Raj Deepak Shetty: ಕಣ್ಣಲ್ಲೇ ಮಿಂಚು ಹರಿಸುವ ಟೋಬಿಯ ಖಡಕ್ ವಿಲನ್ ರಾಜ್ ದೀಪಕ್ ಶೆಟ್ಟಿ


ಕೀರ್ತನ್ ಶೆಟ್ಟಿ ಬೋಳ, Aug 18, 2023, 11:44 AM IST

promising kannada actor raj deepak shetty

ನೀಳಕಾಯ, ಕುರುಚಲು ಗಡ್ಡ, ಕಣ್ಣಲ್ಲೇ ಮಿಂಚು ಹರಿಸುವ ವ್ಯಕ್ತಿತ್ವ.. ಖಳ ನಾಯಕನ ಪಾತ್ರಕ್ಕೆ ಹೇಳಿ ಮಾಡಿಸಿದಂತಹ ದೇಹದಾರ್ಡ್ಯತೆ. ಇದು ರಾಜ್ ದೀಪಕ್ ಶೆಟ್ಟಿ ಎಂಬ ಕಲಾವಿದನ ಕಂಡಾಗ ಉಂಟಾಗುವ ಭಾವ.

ಈ ಹಿಂದೆ ಹಲವು ಕನ್ನಡ, ತೆಲುಗು ಚಿತ್ರಗಳಲ್ಲಿ ನಟಿಸಿದ್ದ ರಾಜ್ ದೀಪಕ್ ಶೆಟ್ಟಿ ಇದೀಗ ಟೋಬಿ ಚಿತ್ರದ ಮೂಲಕ ಸಿನಿಪ್ರೇಮಿಗಳ ಎದುರು ಬರುತ್ತಿದ್ದಾರೆ. ಟ್ರೇಲರ್ ನಲ್ಲಿ ಕೇವಲ ಒಂದು ಡೈಲಾಗ್ ಮತ್ತು ಲುಕ್ ನಿಂದಲೇ ತನ್ನ ಪಾತ್ರದ ವಿಶಾಲತೆಯ ಸುಳಿವು ಕೊಟ್ಟಿದ್ದಾರೆ ರಾಜ್ ದೀಪಕ್.

44 ವರ್ಷದ ರಾಜ್ ದೀಪಕ್ ಶೆಟ್ಟಿ ಜನಿಸಿದ್ದು ಮಂಗಳೂರಿನಲ್ಲಿ. ಕುಡ್ಲದ ಮಿಲಾಗ್ರಿಸ್ ಮತ್ತು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ವ್ಯಾಸಂಗ ಮುಗಿಸಿದ ರಾಜ್ ದೀಪಕ್ ಬದುಕು ಕಟ್ಟಿಕೊಂಡಿದ್ದು ಬಣ್ಣದ ಜಗತ್ತಿನಲ್ಲಿ. ಕನ್ನಡ ಸೀರಿಯಲ್ ಗಳ ಮೂಲಕ ಕ್ಯಾಮರಾ ಎದುರಿಸಿದ ಅವರು ಕಾದಂಬರಿ, ಪ್ರೀತಿ ಇಲ್ಲದ ಮೇಲೆ, ನಿಗೂಢ, ಬಂದೆ ಬರುವ ಕಾಲ, ಮುತ್ತಿನ ತೆನೆ, ಲವ ಲವಿಕೆ, ನಿಹಾರಿಕಾ ಮುಂತಾದ ಧಾರವಾಹಿಗಳ ಮೂಲಕ ಕನ್ನಡಿಗರ ಮನೆ-ಮನಗಳಲ್ಲಿ ಜಾಗ ಪಡೆದವರು.

ಲವ ಲವಿಕೆ ಧಾರವಾಹಿಯಲ್ಲಿ ರಾಜ್ ದೀಪಕ್ ಶೆಟ್ಟಿ ಅವರ ನಟನೆ ಕಂಡ ನಿರ್ದೇಶಕ ಚೇತನ್ ಕುಮಾರ್ ಅವರು ಮೊದಲ ಬಾರಿಗೆ ಕಿರುತೆರೆಯಿಂದ ಬೆಳ್ಳಿತೆರೆಗೆ ಕರೆ ತಂದರು. ಧ್ರುವ ಸರ್ಜಾ ಮುಖ್ಯಪಾತ್ರದಲ್ಲಿ ನಟಿಸಿದ್ದ ‘ಭರ್ಜರಿ’ ಸಿನಿಮಾದಲ್ಲಿ ರಾಜ್ ದೀಪಕ್ ಮೊದಲ ಬಾರಿ ಖಡಕ್ ವಿಲನ್ ಆಗಿ ಮಿಂಚಿದರು. ಚಿತ್ರವು ಸೂಪರ್ ಹಿಟ್ ಆಗುತ್ತಿದ್ದಂತೆ ರಾಜ್ ದೀಪಕ್ ಶೆಟ್ಟಿ ಅವರಿಗೆ ಚಿತ್ರರಂಗದಿಂದ ಅವಕಾಶಗಳು ಬರಲಾರಂಭಿಸಿತು.

