ಪ್ರವಾಸಿ ತಾಣವಾದ ಸ್ಮಶಾನ… ಇಲ್ಲಿ Pre-Wedding Shoot, Birthday ಪಾರ್ಟಿ ಕೂಡ ನಡೆಯುತ್ತೆ

ಪ್ರವಾಸಿತಾಣವನ್ನೂ ಮೀರಿಸುವಂತಿದೆ ಇಲ್ಲಿನ ಸ್ಮಶಾನ

ಸುಧೀರ್, Jul 22, 2024, 6:04 PM IST

ಪ್ರವಾಸಿ ತಾಣವಾದ ಸ್ಮಶಾನ… ಇಲ್ಲಿ Pre-Wedding, Birthday ಪಾರ್ಟಿ ಕೂಡ ಇಲ್ಲಿ ನಡೆಯುತ್ತೆ

ಸ್ಮಶಾನ ಎಂದಾಗ ನಮ್ಮ ಮನಸ್ಸಿನಲ್ಲಿ ಬರುವುದು ದುಃಖದ ವಿಚಾರ, ನೆನಪುಗಳು ಮಾತ್ರ, ಇದರ ಬಗ್ಗೆ ಮಾತನಾಡಲು ಕೂಡ ಜನ ಹೆದರುತ್ತಾರೆ. ಅಷ್ಟೇ ಯಾಕೆ ಸಂಜೆಯಾಗುತ್ತಿದ್ದಂತೆ ಈ ಮಾರ್ಗದಲ್ಲಿ ಸಂಚರಿಸಲೂ ಜನ ಹೆದರುತ್ತಾರೆ. ಆದರೆ ಇಲ್ಲಿರುವ ಸ್ಮಶಾನ ಎಲ್ಲದಕ್ಕಿಂತ ಕೊಂಚ ಭಿನ್ನವಾಗಿದೆ, ಇಲ್ಲಿನ ಸ್ಮಶಾನವನ್ನು ಜನರು ಪ್ರವಾಸಿತಾಣವಾಗಿ ಪರಿಗಣಿಸಿದ್ದಾರೆ ಹಾಗಾಗಿ ದಿನ ಇಲ್ಲಿಗೆ ನೂರಾರು ಜನ ಬರುತ್ತಾರೆ ಅಷ್ಟು ಮಾತ್ರವಲ್ಲದೆ ಇಲ್ಲಿ ಪ್ರೀ ವೆಡ್ಡಿಂಗ್ ಶೂಟ್, ಬರ್ತ್‌ಡೇ ಪಾರ್ಟಿಗಳಂಥ ಕಾರ್ಯಕ್ರಮಗಳೂ ನಡೆಯುತ್ತವೆಯಂತೆ. ಬನ್ನಿ ಹಾಗಾದರೆ ಈ ಸ್ಮಶಾನ ಯಾವ ಪ್ರದೇಶದಲ್ಲಿದೆ, ಜನ ಯಾಕೆ ಇದನ್ನು ಪ್ರವಾಸಿತಾಣವಾಗಿ ಪರಿಗಣಿಸಿದ್ದಾರೆ ಎಂಬುದನ್ನು ತಿಳಿದುಕೊಂಡು ಬರೋಣ…

ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ದಿಸಾದಲ್ಲಿದೆ ಈ ಸ್ಮಶಾನ… ಸುಮಾರು 12,000 ಚದರ ಅಡಿ ಪ್ರದೇಶದಲ್ಲಿ 5 ರಿಂದ 7 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಮಶಾನವನ್ನು ನಿರ್ಮಾಣಗೊಳಿಸಲಾಗಿದೆ, ಈ ಪ್ರದೇಶದಲ್ಲಿ ಮಕ್ಕಳಿಗೆ ಆಟದ ವ್ಯವಸ್ಥೆಯಿದೆ, ಸಂಜೆಯ ವೇಳೆಗೆ ಇಲ್ಲಿನ ಸುತ್ತಮುತ್ತಲಿನ ಜನ ವಿಹಾರಕ್ಕೆ ಬರುತ್ತಾರೆ, ಉದ್ಯಾನವನವಿದ್ದು ನೂರಾರು ಹೂವಿನ ಗಿಡಗಳಿಂದ ಕೂಡಿದ್ದು ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ.

