Special Food ಮನೆಯಲ್ಲೊಮ್ಮೆ ಈ ರೆಸಿಪಿ ಟ್ರೈ ಮಾಡಿ ನೋಡಿ… ಟೇಸ್ಟ್ ಹೇಗಿದೆ ಹೇಳಿ


ಶ್ರೀರಾಮ್ ನಾಯಕ್, Sep 13, 2024, 5:57 PM IST

Special Food ಮನೆಯಲ್ಲೊಮ್ಮೆ ಈ ರೆಸಿಪಿ ಟ್ರೈ ಮಾಡಿ ನೋಡಿ… ಟೇಸ್ಟ್ ಹೇಗಿದೆ ಹೇಳಿ

ಜೋಳ(Corn) ಎಂದಾಕ್ಷಣ ನೆನಪಿಗೆ ಬರುವುದೇ ಉತ್ತರ ಕರ್ನಾಟಕ (Uttara Karnataka) ಯಾಕೆಂದರೆ ಅಲ್ಲಿನ ಜನರು ಜೋಳವನ್ನು ಬೆಳೆಸಿ, ನಿತ್ಯದ ಆಹಾರದಲ್ಲಿ ಉಪಯೋಗಿಸುತ್ತಾರೆ. ಆದರೆ ಈಗ ಉತ್ತರ ಕರ್ನಾಟಕ ಮಾತ್ರವಲ್ಲ ಬೇರೆ ಕಡೆಯಲ್ಲೂ ಬೆಳೆಸುವುದರಿಂದ ಅಡುಗೆ ಮನೆಗೂ ಇದು ಲಗ್ಗೆ ಇಟ್ಟಿದೆ. ಹೌದು ಯಾಕೆಂದರೆ ಆರೋಗ್ಯದ ದೃಷ್ಟಿಯಲ್ಲಿ ಜೋಳ ಉತ್ತಮ ಸಿರಿಧಾನ್ಯವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಅಡುಗೆಯಲ್ಲೂ ತನ್ನ ಛಾಪೂ ಮೂಡಿಸಿದೆ.

ಜೋಳದಿಂದಲೂ ವಿಭಿನ್ನ ರೀತಿಯ ಖಾದ್ಯಗಳನ್ನು ತಯಾರಿಸಬಹುದು ಅಲ್ಲದೆ ಶುಭ ಸಮಾರಂಭಗಳಲ್ಲೂ ಇದನ್ನು ಬಳಸುತ್ತಾರೆ. ಹಾಗೆಯೇ ನಾವಿಂದು ಜೋಳದಿಂದ ತಯಾರಿಸಲಾಗುವ ಎರಡು ಖಾದ್ಯಗಳನ್ನು ನಿಮಗೆ ಪರಿಚಯಿಸುತ್ತಿದ್ದೇವೆ ನೀವೂ ಮನೆಯಲ್ಲಿ ಇದನ್ನು ಟ್ರೈ ಮಾಡಬಹುದು, ಬನ್ನಿ ಹಾಗಾದರೆ ಜೋಳದಿಂದ ತಯಾರಿಸಬಹುದಾದ ಸಲಾಡ್ ಮತ್ತು ಉಸ್ಲಿ ಹೇಗೆ ತಯಾರಿಸುವುದೆಂದು ತಿಳಿದುಕೊಂಡು ಬರೋಣ…

ಜೋಳದ ಸಲಾಡ್‌(ಕೋಸಂಬರಿ)(Corn Salad/Kosambari)
ಬೇಕಾಗುವ ಸಾಮಗ್ರಿಗಳು
ಜೋಳ-1ಕಪ್‌, ಟೊಮ್ಯಾಟೋ-1, ಕ್ಯಾಪ್ಸಿಕಂ(ಸಣ್ಣದು)-1, ಮುಳ್ಳುಸೌತೆ(ಸಣ್ಣಗೆ ಹೆಚ್ಚಿದ್ದು)-4ಚಮಚ, ಈರುಳ್ಳಿ(ಸಣ್ಣಗೆ ಹೆಚ್ಚಿದ್ದು)-2,  ಕ್ಯಾರೆಟ್‌(ತುರಿದ)-1, ಖಾರದ ಪುಡಿ(ಮೆಣಸಿನ ಪುಡಿ)-2ಚಮಚ, ಪೆಪ್ಪರ್‌ ಪುಡಿ-ಅರ್ಧ ಟೀಸ್ಪೂನ್‌, ಜೀರಿಗೆ ಪುಡಿ-ಚಾಟ್‌ ಮಸಾಲ-ಅರ್ಧ ಟೀಸ್ಪೂನ್‌, ಲಿಂಬೆರಸ-1ಚಮಚ, ಕೊತ್ತಂಬರಿ ಸೊಪ್ಪು-ಸ್ವಲ್ಪ, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಮೊದಲಿಗೆ ಜೋಳವನ್ನು ಮೃದುವಾಗುವವರೆಗೆ ಚೆನ್ನಾಗಿ ಬೇಯಿಸಿಕೊಳ್ಳಿ. ಬಳಿಕ ನೀರನ್ನು ಸೋಸಿ ಅದನ್ನು ತಣ್ಣಗಾಗಲು ಬಿಡಿ. ನಂತರ ಬೇಯಿಸಿದ ಜೋಳವನ್ನು ಒಂದು ಬೌಲ್‌ ಗೆ ಹಾಕಿ ಅದಕ್ಕೆ ಸಣ್ಣಗೆ ಹೆಚ್ಚಿದ ಟೊಮ್ಯಾಟೋ, ಕ್ಯಾಪ್ಸಿಕಂ, ಮುಳ್ಳುಸೌತೆ, ಈರುಳ್ಳಿ ಮತ್ತು ತುರಿದಿಟ್ಟ ಕ್ಯಾರೆಟ್‌ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ತದನಂತರ ಮೆಣಸಿನ ಪುಡಿ, ಪೆಪ್ಪರ್‌, ಜೀರಿಗೆ ಪುಡಿ, ಚಾಟ್‌ ಮಸಾಲ, ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಲಿಂಬೆರಸವನ್ನು ಹಾಕಿ ಪುನಃ ಮಿಶ್ರಣ ಮಾಡಿ ಕೊನೆಗೆ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಸೇರಿಸಿದರೆ ಆರೋಗ್ಯಕರವಾದ ಜೋಳದ ಸಲಾಡ್‌ ಸವಿಯಲು ಸಿದ್ಧ.

