Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಇದು ಸಹಕಾರಿ....
ಶ್ರೀರಾಮ್ ನಾಯಕ್, Sep 20, 2024, 5:33 PM IST
ಹಿಂದಿನ ಕಾಲದಲ್ಲಿ ಋಷಿ ಮುನಿಗಳು ಹಾಗೂ ಆದಿವಾಸಿಗಳು ಗೆಡ್ಡೆಗೆಣಸು ತಿಂದು ಬದುಕಿದ್ದರು ಎಂಬುದು ಕೇಳಿರುತ್ತೇವೆ. ಆದರೆ ಕಾಲ ಬದಲಾದಂತೆ ಜನರ ಆಹಾರ ಪದ್ಧತಿಯು ಬದಲಾಗುತ್ತದೆ. ಆದರೆ ಗೆಣಸಿನಲ್ಲಿ ಇರುವ ಮಹತ್ವ ಕೇಳಿದರೆ ಸಾಕು ಈಗಿನಿಂದಲೇ ತಿನ್ನಲು ಪ್ರಾರಂಭಿಸುತ್ತಾರೆ. ಈ ಗೆಣಸಿನಲ್ಲಿ ನಾರಿನಾಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ದೃಷ್ಟಿಯಲ್ಲಿ ಬಹಳ ಒಳ್ಳೆಯದು. ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಹಾಗೂ ಚರ್ಮದ ಮೈಕಾಂತಿ ವೃದ್ಧಿಸಲು ಇದು ಸಹಕಾರಿ.
ಫಾಸ್ಟ್ ಫುಡ್ ಆಹಾರಗಳಿಗೆ ಹೆಚ್ಚು ಜನರು ಮಾರು ಹೋಗಿರುವ ಈ ಕಾಲದಲ್ಲಿ ಸಾಂಪ್ರದಾಯಿಕ ಅಡುಗೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಇಂದು ನಿಮಗಾಗಿ ಸಿಹಿ ಗೆಣಸು ಬಳಸಿಕೊಂಡು ಕಟ್ಲೆಟ್ ಮಾಡುವುದು ಹೇಗೆಂದು ತಿಳಿಸುತ್ತೇವೆ.
ಸಿಹಿಗೆಣಸಿನ ಕಟ್ಲೆಟ್ (Sweet Potato Cutlet)
ಬೇಕಾಗುವ ಸಾಮಗ್ರಿಗಳು
ಬೇಯಿಸಿದ ಸಿಹಿಗೆಣಸು-3,ಈರುಳ್ಳಿ ಸಣ್ಣಗೆ ಹೆಚ್ಚಿದ್ದು-2, ಹಸಿಬಟಾಣಿ-4ಚಮಚ, ತುರಿದ ಕ್ಯಾರೆಟ್-2 ಚಮಚ, ಆಮ್ಚೂರ್ ಪುಡಿ- ಅರ್ಧ ಟೀಸ್ಪೂನ್, ಗರಂ ಮಸಾಲ ಪುಡಿ -ಅರ್ಧ ಟೀಸ್ಪೂನ್, ಹಸಿಮೆಣಸು-2, ಕರಿಬೇವು-ಸ್ವಲ್ಪ, ಕೊತ್ತಂಬರಿ ಸೊಪ್ಪು-ಸ್ವಲ್ಪ, ಅರಿಶಿನ ಪುಡಿ-1/4 ಟೀಸ್ಪೂನ್, ಜೀರಿಗೆ ಪುಡಿ-ಅರ್ಧ ಚಮಚ, ಧನಿಯಾ ಪುಡಿ-ಅರ್ಧ ಚಮಚ, ಪೆಪ್ಪರ್ ಪುಡಿ-1/4 ಟೀಸ್ಪೂನ್, ಮೆಣಸಿನ ಪುಡಿ-2ಚಮಚ, ಎಣ್ಣೆ, ಬ್ರೆಡ್ ಕ್ರಂಬ್ಸ್ ಅಥವಾ ಬಾಂಬೈ ರವೆ-ಸ್ವಲ್ಪ, ರುಚಿಗೆ ತಕ್ಕಷ್ಟು ಉಪ್ಪು.
