ಗೊರಕೆ ಸಮಸ್ಯೆಗೆ ಇಲ್ಲಿದೆ ಸರಳ ಪರಿಹಾರ


ಆದರ್ಶ ಕೊಡಚಾದ್ರಿ, May 24, 2021, 3:41 PM IST

Snoring is the problem

ನಿದ್ರೆ ಪ್ರತಿಯೊಬ್ಬರ ಬದುಕಿನಲ್ಲಿ ಅತ್ಯಂತ ಸುಂದರ ಕ್ಷಣಗಳಲ್ಲಿ ಒಂದು. ಸರಿಯಾದ ಸಮಯಕ್ಕೆ ನಿದ್ರೆ ಮಾಡುವುದು ಮಾನಸಿಕ ನೆಮ್ಮದಿಯನ್ನು ನೀಡುವುದರ ಜೊತೆ ಜೊತೆಗೆ ದೈಹಿಕ ಆರೋಗ್ಯದ ಸಮತೋಲನದಲ್ಲಿಯೂ  ಅತ್ಯಂತ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ. ಆದರೆ ಈ ಸುಖಕರವಾದ ನಿದ್ದೆ ಮಾಡುವಾಗ ಪಕ್ಕದಲ್ಲಿರುವವರ ಗೊರಕೆ ಸದ್ದು ನಮ್ಮ  ಸುಂದರ ಕನಸಿನ ನಿದ್ದೆಯನ್ನು ಹಾಳು ಮಾಡಿಬಿಡಬಹುದು.

ನಿಮ್ಮ ಮನೆಯಲ್ಲಿರುವವರ ಗೊರಕೆಯ ಸಮಸ್ಯೆ ನಿಮ್ಮ ನಿದ್ದೆಯನ್ನು ಹಾಳುಮಾಡುತ್ತಿರಬಹುದು. ಅದೆಷ್ಟೋ ಸನ್ನಿವೇಶಗಳಲ್ಲಿ ಈ ಗೊರಕೆಯ ಸಮಸ್ಯೆ ಗಂಡ -ಹೆಂಡತಿಯರ ದಾಂಪತ್ಯ ಬದುಕಿನ ಮೇಲೆ ಪ್ರಭಾವ ಬೇರುವ ಮೂಲಕ ದಂಪತಿಗಳು ಪರಸ್ಪರ ದೂರವಾಗುವ ಸನ್ನೆವೇಶಗಳನ್ನು ನಾವು ಕೇಳಿದ್ದೇವೆ. ಆದರೆ ಗೊರಕೆಯಂತಹ ಸಮಸ್ಯೆ ಹೊಂದಿರುವ  ವ್ಯಕ್ತಿಯನ್ನು ದೂರ ತಳ್ಳುವುದರ ಬದಲಾಗಿ  ಕೆಲವು ಮನೆಮದ್ದುಗಳನ್ನು ಬಳಸುವ ಮೂಲಕ ಈ ಸಮಸ್ಯೆಯಿಂದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.

ಒಂದು ವೇಳೆ ನಿಮ್ಮ ಜೊತೆಗಿರುವವರಲ್ಲಿ ಗೊರಕೆಯ ಸಮಸ್ಯೆ ಇದ್ದರೆ ಅಥವಾ ನಿಮಗೆ ಈ ಸಮಸ್ಯೆ ಇದ್ದರೆ  ಕೆಳಕಂಡ ವಿಧಾನವನ್ನು ಪಾಲಿಸಿ ಗೊರಕೆ ಸಮಸ್ಯೆಯಿಂದ ಪಾರಾಗಬಹುದಾಗಿದೆ

ಸ್ಟೀಮ್ ತೆಗೆದುಕೊಳ್ಳುವುದು

ಸಾಮಾನ್ಯವಾಗಿ ಶೀತ ಅಥವಾ ಜ್ವರದಂತಹ ಸಮಸ್ಯೆಗಳಿದ್ದಾಗ  ಮೂಗು ಕಟ್ಟಿ ಗೊರಕೆ ಹೊಡೆಯುವ ಸಾಧ್ಯತೆ ಇರುತ್ತದೆ. ಆದ್ದರಿಂದ ಒಂದು ದೊಡ್ಡ ಬಟ್ಟಲಿನಲ್ಲಿ ಸ್ವಲ್ಪ ಬಿಸಿನೀರನ್ನು ಸುರಿಯಿರಿ. ಇದಕ್ಕೆ ನೀಲಗಿರಿ, ಬೇವು ಅಥವಾ ಯಾವುದೇ ಸಾರಭೂತ ಎಣ್ಣೆಯನ್ನು ಮೂರರಿಂದ ನಾಲ್ಕು ಹನಿಗಳನ್ನು ಸೇರಿಸಿ. ನಿಮ್ಮ ಮುಖವನ್ನು ನೀರಿನ ಹತ್ತಿರಕ್ಕೆ ತಂದ ನಂತರ, ನಿಮ್ಮ ತಲೆ ಮೇಲೆ ಟವೆಲ್ ಹಾಕಿ ಈ ಹಬೆಯನ್ನು ತೆಗೆದುಕೊಳ್ಳಿ. ಹಬೆಯನ್ನು ತೆಗೆದುಕೊಳ್ಳುವಾಗ ಉಚ್ಛ್ವಾಸ ಮತ್ತು ನಿಶ್ವಾಸಗಳನ್ನು ಮಾಡಿ ಇದರಿಂದ ಮೂಗಿನಲ್ಲಿ ಸಂಗ್ರಹವಾದ ಅಂಶ ಕರಗಿ ಸಮಸ್ಯೆ ಪರಿಹಾರವಾಗುತ್ತದೆ.