‘ಭರ್ಜರಿ’ ಚಿತ್ರೀಕರಣ ನಡೆಯುತ್ತಿದ್ದಂತೆ ‘ಟೈಗರ್’ ಮತ್ತು ‘ಶ್ರೀಕಂಠ’ ಚಿತ್ರದಲ್ಲಿ ಅವಕಾಶ ಸಿಕ್ಕಿತ್ತು. ನಂತರ ‘ವಾಸು ನಾನು ಪಕ್ಕ ಕಮರ್ಷಿಯಲ್’, ‘ಪ್ರಯಾಣಿಕರ ಗಮನಕ್ಕೆ’, ‘ಭರಾಟೆ’, ‘ಬಜಾರ್’, ‘ಪೊಗರು’, ‘ಆದಿ ಲಕ್ಷ್ಮೀ ಪುರಾಣ’ ಮುಂತಾದ ಹಿಟ್ ಚಿತ್ರಗಳಲ್ಲಿ ಕನ್ನಡ ಸಿನಿ ಪ್ರಿಯರ ಪ್ರೀತಿ ಪಡೆದಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಬ್ಯುಸಿ ಇರುವಾಗಲೇ ರಾಜ್ ದೀಪಕ್ ಶೆಟ್ಟಿ ಅವರ ಹೆಸರು ಗಡಿ ಮೀರಿ ತೆಲುಗಿನತ್ತ ಸಾಗಿತ್ತು. ಟಾಲಿವುಡ್ ನಲ್ಲಿ ಹಿಟ್ ಆದ ‘ಇಸ್ಮಾರ್ಟ್ ಶಂಕರ್’, ವಿಕ್ಟರಿ ವೆಂಕಟೇಶ್ ಅವರ ‘ನಾರಪ್ಪ’, ವಿರಾಟ ಪರ್ವಂ, ತಮಿಳಿನ ‘ಬ್ಯಾಟರಿ’ ಚಿತ್ರದಲ್ಲಿ ರಾಜ್ ದೀಪಕ್ ಶೆಟ್ಟಿ ನಟಿಸಿದ್ದಾರೆ.

ಸದ್ಯ ‘ಟೋಬಿ’ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ಎದುರು ಮಿಂಚಿರುವ ರಾಜ್ ದೀಪಕ್ ಶೆಟ್ಟಿ, ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಾರೆ. ”ಚಿತ್ರದಲ್ಲಿ ಆನಂದ ಎಂಬ ಎದುರಾಳಿ ನಟನಾಗಿ ನಟಿಸುತ್ತಿದ್ದೇನೆ. ನಾನು ಇಲ್ಲಿಯವರೆಗೆ ನಟಿಸಿದ ಅತ್ಯುತ್ತಮ ಪಾತ್ರಗಳಲ್ಲಿ ಇದು ಒಂದು. ಅತ್ಯಂತ ಸೂಕ್ಷ್ಮವಾದ ಆದರೆ ಕ್ರೂರ ಪಾತ್ರ. ನಾನು ಬೇರೆ ಸಿನಿಮಾಗಳಲ್ಲಿ ಮಾಡಿದ ಸಾಮಾನ್ಯ ವಿಲನ್ ಪಾತ್ರಗಳಂತಿಲ್ಲ. ಟ್ರೇಲರ್‌ ಗೆ ಸಿಕ್ಕ ಪ್ರತಿಕ್ರಿಯೆಯಿಂದ ಸಂತಸವಾಗಿದೆ. ಸಿನಿಮಾ ರಿಲೀಸ್‌ ಗಾಗಿ ಜನ ಕಾಯುತ್ತಿದ್ದಾರೆ. ಈ ಚಿತ್ರ ಖಂಡಿತಾ ಇಡೀ ತಂಡಕ್ಕೆ ಅವಕಾಶದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆಯಿದೆ” ಎನ್ನುತ್ತಾರೆ.

ಕನ್ನಡ ಚಿತ್ರರಂಗದಲ್ಲಿ ಬೇರೆ ಭಾಷೆಯಿಂದ ಬಂದ ಖಳ ನಟರು ಮಿಂಚುತ್ತಿರುವ ಸಮಯದಲ್ಲಿ ರಾಜ್ ದೀಪಕ್ ಶೆಟ್ಟಿ ಅವರು ನಮ್ಮವರೇ ಆಗಿ ಕಾಣಿಸುತ್ತಿದ್ದಾರೆ. ಯಾವುದೇ ವಿಲನ್ ಗಳಿಗೆ ಕಡಿಮೆ ಇಲ್ಲದಂತೆ ಕಾಣುವ ಕುಡ್ಲದ ಕುವರ ಭಾರತೀಯ ಸಿನಿಮಾದಲ್ಲಿ ತನ್ನದೇ ಛಾಪು ಮೂಡಿಸುವತ್ತ ಸಾಗುತ್ತಿದ್ದಾರೆ.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಬಚ್ಚನ್, ಮೋಹನ್‌ಲಾಲ್‌ ನಂತಹ 20 ಸ್ಟಾರ್ಸ್‌ಗಳಿದ್ದರೂ ಅತ್ಯಂತ ಹೀನಾಯವಾಗಿ ಸೋತ ಸಿನಿಮಾವಿದು..

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

ಅಳಿವಿನಂಚಿನ ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

Birds Mystery: ಭಾರತದಲ್ಲೊಂದು ಪಕ್ಷಿಗಳು ಆತ್ಮಹ*ತ್ಯೆ ಮಾಡಿಕೊಳ್ಳುವ ನಿಗೂಢ ಸ್ಥಳ!

Birds Mystery: ಭಾರತದಲ್ಲೊಂದು ಪಕ್ಷಿಗಳು ಆತ್ಮಹ*ತ್ಯೆ ಮಾಡಿಕೊಳ್ಳುವ ನಿಗೂಢ ಸ್ಥಳ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.