ಪೂರ್ವಜರ ದೇವಾಲಯ ಬಿಟ್ಟು ಓಡಿಹೋಗಲ್ಲ: ಕಾಬೂಲ್ ನ ಏಕೈಕ ಹಿಂದೂ ಪುರೋಹಿತ್ ರಾಜೇಶ್

ತಾಲಿಬಾನ್ ಉಗ್ರರು ನನ್ನ ಕೊಂದರೂ …ಇದು ನನ್ನ ಸೇವೆ ಎಂದು ಪರಿಗಣಿಸುವೆ

ನಾಗೇಂದ್ರ ತ್ರಾಸಿ, Aug 17, 2021, 1:18 PM IST

ಪೂರ್ವಜರ ದೇವಾಲಯ ಬಿಟ್ಟು ಓಡಿಹೋಗಲ್ಲ: ಕಾಬೂಲ್ ನ ಏಕೈಕ ಹಿಂದೂ ಪುರೋಹಿತ್ ರಾಜೇಶ್

ಅಫ್ಘಾನಿಸ್ತಾನವನ್ನು ತಾಲಿಬಾನ್ ಬಂಡುಕೋರರು ಭಾನುವಾರ (ಆಗಸ್ಟ್ 15) ವಶಪಡಿಸಿಕೊಂಡ ನಂತರ ಅಧ್ಯಕ್ಷ ಅಶ್ರಫ್ ಘನಿ ತಮ್ಮ ಹಿರಿಯ ಅಧಿಕಾರಿಗಳ ಜತೆಗೂಡಿ ಒಮನ್ ದೇಶಕ್ಕೆ ಪಲಾಯನಗೈದಿದ್ದರು. ಕಾಬೂಲ್ ಅನ್ನು ತಾಲಿಬಾನ್ ವಶಪಡಿಸಿಕೊಂಡ ನಂತರ ಭೀತಿಗೊಳಗಾದ ಸಾವಿರಾರು ಮಂದಿ ತಮ್ಮ ಜೀವ ರಕ್ಷಿಸಿಕೊಳ್ಳಲು ಕಂಡು ಕೊಂಡ ಮಾರ್ಗ ದೇಶದಿಂದ ಪಲಾಯನ ಮಾಡುವುದು.

ಅದರ ಪರಿಣಾಮವೇ ಸೋಮವಾರ ಸಾವಿರಾರು ಮಂದಿ ಅಫ್ಘಾನ್ ನಿವಾಸಿಗಳು ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಗ್ಗೆ ಇಟ್ಟಿದ್ದರು. ಇದ್ದ ಕೆಲವೇ ಕೆಲವು ವಿಮಾನಗಳಲ್ಲಿ ಜನ ತುಂಬಿಕೊಂಡು ಬಿಟ್ಟಿದ್ದರು. ಅದರಲ್ಲೂ ಇಬ್ಬರು ವಿಮಾನದ ಚಕ್ರ ಹಿಡಿದು ನೇತಾಡಿಕೊಂಡು ಮೇಲಿನಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಭೀಕರ ಘಟನೆಯೂ ನಡೆದಿತ್ತು.

ಇಷ್ಟೆಲ್ಲಾ ಜನರು ಜೀವ ಭಯದಿಂದ ರಕ್ಷಿಸಿಕೊಳ್ಳಲು ಪಲಾಯನವಾಗಲು ಯತ್ನಿಸುತ್ತಿದ್ದರೆ, ಕಾಬೂಲ್ ನಲ್ಲಿರುವ ರತ್ತನ್ ನಾಥ್ ದೇವಾಲಯದ ಪುರೋಹಿತ, ಪಂಡಿತ್ ರಾಜೇಶ್ ಕುಮಾರ್ ಮಾತ್ರ ತನ್ನ ಜೀವ ಉಳಿಸಿಕೊಳ್ಳಲು ಕಾಬೂಲ್ ಬಿಟ್ಟು ಪಲಾಯನ ಮಾಡಲ್ಲ ಎಂದು ಪಟ್ಟು ಹಿಡಿದುಬಿಟ್ಟಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ತಾಲಿಬಾನ್ ಕೊಂದರೂ ತೊಂದರೆ ಇಲ್ಲ- ಪಂಡಿತ್ ರಾಜೇಶ್ ಕುಮಾರ್:

ಕಾಬೂಲ್ ನಲ್ಲಿರುವ ಕೆಲವು ಹಿಂದೂಗಳು ನನ್ನ ಬಂದು ಮನವಿ ಮಾಡಿಕೊಂಡಿದ್ದಾರೆ, ನೀವು ಕೂಡಲೇ ಕಾಬೂಲ್ ಬಿಟ್ಟು ತೆರಳಿ, ನಿಮಗೆ ಪ್ರಯಾಣಕ್ಕೆ ಬೇಕಾದ ಅನುಕೂಲ ಮಾಡಿಕೊಡುವುದಾಗಿ ವಿನಂತಿಸಿಕೊಂಡಿದ್ದರು. ಆದರೆ ನನ್ನ ಪೂರ್ವಜರು ರತ್ತನ್ ನಾಥ ಮಂದಿರದಲ್ಲಿ ನೂರಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. ನಾನು ಇಲ್ಲಿಂದ ಪಲಾಯನ ಮಾಡಲಾರೆ. ಒಂದು ವೇಳೆ ತಾಲಿಬಾನ್ ಉಗ್ರರು ನನ್ನ ಕೊಂದರೂ …ಇದು ನನ್ನ ಸೇವೆ ಎಂದು ಪರಿಗಣಿಸುವುದಾಗಿ ಪಂಡಿತ್ ರಾಜೇಶ ಕುಮಾರ್ ತಮ್ಮ ಮನದಾಳವನ್ನು ಹೊರಹಾಕಿದ್ದಾರೆ ಎಂದು ವರದಿ ವಿವರಿಸಿದೆ.