ಆಲ್ಕೊಹಾಲ್ ತ್ಯೆಜಿಸಿ

ಆಲ್ಕೊಹಾಲ್ ನಿದ್ರಾಜನಕವಾಗಿ ಕಾರ್ಯನಿರ್ವಹಿಸುತ್ತದೆ, ನಿಮ್ಮ ಗಂಟಲಿನ ಹಿಂಭಾಗದಲ್ಲಿರುವ ಸ್ನಾಯುಗಳ ಮೇಲೆ ಉದ್ವೇಗವನ್ನು ಕಡಿಮೆ ಮಾಡುತ್ತದೆ, ಇದರಿಂದಾಗಿ ನಿಮ್ಮ ಗೊರಕೆಯ ಸಮಸ್ಯೆ ಹೆಚ್ಚಾಗುತ್ತದೆ. ತಂಬಾಕು ಹೊಗೆ, ಮತ್ತೊಂದೆಡೆ ಗಂಟಲಿನಲ್ಲಿರುವ ಲೋಳೆಯ ಪೊರೆಗಳನ್ನು ಕೆರಳಿಸಬಹುದು. ಆದ್ದರಿಂದ ಈ ಎರಡನ್ನೂ ನೀವು ಸಂಪೂರ್ಣವಾಗಿ ಬಿಟ್ಟುಬಿಡಲು ಸಾಧ್ಯವಾಗದಿದ್ದರೂ, ನೀವು ಆಲ್ಕೊಹಾಲ್ ಸೇವನೆ ಮತ್ತು ಸಿಗರೇಟ್ ಬಳಕೆ ಮಾಡುವ  ಸಂಖ್ಯೆಯನ್ನು ಕಡಿಮೆ ಮಾಡಿಕೊಳ್ಳುವುದು ಬಹಳ ಮುಖ್ಯ. ಹೀಗೆ  ಮಾಡುವುದರಿಂದ ಕೇವಲ ಗೊರಕೆ ಸಮಸ್ಯೆ ಮಾತ್ರವಲ್ಲದೆ ಆಲ್ಕೊಹಾಲ್ ಸೇವನೆಯಿಂದ ಕಂಡುಬರುವ ಹಲವಾರು ಸಮಸ್ಯೆಗಳಿಂದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ,

ಬೆಳ್ಳುಳ್ಳಿಯ ಬಳಕೆ

ಬೆಳ್ಳುಳ್ಳಿಯಲ್ಲಿ ಹಲವಾರು ರೋಗ ನಿರೋಧಕ ಅಂಶಗಳಿದ್ದು, ಹಲವಾರು ಆರೋಗ್ಯದ ಸಮಸ್ಯೆಗಳಿಗೆ ಇದು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ, ಬೆಳ್ಳುಳ್ಳಿಯ ಸೂಕ್ಷ್ಮಜೀವಿಯ ವಿರೋಧಿ ಗುಣಲಕ್ಷಣಗಳು ಮೂಗಿನ ಮಾರ್ಗದಲ್ಲಿರುವ ಲೋಳೆ ತೊಡೆದುಹಾಕಲು ಸಹಾಯ ಮಾಡುತ್ತದೆ. ಬರೀ ಸಾಮಾನ್ಯ ಶೀತದಿಂದಾಗಿ ನೀವು ಗೊರಕೆ ಹೊಡೆಯುತ್ತಿದ್ದರೆ, ಬೆಳ್ಳುಳ್ಳಿ ನಿಮಗೆ ಅದನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸಹಾಯ ಮಾಡುತ್ತದೆ. ಹಸಿ ಬೆಳ್ಳುಳ್ಳಿ ಮತ್ತು  ಲವಂಗವನ್ನು ಅಗಿಯಿರಿ. ನಂತರ ಒಂದು ಲೋಟ ನೀರನ್ನು ಕುಡಿಯಿರಿ. ಮಲಗುವ ಮುನ್ನ ಕನಿಷ್ಠ 20 ರಿಂದ 30 ನಿಮಿಷಗಳಾದರೂ ಇದನ್ನು ಅನುಸರಿಸುವುದು ಉತ್ತಮ.

