ಅಫ್ಘಾನ್ ನಲ್ಲಿ ಭಾರತೀಯರ ಅಪಹರಣ ಸಾಧ್ಯತೆ? ತಾಲಿಬಾನ್ ಉಗ್ರರಿಂದ ಬಲವಂತದ ವಿವಾಹ!

ಅಮೆರಿಕದ ನಡೆ ಅಚ್ಚರಿಗೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Team Udayavani, Aug 13, 2021, 1:39 PM IST

ಅಫ್ಘಾನ್ ನಲ್ಲಿ ಭಾರತೀಯರ ಅಪಹರಣ ಸಾಧ್ಯತೆ? ತಾಲಿಬಾನ್ ಉಗ್ರರಿಂದ ಬಲವಂತದ ವಿವಾಹ!

ಯುದ್ಧ ಗ್ರಸ್ಥ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಬಂಡುಕೋರರು ವಿಧ್ವಂಸಕ ಕೃತ್ಯಗಳನ್ನು ಮುಂದುವರೆಸುವ ಮೂಲಕ ಒಂದೊಂದೇ ಪ್ರಾಂತೀಯ ರಾಜಧಾನಿಗಳನ್ನು ತಮ್ಮ ವಶಕ್ಕೆ ಪಡೆಯುತ್ತಿದ್ದಾರೆ. ಏತನ್ಮಧ್ಯೆ ಅತೀ ದೊಡ್ಡ ನಗರವಾದ ಕಂದಹಾರ್, ಲಷ್ಕರ್ ಘಾ ನಗರವನ್ನು ತನ್ನ ಹಿಡಿತಕ್ಕೆ ಪಡೆದಿದೆ ಎಂದು ವರದಿ ತಿಳಿಸಿದೆ.

ಕಂದಹಾರ್ ಮತ್ತು ಲಷ್ಕರ್ ಘಾ ನಗರಗಳನ್ನು ತಾಲಿಬಾನ್ ಬಂಡುಕೋರರು ತಮ್ಮ ವಶಕ್ಕೆ ಪಡೆದ ನಂತರ ಅವಿವಾಹಿತ ಯುವತಿಯರು ತಾಲಿಬಾನ್ ಉಗ್ರರನ್ನು ಮದುವೆಯಾಗುವಂತೆ ಬಲವಂತಪಡಿಸುವ ಮೂಲಕ ಲೈಂಗಿಕ ಹಿಂಸಾಚಾರಕ್ಕೆ ಇಳಿದಿರುವುದಾಗಿ ಮಾನವ ಹಕ್ಕು ಸಂಘಟನೆ ಆರೋಪಿಸಿದೆ.

ತಾಲಿಬಾನ್ ಬಂಡುಕೋರರು ದಕ್ಷಿಣದ ಪ್ರಮುಖ ನಗರವಾದ ಲಷ್ಕರ್ ಘಾ ಪ್ರದೇಶವನ್ನು ವಶಕ್ಕೆ ಪಡೆದಿರುವುದಾಗಿ ಅಫ್ಘಾನಿಸ್ತಾನದ ಹಿರಿಯ ಭದ್ರತಾ ಅಧಿಕಾರಿಯೊಬ್ಬರು ಎಎಫ್ ಪಿಗೆ ತಿಳಿಸಿದ್ದಾರೆ. ಉಗ್ರರು ನಗರವನ್ನು ವಶಕ್ಕೆ ಪಡೆದ ನಂತರ ಸೈನಿಕರು ಮತ್ತು ಸರ್ಕಾರಿ ಅಧಿಕಾರಿಗಳನ್ನು ನಗರದಿಂದ ಹೊರ ಕಳುಹಿಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

ಭಾರತೀಯ ಪ್ರಜೆಗಳ ಅಪಹರಣ ಸಾಧ್ಯತೆ?

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸದ ನಡುವೆ ಭಾರತ ಕೂಡಾ ಕಳವಳ ವ್ಯಕ್ತಪಡಿಸಿದ್ದು, ಅಫ್ಘಾನಿಸ್ತಾನದಲ್ಲಿ ಅಂದಾಜು 1,500 ಮಂದಿ ಭಾರತೀಯ ಪ್ರಜೆಗಳಿದ್ದಾರೆ. ಅಲ್ಲದೇ ಭಾರತೀಯ ಪ್ರಜೆಗಳ ಅಪಹರಣ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಕೂಡಲೇ ಭಾರತೀಯ ಪ್ರಜೆಗಳು ವಾಣಿಜ್ಯ (ಕಮರ್ಷಿಯಲ್) ವಿಮಾನದಲ್ಲಿ ತಾಯ್ನಾಡಿಗೆ ವಾಪಸ್ ಆಗುವಂತೆ ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿದೆ. ಈಗಾಗಲೇ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಈ ಬಗ್ಗೆ ಕಾರ್ಯ ಪ್ರವೃತ್ತವಾಗಿದೆ ಎಂದು ತಿಳಿಸಿದೆ.