ಪಂಡಿತ್ ರಾಜೇಶ್ ಕುಮಾರ್ ಅವರು ಕಾಬೂಲ್ ನಲ್ಲಿ ವಾಸವಾಗಿರುವ ಏಕೈಕ ಹಿಂದೂ ಪುರೋಹಿತರು ಎಂದು ಪರಿಗಣಿಸಲಾಗಿದೆ. ನನ್ನ ಪೂರ್ವಜನರು ವಾಸವಾಗಿದ್ದ, ಈ ನೆಲವನ್ನು ಬಿಟ್ಟು ತೆರಳಲಾರೆ ಎಂಬುದು ರಾಜೇಶ್ ಅವರ ನುಡಿಯಾಗಿದೆ.

ತಾಲಿಬಾನ್ ಉಗ್ರರು ಈಗಾಗಲೇ ಸರ್ಕಾರಿ ಕಚೇರಿ, ಸಂಸತ್ ಅನ್ನು ವಶಪಡಿಸಿಕೊಂಡು ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ. ಕಾಬೂಲ್ ನಲ್ಲಿ ಅಫ್ಘಾನ್ ಸೇನೆ, ಪೊಲೀಸರು ಯಾರೂ ಇಲ್ಲದಂತಾಗಿದ್ದು, ತಾಲಿಬಾನ್ ಉಗ್ರರೇ ತುಂಬಿಕೊಂಡಿದ್ದಾರೆ. ಜನರು ಭಯ ಭೀತಿಯಿಂದಲೇ ಕಾಲಕಳೆಯುವಂತಾಗಿದೆ. ಏತನ್ಮಧ್ಯೆ ಅಫ್ಘಾನ್ ಜನತೆ ಯಾವುದೇ ರೀತಿಯಿಂದಲೂ ಭಯ ಪಡುವ ಅಗತ್ಯವಿಲ್ಲ ಎಂದು ತಾಲಿಬಾನ್ ಸಂದೇಶ ರವಾನಿಸಿದೆ ಎಂದು ವರದಿ ತಿಳಿಸಿದೆ.

ಹಿಂದೂ, ಸಿಖ್ ಜನರ ರಕ್ಷಣೆಗೆ ಕ್ರಮ: ಭಾರತ

ಕಾಬೂಲ್ ನಿಂದ ವಾಣಿಜ್ಯಿಕ ವಿಮಾನ ಯಾನ ಆರಂಭವಾದ ಕೂಡಲೇ ಅಫ್ಘಾನ್ ನಲ್ಲಿರುವ ಹಿಂದೂ ಮತ್ತು ಸಿಖ್ ಸಮುದಾಯದವರನ್ನು ಆದ್ಯತೆಯಲ್ಲಿ ಕರೆತರಲಾಗುತ್ತದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ಅರಿಂದಾಮ್ ಬಗಚಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ಅಫ್ಘಾನಿಸ್ತಾನದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಕೈಮೀರುತ್ತಲೇ ಇದೆ. ಹೀಗಾಗಿ ಅಲ್ಲಿರುವ ರಾಜತಾಂತ್ರಿಕ ಸಿಬಂದಿ ಮತ್ತು ಭಾರತದ ನಾಗರಿಕರನ್ನು ಕರೆತರುವ ಸಿದ್ಧತೆ ನಡೆದಿದೆ. ತುರ್ತು ಪರಿಸ್ಥಿತಿಯಲ್ಲಿ ಯಾರನ್ನು ಸಂಪರ್ಕಿಸಬೇಕು ಎಂಬ ಬಗ್ಗೆ ಭಾರತೀಯರಿಗೆ ದೂರವಾಣಿ ಸಂಖ್ಯೆಯನ್ನೂ ನೀಡಲಾಗಿದೆ ಎಂದು ಬಗಚಿ ತಿಳಿಸಿದ್ದರು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಬಚ್ಚನ್, ಮೋಹನ್‌ಲಾಲ್‌ ನಂತಹ 20 ಸ್ಟಾರ್ಸ್‌ಗಳಿದ್ದರೂ ಅತ್ಯಂತ ಹೀನಾಯವಾಗಿ ಸೋತ ಸಿನಿಮಾವಿದು..

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

ಅಳಿವಿನಂಚಿನ ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

Birds Mystery: ಭಾರತದಲ್ಲೊಂದು ಪಕ್ಷಿಗಳು ಆತ್ಮಹ*ತ್ಯೆ ಮಾಡಿಕೊಳ್ಳುವ ನಿಗೂಢ ಸ್ಥಳ!

Birds Mystery: ಭಾರತದಲ್ಲೊಂದು ಪಕ್ಷಿಗಳು ಆತ್ಮಹ*ತ್ಯೆ ಮಾಡಿಕೊಳ್ಳುವ ನಿಗೂಢ ಸ್ಥಳ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.