ಪ್ರೀ ವೆಡ್ಡಿಂಗ್, ಬರ್ತ್‌ಡೇ ಪಾರ್ಟಿ:
ಈ ಸ್ಮಶಾನವನ್ನು ಯಾವ ರೀತಿ ನಿರ್ಮಾಣಗೊಳಿಸಲಾಗಿದೆ ಎಂಬುದಕ್ಕೆ ಇಲ್ಲಿ ದಿನ ನಿತ್ಯ ಬೆಳಗಾಗುತ್ತಲೇ ಫೋಟೋ ಶೂಟ್ ಗಳು ನಡೆಯುತ್ತಿರುತ್ತವೆ, ನೂರಾರು ಮಂದಿ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ, ಅಲ್ಲದೆ ಸಂಜೆ ವೇಳೆ ಇಲ್ಲಿ ಬರ್ತ್‌ಡೇ ಪಾರ್ಟಿ ಸೇರಿದಂತೆ ಇತರ ಕಾರ್ಯಕ್ರಮಗಳೂ ನಡೆಯುತ್ತಿರುವುದರಿಂದ ಇದೊಂದು ಸ್ಮಶಾನ ಅನ್ನುವ ಭಾವನೆ ಯಾರಿಗೂ ಬರಲಾರದು.

ಎರಡು ಪ್ರಮುಖ ಪ್ರದೇಶಗಳಾಗಿ ವಿಂಗಡಣೆ :

ಬನಾಸ್ ನದಿಯ ದಡದಲ್ಲಿರುವ ದಿಸಾ ಸ್ಮಶಾನ ಪ್ರದೇಶವನ್ನು ಎರಡು ಭಾಗಗಳಾಗಿ ವಿಂಗಡಣೆ ಮಾಡಲಾಗಿದೆ ಒಂದು ಭಾಗದಲ್ಲಿ ಸ್ಮಶಾನ ಇದ್ದರೆ ಇನ್ನೊಂದು ಭಾಗದಲ್ಲಿ ಉದ್ಯಾನವನ, ಮನರಂಜನಾ ಸ್ಥಳ ಸೇರಿದಂತೆ ಪಿಕ್ನಿಕ್ ಸ್ಪಾಟ್ ಆಗಿ ಮಾರ್ಪಾಡು ಮಾಡಲಾಗಿದ್ದು ಇಲ್ಲಿ ಹಚ್ಚ ಹಸಿರಾದ ಹೂ ಗಿಡಗಳು, ಇಲ್ಲಿನ ಗೋಡೆಗಳ ಮೇಲೆ ಬಿಡಿಸಿದ ಸುಂದರವಾದ ವರ್ಣಚಿತ್ರಗಳು. ಆಕರ್ಷಕವಾದ ಆಕೃತಿಗಳು, ದೇವರ ವಿಗ್ರಹಗಳು, ಪ್ರಾರ್ಥನಾ ಮಂದಿರ, ಹಿರಿಯರಿಗೆ ಗ್ರಂಥಾಲಯ ಸೇರಿದಂತೆ ಬಾವಿ ಮತ್ತು ಮಳೆನೀರು ಕೊಯ್ಲು ಸೌಲಭ್ಯಗಳನ್ನು ಒಳಗೊಂಡಂತೆ ಹಲವಾರು ಸೌಲಭ್ಯಗಳನ್ನು ಇಲ್ಲಿ ಒದಗಿಸಲಾಗಿದೆ.

ಶವ ಸಂಸ್ಕಾರಕ್ಕೆ 1 ರೂ.
ದಿಸಾ ಸ್ಮಶಾನದಲ್ಲಿ ಶವಸಂಸ್ಕಾರಕ್ಕೆ ಕೇವಲ ಒಂದು ರೂಪಾಯಿ ಮಾತ್ರ ಶುಲ್ಕವನ್ನು ಪಾವತಿ ಮಾಡಿದರೆ ಸಾಕು, ಕಷ್ಟದಲ್ಲಿರುವ ಕುಟುಂಬಗಳಿಗೆ ಇಲ್ಲಿನ ವ್ಯವಸ್ಥೆ ಸಹಕಾರಿಯಾಗಿದೆ.