ತಯಾರಿಸುವ ವಿಧಾನ
ಮೊದಲಿಗೆ ಒಂದು ಬೌಲ್ ಗೆ ಬೇಯಿಸಿಟ್ಟ ಸಿಹಿಗೆಣಸಿನ ಸಿಪ್ಪೆ ತೆಗೆದು ಚೆನ್ನಾಗಿ ಹಿಸುಕಿ(ಮ್ಯಾಶ್) ಅದಕ್ಕೆ ಬೇಯಿಸಿದ ಹಸಿಬಟಾಣಿ, ತುರಿದ ಕ್ಯಾರೆಟ್ ಮತ್ತು ಸಣ್ಣಗೆ ಹೆಚ್ಚಿದ ಈರುಳ್ಳಿಯನ್ನು ಹಾಕಿ ಸರಿಯಾಗಿ ಮಿಕ್ಸ್ ಮಾಡಿಕೊಳ್ಳಿ.ನಂತರ ಮೆಣಸಿನ ಪುಡಿ,ಅರಿಶಿನ ಪುಡಿ, ಜೀರಿಗೆ, ಪೆಪ್ಪರ್, ಧನಿಯಾ ಪುಡಿ, ಆಮ್ಚೂರ್ ಪುಡಿ, ಗರಂ ಮಸಾಲ, ಸಣ್ಣಗೆ ಹೆಚ್ಚಿದ ಹಸಿಮೆಣಸು ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಪುನಃ ಮಿಕ್ಸ್ ಮಾಡಿಕೊಳ್ಳಿ. ತದನಂತರ ಕೊತ್ತಂಬರಿ ಸೊಪ್ಪು ಹಾಗೂ ಕರಿಬೇವಿನ ಎಲೆ ಹಾಕಿ ಸಣ್ಣ-ಸಣ್ಣ ಉಂಡೆ ಕಟ್ಟಿ ತುಸು ಒತ್ತಿ ಚಪ್ಪಟೆ ಮಾಡಿಕೊಳ್ಳಿ. ನಂತರ ಒಲೆಯ ಮೇಲೆ ದೋಸೆ ಕಾವಲಿ ಇಟ್ಟು ಎಣ್ಣೆ ಹಾಕಿ ಕಾದಮೇಲೆ ಮಾಡಿಟ್ಟ ಕಟ್ಲೆಟ್ ನ್ನು ಬಾಂಬೈರವೆ ಅಥವಾ ಬ್ರೆಡ್ ಕ್ರಂಬ್ಸ್ ನಲ್ಲಿ ಹೊರಳಿಸಿ ಕಾವಲಿಗೆ ಹಾಕಿ ಎರಡೂ ಬದಿ ಕಾಯಿಸಿದರೆ ಬಿಸಿ-ಬಿಸಿಯಾದ ಸಿಹಿಗೆಣಸಿನ ಕಟ್ಲೆಟ್ ಟೊಮ್ಯಾಟೋ ಸಾಸ್ ಜೊತೆ ಸವಿಯಿರಿ.
*ಶ್ರೀರಾಮ್ ನಾಯಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Harmanpreet Singh: ಹಾರ್ಮೋನಿಯಂ ಹುಚ್ಚಿದ್ದ ಹಳ್ಳಿಯ ಹುಡುಗ ಇದೀಗ ಹಾಕಿ ಸೂಪರ್ ಸ್ಟಾರ್
India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!
ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ
Smriti Irani ದೆಹಲಿ ಬಿಜೆಪಿಯಲ್ಲಿ ಸಕ್ರಿಯ: ”ಸಿಎಂ ಫೇಸ್” ಆಗಿ ಕೇಳಿ ಬರುತ್ತಿರುವ ಹೆಸರು!
International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.