್ ದೋಸೆ
ಬೇಕಾಗುವ ಸಾಮಗ್ರಿಗಳು
ಬೆಳ್ತಿಗೆ ಅಕ್ಕಿ-2ಕಪ್,ಒಣಮೆಣಸು-4,ಕೊತ್ತಂಬರಿ ಬೀಜ-1ಚಮಚ,ಜೀರಿಗೆ-ಅರ್ಧ ಚಮಚ, ಹುಳಿ-ಸ್ವಲ್ಪ,ಬೆಲ್ಲ-ಸ್ವಲ್ಪ,ತೆಂಗಿನ ತುರಿ-ಅರ್ಧ ಕಪ್,ತೆಂಗಿನೆಣ್ಣೆ, ರುಚಿಗೆ ತಕ್ಕಷ್ಟು ಉಪ್ಪು.
ತಯಾರಿಸುವ ವಿಧಾನ
ಮೊದಲಿಗೆ ಬೆಳ್ತಿಗೆ ಅಕ್ಕಿಯನ್ನು 3ರಿಂದ4 ಗಂಟೆಗಳ ಕಾಲ ನೀರಿನಲ್ಲಿ ನೆನೆಸಿಟ್ಟುಕೊಳ್ಳಿ. ನಂತರ ನೆನೆಸಿಟ್ಟ ಅಕ್ಕಿಯನ್ನು ಚೆನ್ನಾಗಿ ತೊಳೆದು ಮಿಕ್ಸಿಜಾರಿಗೆ ಹಾಕಿ,ಅದಕ್ಕೆ ಕೊತ್ತಂಬರಿ ಬೀಜ, ಜೀರಿಗೆ, ಹುಳಿ, ಬೆಲ್ಲ, ಒಣಮೆಣಸು ಮತ್ತು ತುರಿದಿಟ್ಟ ತೆಂಗಿನ ತುರಿಯನ್ನು ಹಾಕಿ,ನೀರನ್ನು ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಿ.ತದನಂತರ ಉಪ್ಪನ್ನು ಹಾಕಿ, ಚೆನ್ನಾಗಿ ಮಿಶ್ರಣ ಮಾಡಿರಿ.ಆಬಳಿಕ ಹಿಟ್ಟನ್ನು 5ರಿಂದ10ನಿಮಿಷಗಳ ಕಾಲ ಹಾಗೆ ಬಿಡಿ.ನಂತರ ದೋಸೆ ಕಾವಲಿಗೆ ತೆಂಗಿನೆಣ್ಣೆಯನ್ನು ಸವರಿ ಮಾಡಿಟ್ಟ ಹಿಟ್ಟನ್ನು ಹಾಕಿ ಚೆನ್ನಾಗಿ ಕಾಯಿಸಿರಿ.
ಈಗ ನಿಮ್ಮ ಇಷ್ಟದ ಮಸಾಲ ನೀರ್ ದೋಸೆ ಸವಿಯಲು ಸಿದ್ದ. ಇದನ್ನು ಯಾವುದೇ ಚಟ್ನಿಯೊಂದಿಗೆ ತಿನ್ನಲು ಬಹಳ ರುಚಿಯಾಗುತ್ತದೆ.
-ಶ್ರೀರಾಮ್ ಜಿ . ನಾಯಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic To Coolie.. ಇಲ್ಲಿದೆ 2025ರ ಬಹು ನಿರೀಕ್ಷಿತ ಸೌತ್ ಇಂಡಿಯಾ ಸಿನಿಮಾಗಳ ಪಟ್ಟಿ
La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?
Tulu theater: ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ
Maharashtra Poll; ”ತ್ಯಾಗ” ಮಾಡಲು ಸಿದ್ಧರಾಗಬೇಕು.. ಶಿಂಧೆಗೆ ಬಿಜೆಪಿ ಸ್ಪಷ್ಟ ಸಂದೇಶ!
Beauty Tips: ನೈಸರ್ಗಿಕವಾಗಿ ಗುಲಾಬಿ ಬಣ್ಣದ ತುಟಿ ನಿಮ್ಮದಾಗಲು ಈ ಟಿಪ್ಸ್ ಬಳಸಿ
MUST WATCH
ಹೊಸ ಸೇರ್ಪಡೆ
Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ
Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ
Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ
Alvas College: ಮೂಡುಬಿದಿರೆಯಲ್ಲಿ ನ.10ರಂದು “ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ
Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.