ಬಾಂಗ್ಲಾ ಹುಲಿಗಳೆದುರು ಕಿವೀಸ್‌ ಸೆಣಸಾಟ


Team Udayavani, Jun 5, 2019, 6:06 AM IST

edurali

ಓವಲ್: ವಿಶ್ವಕಪ್‌ ಟೂರ್ನಿಯ ಮೊದಲ ಪಂದ್ಯದಲ್ಲಿ ಗೆದ್ದ ಖುಷಿಯಲ್ಲಿರುವ ಬಾಂಗ್ಲಾ ಮತ್ತು ನ್ಯೂಜಿಲ್ಯಾಂಡ್‌ ಓವಲ್ ಅಂಗಳದಲ್ಲಿ ಮುಖಾಮುಖೀಯಾಗಲು ಸಜ್ಜಾಗಿವೆ. ವಿಶ್ವಕಪ್‌ನಲ್ಲಿ ಬಲಾಬಲದ ಲೆಕ್ಕಾಚಾರದಲ್ಲಿ ನ್ಯೂಜಿಲ್ಯಾಂಡ್‌ ಬಲಿಷ್ಠವಾಗಿದೆ. ಯಾಕೆಂದರೆ ಈ ಹಿಂದೆ ಆಡಿದ ನಾಲ್ಕು ಪಂದ್ಯವನ್ನು ನ್ಯೂಜಿಲ್ಯಾಂಡ್‌ ಗೆದ್ದಿದೆ. ಆದರೆ ಬಾಂಗ್ಲಾ ಹುಲಿಗಳನ್ನು ಈ ಬಾರಿ ಕಡೆಗಣಿಸುವಂತಿಲ್ಲ. ಶನಿವಾರದ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾದ ವಿರುದ್ಧ 21ರನ್‌ಗಳ ಗೆಲುವು ದಾಖಲಿಸಿದ ಬಾಂಗ್ಲಾ ಇದೀಗ ಎರಡನೇ ಗೆಲುವಿನ ಹಾಗೂ ವಿಶ್ವಕಪ್‌ ಮುಖಾಮುಖೀಯಲ್ಲಿ ನೂಜಿಲ್ಯಾಂಡ್‌ ವಿರುದ್ಧ ಮೊದಲ ಗೆಲುವು ದಾಖಲಿಸಲು ಬಾಂಗ್ಲಾ ಕಾದು ಕುಳಿತಿದೆ.

ನ್ಯೂಜಿಲ್ಯಾಂಡ್‌ ಬಲಿಷ್ಠ

ಶ್ರೀಲಂಕಾ ವಿರುದ್ಧ 10 ವಿಕೆಟ್‌ಗಳ ಸುಲಭ ಗೆಲುವು ಪಡೆದ ನ್ಯೂಜಿಲ್ಯಾಂಡ್‌ ಅತ್ಯಂತ ಬಲಿಷ್ಠ ತಂಡ ಎನ್ನಲಡ್ಡಿಯಿಲ್ಲ. 2015ರ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನದೊಂದಿಗೆ ನೂಜಿಲ್ಯಾಂಡ್‌ ಫೈನಲ್ ತಲುಪಿತ್ತು. ಆದರೆ ಫೈನಲ್ನಲ್ಲಿ ತೀರಾ ಕಳಪೆ ಪ್ರದರ್ಶನ ತೋರಿ ಆಸ್ಟ್ರೇಲಿಯ ವಿರುದ್ಧ ಸೋಲನುಭವಿಸಿತ್ತು. ಆದರೆ ಈ ಬಾರಿ ಅಂತಹ ತಪ್ಪು ಮತ್ತೆ ಮರುಕಳಿಸಬಾರದು ಎಂದು ಪಣ ತೊಟ್ಟಿರುವ ವಿಲಿಯಮ್ಸ್‌ ಪಡೆ ವಿಶ್ವ ಚಾಂಪಿಯನ್‌ ಪಟ್ಟಕ್ಕೇರಲು ಸಜ್ಜಾಗಿ ನಿಂತಿದೆ.

ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗದಲ್ಲಿ ಕಿವೀಸ್‌ ಸಶಕ್ತವಾಗಿದೆ. ಆರಂಭಿಕ ಆಟಗಾರರಾದ ಕಾಲಿನ್‌ ಮುನ್ರೊ, ಮಾರ್ಟಿನ್‌ ಗಪ್ಟಿಲ್ ಎದುರಾಳಿ ತಂಡದ ದಾಳಿಯನ್ನು ಪುಡಿಮಾಡುವುದರಲ್ಲಿ ಅನುಮಾನವಿಲ್ಲ. ಇದಕ್ಕೆ ಶ್ರೀಲಂಕಾ ವಿರುದ್ಧದ ಪಂದ್ಯವೇ ಸಾಕ್ಷಿ. ಮಧ್ಯಮ ಕ್ರಮಾಂಕದಲ್ಲಿ ನಾಯಕ ಕೇನ್‌ ವಿಲಿಯಮ್ಸನ್‌, ರಾಸ್‌ ಟೇಲರ್‌ ತಂಡಕ್ಕೆ ನೆರವಾಗಬಲ್ಲರು. ಕಿವೀಸ್‌ ಬೌಲಿಂಗ್‌ ಘಾತಕವಾಗಿದೆ. ಟ್ರೆಂಟ್ ಬೌಲ್r, ಕಾಲಿನ್‌ ಡಿ ಗ್ರ್ಯಾಂಡ್‌ಹೋಮ್‌, ಮಿಚೆಲ್ ಸ್ಯಾಂಟ್ನರ್‌, ಮ್ಯಾಟ್ ಹೆನ್ರಿ, ಲಾಕಿ ಫ‌ರ್ಗ್ಯುಸನ್‌, ಜೆಮ್ಮಿ ನೀಶಮ್‌ ಎದುರಾಳಿಗಳನ್ನು ಕಟ್ಟಿ ಹಾಕುವಲ್ಲಿ ಸಮರ್ಥರಿದ್ದಾರೆ.

ಬಾಂಗ್ಲಾಕ್ಕೆ ಬ್ಯಾಟಿಂಗ್‌ ಬಲ

ಬಾಂಗ್ಲಾದೇಶಕ್ಕೆ ತನ್ನ ಬ್ಯಾಟಿಂಗ್‌ ಮೇಲೆ ಹೆಚ್ಚು ವಿಶ್ವಾಸ ಎನ್ನುವಂತಿದೆ. ಪಂದ್ಯದ ಗತಿಯನ್ನೇ ಬದಲಾಯಿಸಬಲ್ಲ ಬೌಲರ್‌ಗಳು ಬಾಂಗ್ಲಾ ತಂಡದಲ್ಲಿಲ್ಲ ಮತ್ತು ಫೀಲ್ಡಿಂಗ್‌ ಕೂಡ ಕಳಪೆ ಮಟ್ಟದಲ್ಲಿದೆ. ಸುಲಭದ ಕ್ಯಾಚ್‌ಗಳನ್ನೆಲ್ಲ ಕೈಚೆಲ್ಲುತ್ತಿದ್ದಾರೆ. ಕಳೆದ ದ. ಆಫ್ರಿಕಾ ವಿರುದ್ಧದ ಪಂದ್ಯವೇ ಇದಕ್ಕೆ ಸಾಕ್ಷಿ. ಆದರೆ ಬ್ಯಾಟಿಂಗ್‌ ತುಂಬಾ ಬಲಿಷ್ಠವಾಗಿದೆ.

ತಮೀಮ್‌ ಇಕ್ಬಾಲ್, ಸೌಮ್ಯ ಸರ್ಕಾರ್‌, ಶಕಿಬ್‌ ಅಲ್ ಹಸನ್‌, ಮುಶ್ಫಿಕರ್‌ ರಹಿಂ, ಮೊಹಮ್ಮದುಲ್ಲ ಉತ್ತಮ ಫಾರ್ಮ್ನಲ್ಲಿ ದ್ದಾರೆ. ಆದ್ದರಿಂದ ಬಾಂಗ್ಲಾ ಟಾಸ್‌ ಗೆದ್ದರೆ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡು ಎದುರಾಳಿಗೆ ದೊಡ್ಡ ಮೊತ್ತದ ಗುರಿ ನೀಡುವ ಯೋಜನೆ ಹಾಕಿಕೊಳ್ಳಬಹುದು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.