ಕಳೆದ ಹತ್ತು ದಿನಗಳಲ್ಲಿ ತಾಲಿಬಾನ್ ಬಂಡುಕೋರರು ಕಂದಹಾರ್ ಸೇರಿದಂತೆ ಬಹುತೇಕ ಪ್ರಾಂತೀಯ ರಾಜಧಾನಿಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿವೆ. ಅಫ್ಘಾನ್ ಸರ್ಕಾರ ದೇಶದ ಬಹುತೇಕ ಭಾಗಗಳಲ್ಲಿನ ಹಿಡಿತವನ್ನು ಕಳೆದುಕೊಂಡಿದೆ. ಏತನ್ಮಧ್ಯೆ ಅಮೆರಿಕದ ನಡೆ ಅಚ್ಚರಿಗೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಅಮೆರಿಕವು ಊಹಿಸಿರದಷ್ಟು ವೇಗದಲ್ಲಿ ತಾಲಿಬಾನ್‌ ಉಗ್ರರು ಅಫ್ಘಾನ್‌ನ ಮೂರನೇ ಎರಡರಷ್ಟು ಭಾಗದಲ್ಲಿ ಹಿಡಿತ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಪ್ರತಿಕ್ರಿಯಿಸಿರುವ ಶ್ವೇತಭವನ, “ಉಗ್ರರನ್ನು ಎದುರುಹಾಕಿಕೊಂಡು ಹೋರಾಡುವ ರಾಜಕೀಯ ಇಚ್ಛಾಶಕ್ತಿ ಇದೆಯೋ ಇಲ್ಲವೋ ಎಂಬುದನ್ನು ಅಫ್ಘಾನ್‌ ನಾಯಕತ್ವವೇ ನಿರ್ಧರಿಸಬೇಕು’ ಎಂದು ಹೇಳಿದೆ. ಅಷ್ಟೇ ಅಲ್ಲ, ಪರಿಸ್ಥಿತಿ ನೋಡಿದರೆ ಕಾಬೂಲ್‌ನ ಪತನವನ್ನು ತಪ್ಪಿಸಲು ಸಾಧ್ಯವೇ ಇಲ್ಲ ಎಂದೂ ಪೆಂಟಗನ್‌ನ ಮುಖ್ಯ ವಕ್ತಾರ ಜಾನ್‌ ಕಿರ್ಬಿ ಹೇಳಿದ್ದಾರೆ. ಈ ಮೂಲಕ ನಮಗೂ ಅಫ್ಘಾನ್‌ಗೂ ಸಂಬಂಧವೇ ಇಲ್ಲ ಎಂಬ ಸುಳಿವನ್ನು ಅಮೆರಿಕ ನೀಡಿದೆ. ಅಮೆರಿಕ ತಮ್ಮ ನೆರವಿಗೆ ಬರಲಿದೆ ಎಂದು ಕಾಯುತ್ತಿರುವ ಅಫ್ಘಾನ್‌ ಸಕಾರಕ್ಕೆ ಇದು ದೊಡ್ಡ ಹಿನ್ನಡೆ ಉಂಟು ಮಾಡಿದೆ.

ಅಫ್ಘಾನಿಸ್ತಾನದಲ್ಲಿನ ಸೇನಾಪಡೆಯನ್ನು ವಾಪಸ್ ಕರೆಯಿಸಿಕೊಂಡ ಪ್ರಕ್ರಿಯೆಗೆ ಟೀಕೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಶುಕ್ರವಾರ(ಆಗಸ್ಟ್ 13) ಸುದ್ದಿಗಾರರ ಜತೆ ಮಾತನಾಡುತ್ತ, ಇದು ಸೇನೆಯನ್ನು ಸಂಪೂರ್ಣ ತ್ಯಜಿಸುತ್ತೇವೆ ಅಂತಲ್ಲ, ಅಥವಾ ಸಂಪೂರ್ಣವಾಗಿ ಹಿಂತೆಗೆದುಕೊಳ್ಳುತ್ತೇವೆ ಎಂದರ್ಥವಲ್ಲ ಎಂದು ತಿಳಿಸಿದ್ದಾರೆ.

ಮುಂದಿನ 24ರಿಂದ 48 ಗಂಟೆಯೊಳಗೆ ಕಾಬೂಲ್ ಗೆ ಅಮೆರಿಕ 3,000 ಯೋಧರನ್ನು ಕಳುಹಿಸಲಿದೆ. ಆದರೆ ನಮ್ಮ ಸೇನೆಯನ್ನು ತಾಲಿಬಾನ್ ವಿರುದ್ಧ ದಾಳಿ ನಡೆಸಲು ಬಳಸುತ್ತಿಲ್ಲ ಎಂದು ಹೇಳುವ ಮೂಲಕ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆಯನ್ನು ನೀಡಿದೆ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಬಚ್ಚನ್, ಮೋಹನ್‌ಲಾಲ್‌ ನಂತಹ 20 ಸ್ಟಾರ್ಸ್‌ಗಳಿದ್ದರೂ ಅತ್ಯಂತ ಹೀನಾಯವಾಗಿ ಸೋತ ಸಿನಿಮಾವಿದು..

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

ಅಳಿವಿನಂಚಿನ ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

Birds Mystery: ಭಾರತದಲ್ಲೊಂದು ಪಕ್ಷಿಗಳು ಆತ್ಮಹ*ತ್ಯೆ ಮಾಡಿಕೊಳ್ಳುವ ನಿಗೂಢ ಸ್ಥಳ!

Birds Mystery: ಭಾರತದಲ್ಲೊಂದು ಪಕ್ಷಿಗಳು ಆತ್ಮಹ*ತ್ಯೆ ಮಾಡಿಕೊಳ್ಳುವ ನಿಗೂಢ ಸ್ಥಳ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.