ಸ್ಮಶಾನ ಎಂಬ ಭಯವಿಲ್ಲ:
ಸಾಮಾನ್ಯವಾಗಿ ಸ್ಮಶಾನ ಎಂದಾಕ್ಷಣ ಎಲ್ಲರಿಗೂ ಭಯ ಇದ್ದೆ ಇರುತ್ತದೆ, ಜನ ಈ ಪ್ರದೇಶದಲ್ಲಿ ರಾತ್ರಿ ಬಿಡಿ ಹಗಲಲ್ಲೂ ಸಂಚರಿಸಲು ಹೆದರುತ್ತಾರೆ, ಆದರೆ ಇಲ್ಲಿನ ಪ್ರದೇಶ ಸ್ಮಶಾನಕ್ಕೆ ಮಾತ್ರ ಸೀಮಿತವಾಗಿರದೆ ಪ್ರವಾಸಿ ತಾಣವಾಗಿ ಮಾರ್ಪಾಡು ಆಗಿರುವುದರಿಂದ ಜನ ನಿರ್ಭಿತಿಯಿಂದ ಬರುತ್ತಾರೆ, ಮಕ್ಕಳ ಜೊತೆ ಇಲ್ಲಿಗೆ ಬಂದು ಸಮಯ ಕಳೆಯುತ್ತಾರೆ, ಇಲ್ಲಿರುವ ಗ್ರಂಥಾಲಯದಲ್ಲಿ ಪುಸ್ತಕಗಳನ್ನು ಓದಿ ಜ್ಞಾನವನ್ನು ವೃದ್ಧಿಸಿಕೊಳ್ಳುತ್ತಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mystery: ಅದೊಂದು ಶಾಪದಿಂದ ಸೂರ್ಯಾಸ್ತದ ಬಳಿಕ ಈ ದೇವಸ್ಥಾನದಲ್ಲಿ ಯಾರೂ ನಿಲ್ಲುದಿಲ್ಲವಂತೆ

Mystery: ಅದೊಂದು ಶಾಪದಿಂದ ಸೂರ್ಯಾಸ್ತದ ಬಳಿಕ ಈ ದೇವಸ್ಥಾನದಲ್ಲಿ ಯಾರೂ ನಿಲ್ಲುದಿಲ್ಲವಂತೆ

eye-ojo

Mysterious Island: ಪೃಕೃತಿಯ ವಿಸ್ಮಯ- ತೇಲುವ ಅದ್ಭುತ ದ್ವೀಪ ʼಎಲ್ ಒಜೊʼ

Temple Story: ಕಮಂಡಲ ಗಣಪತಿ ದೇವಸ್ಥಾನ.. ಇಲ್ಲಿನ ಪವಾಡಕ್ಕೆ ಇಲ್ಲಿಗೆ ಬರುವ ಭಕ್ತರೇ ಸಾಕ್ಷಿ

Temple Story: ಕಮಂಡಲ ಗಣಪತಿ ದೇವಸ್ಥಾನ.. ಇಲ್ಲಿನ ಪವಾಡಕ್ಕೆ ಇಲ್ಲಿಗೆ ಬರುವ ಭಕ್ತರೇ ಸಾಕ್ಷಿ

Skeleton Lake: ಇಂದಿಗೂ ರಹಸ್ಯವಾಗಿಯೇ ಉಳಿದ ಅಸ್ಥಿಪಂಜರಗಳ ಸರೋವರ…

Skeleton Lake: ಭಾರತದಲ್ಲಿದೆ ನಿಗೂಢ ಅಸ್ಥಿಪಂಜರಗಳ ಸರೋವರ… ಸಂಶೋಧಕರಿಗೂ ಸವಾಲಾದ ರಹಸ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.