ವಾಶೌಟ್‌ ನಂ. 4; ಮಳೆಯಾಟಕ್ಕೆ ಸೋತ ಭಾರತ-ನ್ಯೂಜಿಲ್ಯಾಂಡ್‌


Team Udayavani, Jun 14, 2019, 5:00 AM IST

AP6_13_2019_000149B

ನಾಟಿಂಗ್‌ಹ್ಯಾಮ್‌: ವಿಶ್ವಕಪ್‌ನಲ್ಲಿ ಮಳೆಯ ಪ್ರಾಬಲ್ಯ ಮುಂದುವರಿದಿದೆ. ಅಭಿಮಾನಿಗಳ ತೀವ್ರ ಹತಾಶೆಯ ನಡುವೆ ಕೂಟದ ಅಷ್ಟೂ ಆಸಕ್ತಿ ನಿಧಾನವಾಗಿ ಕಡಿಮೆ ಆಗುತ್ತ ಹೋಗುತ್ತಿದೆ. ಮಳೆಯಾಟದ ತಾಜಾ ಉದಾಹರಣೆ ಗುರುವಾರ ನಾಟಿಂಗ್‌ಹ್ಯಾಮ್‌ನಲ್ಲಿ ಕಾಣಸಿಕ್ಕಿದ್ದು, ಭಾರತ-ನ್ಯೂಜಿಲ್ಯಾಂಡ್‌ ನಡುವಿನ ಬಹು ನಿರೀಕ್ಷೆಯ ಪಂದ್ಯ ಒಂದೂ ಎಸೆತ ಕಾಣದೆ ರದ್ದುಗೊಂಡಿದೆ.

ಇದು ಪ್ರಸಕ್ತ ವಿಶ್ವಕಪ್‌ನಲ್ಲಿ ಮಳೆ ನುಂಗಿಹಾಕಿದ 4ನೇ ಪಂದ್ಯ. ಇದರೊಂದಿಗೆ ವಿಶ್ವಕಪ್‌ನಲ್ಲಿ ಮಳೆಯಾಟದ ದಾಖಲೆಯೂ ವಿಸ್ತಾರಗೊಂಡಿದೆ. ಇದು ಒಂದೂ ಎಸೆತ ಕಾಣದೆ ರದ್ದುಗೊಂಡ ವಿಶ್ವಕಪ್‌ ಇತಿಹಾಸದ 5ನೇ ಪಂದ್ಯ. ಕೇವಲ ಅಂಕಗಳನ್ನು ಹಂಚಿಕೊಳ್ಳುತ್ತ ಹೋಗುವುದರಲ್ಲಿ ಅದೇನು ಲಾಭವಿದೆ ಎಂಬ ಕ್ರಿಕೆಟ್‌ ಪ್ರೇಮಿಗಳ ಕೂಗು ಕೂಡ ಮಳೆಯ ಅಬ್ಬರದಲ್ಲಿ ಕೊಚ್ಚಿ ಹೋಗಲಾರಂಭಿಸಿದೆ.

ಅಜೇಯ ತಂಡಗಳಿಗೆ ನಿರಾಸೆ
ಭಾರತ ಮತ್ತು ನ್ಯೂಜಿಲ್ಯಾಂಡ್‌ ಈ ಕೂಟದ ಅಜೇಯ ತಂಡಗಳಾಗಿದ್ದವು. ಹೀಗಾಗಿ ಗೆಲುವಿನ ಓಟ ಮುಂದುವರಿಸಿಕೊಂಡು ಹೋಗುವ ಅದೃಷ್ಟ ಯಾರಿಗಿದೆ ಎಂಬುದು ಎಲ್ಲರನ್ನೂ ಕಾಡುತ್ತಿದ್ದ ಕುತೂಹಲವಾಗಿತ್ತು. ಈವರೆಗೆ ಏಶ್ಯನ್‌ ತಂಡಗಳನ್ನೇ ಎದುರಿಸಿದ ನ್ಯೂಜಿಲ್ಯಾಂಡ್‌ ಎಲ್ಲ 3 ಪಂದ್ಯಗಳನ್ನು ಗೆದ್ದು ಹ್ಯಾಟ್ರಿಕ್‌ ಸಾಧಿಸಿದರೆ, ಭಾರತ ಆಡಿದ ಎರಡರಲ್ಲೂ ಗೆಲುವಿನ ಸಂಭ್ರಮ ಆಚರಿಸಿತ್ತು. ಆದರೆ ಎರಡೂ ತಂಡಗಳು ಮೊದಲ ಸಲ ಮಳೆಯಾಟಕ್ಕೆ ಶರಣಾಗಲೇ ಬೇಕಾಯಿತು.
ನಾಟಿಂಗ್‌ಹ್ಯಾಮ್‌ನಲ್ಲಿ ಅಪರಾಹ್ನದ ಬಳಿಕ ಬಿರುಸಿನ ಮಳೆಯಾಗಲಿದೆ ಎಂಬುದು ಹವಾಮಾನ ವರದಿಯಾಗಿತ್ತು. ಹೀಗಾಗಿ ಒಂದು ಇನ್ನಿಂಗ್ಸ್‌ ಯಾವುದೇ ಅಡ್ಡಿಯಿಲ್ಲದೆ ಮುಗಿದೀತು ಎಂಬ ನಿರೀಕ್ಷೆ ಇತ್ತು. ಆದರೆ ಮುಂಜಾನೆಯಿಂದಲೇ ಸುರಿಯತೊಡಗಿದ ಮಳೆ ಇಡೀ ಪಂದ್ಯವನ್ನು ನುಂಗಿ ಬಿಟ್ಟಿತು.

ರದ್ದುಗೊಂಡ ಪಂದ್ಯಗಳು
1.ಪಾಕಿಸ್ಥಾನ-ಶ್ರೀಲಂಕಾ,
ಬ್ರಿಸ್ಟಲ್‌, ಜೂ. 7
2.ದಕ್ಷಿಣ ಆಫ್ರಿಕಾ-ವಿಂಡೀಸ್‌, ಸೌತಾಂಪ್ಟನ್‌, ಜೂ. 10
3.ಶ್ರೀಲಂಕಾ-ಬಾಂಗ್ಲಾದೇಶ, ಬ್ರಿಸ್ಟಲ್‌, ಜೂ. 11
4. ಭಾರತ-ನ್ಯೂಜಿಲ್ಯಾಂಡ್‌, ನಾಟಿಂಗ್‌ಹ್ಯಾಮ್‌, ಜೂ. 13

ಭಾರತ-ಪಾಕ್‌ ಪಂದ್ಯಕ್ಕೂ ಮಳೆ?
ರವಿವಾರ ಮ್ಯಾಂಚೆಸ್ಟರ್‌ನಲ್ಲಿ ಭಾರತ-ಪಾಕಿಸ್ಥಾನ ನಡುವೆ ಕೂಟದ ಹೈ ವೋಲ್ಟೆàಜ್‌ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೂ ಮಳೆ ಭೀತಿ ಎದುರಾಗುವ ಸಂಭವವಿದೆ. ಇನ್ನೆರಡು ದಿನಗಳಲ್ಲಿ ಖಚಿತ ಹವಾಮಾನ ವರದಿ ಲಭ್ಯವಾಗಲಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.