ಜೋಳದ ಉಸ್ಲಿ(Sweet Corn usli)
ಬೇಕಾಗುವ ಸಾಮಗ್ರಿಗಳು
ಜೋಳ-2ಕಪ್‌(ಬೇಯಿಸಿದ್ದು), ಈರುಳ್ಳಿ-(ಸಣ್ಣಗೆ ಹೆಚ್ಚಿದ್ದು)-2, ಒಣಮೆಣಸು-3, ಹಸಿಮೆಣಸು-2, ಸಾಸಿವೆ-1ಚಮಚ, ತೆಂಗಿನೆಣ್ಣೆ -3ಚಮಚ, ಅರಿಶಿನ ಪುಡಿ-ಅರ್ಧ ಟೀಸ್ಪೂನ್‌, ತೆಂಗಿನ ತುರಿ-4ಚಮಚ, ಗರಂ ಮಸಾಲ-1ಚಮಚ, ಲಿಂಬೆರಸ-1ಚಮಚ, ಕೊತ್ತಂಬರಿ ಸೊಪ್ಪು-ಸ್ವಲ್ಪ, ಕರಿಬೇವಿನ ಎಲೆ-ಸ್ವಲ್ಪ, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಮೊದಲಿಗೆ ಒಂದು ಬಾಣಲೆಗೆ 3 ಚಮಚದಷ್ಟು ತೆಂಗಿನೆಣ್ಣೆಯನ್ನು ಹಾಕಿ ಕಾದಮೇಲೆ ಸಾಸಿವೆ ಸೇರಿಸಿ ಅದು ಸಿಡಿದ ನಂತರ ಕರಿಬೇವಿನ ಎಲೆ, ಹಸಿಮೆಣಸು, ಒಣಮೆಣಸು ಮತ್ತು ಸಣ್ಣಗೆ ಹೆಚ್ಚಿದ ಈರುಳ್ಳಿ ಹಾಕಿ ಫ್ರೈ ಮಾಡಿ ನಂತರ ಬೇಯಿಸಿದ ಜೋಳವನ್ನು ಸೇರಿಸಿ ಅದಕ್ಕೆ ತೆಂಗಿನ ತುರಿ, ಗರಂ ಮಸಾಲ,ಅರಿಶಿನ ಪುಡಿ, ಲಿಂಬೆರಸ ಹಾಗೂ ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ನಂತರ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ರುಚಿಕರ ಹಾಗೂ ಆರೋಗ್ಯಕರವಾದ ಜೋಳದ ಉಸ್ಲಿ ಸವಿಯಲು ಸಿದ್ಧ.

-ಶ್ರೀರಾಮ್ ಜಿ .ನಾಯಕ್

ಟಾಪ್ ನ್ಯೂಸ್

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

smi irani

Smriti Irani ದೆಹಲಿ ಬಿಜೆಪಿಯಲ್ಲಿ ಸಕ್ರಿಯ: ”ಸಿಎಂ ಫೇಸ್” ಆಗಿ ಕೇಳಿ ಬರುತ್ತಿರುವ ಹೆಸರು!

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

Tan removalಗೆ ಟೊಮೆಟೊ ಫೇಸ್‌ ಪ್ಯಾಕ್‌; ನೈಸರ್ಗಿಕ ತ್ವಚೆ ಕಾಳಜಿ

Beauty Tips: ಮುಖದ ಕಾಂತಿ ಹೆಚ್ಚಿಸಲು ಟೊಮ್ಯಾಟೋ ಫೇಸ್‌ ಪ್ಯಾಕ್‌; ಇದರ ಲಾಭವೇನು ಗೊತ್ತಾ?

1

South Indian actors: ನಾಗಾರ್ಜುನ್‌ ಟು ವಿಜಯ್; ದಕ್ಷಿಣ ಭಾರತದ ಶ್ರೀಮಂತ‌ ನಟರು ಯಾರ‍್ಯಾರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.