ಬಿಸಿ ನೀರಿನ ಬಳಕೆ

ಪ್ರತಿನಿತ್ಯ ರಾತ್ರಿ ಮಲಗುವ ಮುನ್ನ ಬಿಸಿ -ಬಸಿಯಾದ  ನೀರನ್ನು ಸೇವನೆ ಮಾಡುವುದರಿಂದ  ಸಾಮಾನ್ಯ ಶೀತದಿಂದ ಗಂಟಲಿನಲ್ಲಿ ಸಂಗ್ರಹವಾಗಿರುವ ಲೋಳೆಯಂತಹ ಅಂಶ ಕರಗುತ್ತದೆ. ಇದರಿಂದ ಗೊರಕೆ ಸಮಸ್ಯೆಯಿಂದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.

ಅರಿಶಿನ ಬಳಕೆ

ಸಾಮಾನ್ಯವಾಗಿ ಎಲ್ಲಾ ವಿಧವಾದ ಆರೋಗ್ಯ ಸಮಸ್ಯೆಗಳಿಗೆ ಅರಶಿನದ ಬಳಕೆ ಅತ್ಯಂತ ಪ್ರಮುಖವಾದ ಮದ್ದಾಗಿ ಕಾರ್ಯನಿರ್ವಹಿಸುತ್ತದೆ. ಇದು ಪ್ರಬಲವಾದ ನಂಜು ನಿರೋಧಕ ಎಂದು ತಿಳಿದುಬಂದಿದೆ. ಇದು ನಿಮ್ಮ ಗೊರಕೆ ಸಮಸ್ಯೆಗೆ ಪರಿಣಾಮಕಾರಿ ಚಿಕಿತ್ಸೆ ನೀಡುತ್ತದೆ. ಒಂದು ಗ್ಲಾಸ್ ಬಿಸಿ ಹಾಲಿಗೆ ಎರಡು ಚಮಚ ತಾಜಾ ಅರಿಶಿನ ಪುಡಿಯನ್ನು ಸೇರಿಸಿ, ಮಲಗುವ ಮುನ್ನ ಬೆರೆಸಿ ಕುಡಿಯಿರಿ. ಹೀಗೆ ಅರಶಿನವನ್ನು ಸೇವನೆ ಮಾಡುವುದರಿಂದ ಸಮಸ್ಯೆಯಿಂದ ಬಹುಬೇಗ ಗುಣಮುಖವಾಗಬಹುದಾಗಿದೆ.

ಏಲಕ್ಕಿ

ಭಾರತೀಯ ಆಹಾರ ಪರಂಪರೆಯಲ್ಲಿ ಹಲವಾರು ಮಸಾಲೆಗಳಿದ್ದು, ಇವುಗಳು ತನ್ನಲ್ಲಿ ಬಹಳಷ್ಟು ಆರೋಗ್ಯಕರ ಅಂಶಗಳನ್ನು ಒಳಗೊಂಡಿದೆ. ಅವುಗಳಲ್ಲಿ ಏಲಕ್ಕಿ ಕೂಡಾ ಒಂದು . ಈ ಮಸಾಲೆ ಅತ್ಯುತ್ತಮ ಎಕ್ಸ್‌ಪೆಕ್ಟೊರೆಂಟ್ ಮತ್ತು ಡಿಕೊಂಜೆಸ್ಟೆಂಟ್ ಆಗಿದೆ. ಇದರಿಂದಾಗಿ ಉಸಿರಾಟದ ಜಾಗದ ಉದ್ದಕ್ಕೂ ಗಾಳಿಯನ್ನು ಸ್ಪಷ್ಟವಾಗಿ ಸಾಗಿಸಲು ಸಹಾಯ ಮಾಡುತ್ತದೆ. ಒಂದು ಲೋಟ ಬೆಚ್ಚಗಿನ ನೀರಿಗೆ ಸುಮಾರು ಒಂದೂವರೆ ಟೀಸ್ಪೂನ್ ಏಲಕ್ಕಿ ಪುಡಿಯನ್ನು ಸೇರಿಸಿ ಮತ್ತು ಮಲಗುವ ಮುನ್ನ ಕನಿಷ್ಠ ಅರ್ಧ ಘಂಟೆಯಾದರೂ ಮುಂಚೆ ಕುಡಿಯಿರಿ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1

ಬಚ್ಚನ್, ಮೋಹನ್‌ಲಾಲ್‌ ನಂತಹ 20 ಸ್ಟಾರ್ಸ್‌ಗಳಿದ್ದರೂ ಅತ್ಯಂತ ಹೀನಾಯವಾಗಿ ಸೋತ ಸಿನಿಮಾವಿದು..

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

ಅಳಿವಿನಂಚಿನ ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.