
ವಿಜಯ್ ಶಂಕರ್ಗೂ ಗಾಯ
Team Udayavani, Jun 21, 2019, 5:13 AM IST

ಸೌತಾಂಪ್ಟನ್: ಪ್ರಸಕ್ತ ವಿಶ್ವಕಪ್ ಕ್ರಿಕೆಟ್ ಕೂಟದಲ್ಲಿ ಭಾರತದ ಗಾಯಾಳು ಆಟಗಾರರ ಯಾದಿ ಮತ್ತೆ ಬೆಳೆದಿದೆ. ಶಿಖರ್ ಧವನ್, ವೇಗಿ ಭುವನೇಶ್ವರ್ ಬಳಿಕ ಇದೀಗ ಆಲ್ರೌಂಡರ್ ವಿಜಯ್ ಶಂಕರ್ ಸರದಿ.
ಆಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕಾಗಿ ಭಾರತೀಯ ಆಟಗಾರರು ಬುಧ ವಾರ ಸೌತಾಂಪ್ಟನ್ನಲ್ಲಿ ಅಭ್ಯಾಸ ನಡೆಸುತ್ತಿ ದ್ದಾಗ ಈ ಅವಘಡ ಸಂಭವಿಸಿದೆ. ಬುಮ್ರಾ ಎಸೆದ ಯಾರ್ಕರ್ ಒಂದರ ವೇಳೆ ಚೆಂಡು ವಿಜಯ್ ಶಂಕರ್ ಅವರ ಕಾಲಿನ ಬೆರಳಿಗೆ ಬಡಿದಿದೆ. ಕೂಡಲೇ ಅವರು ನೋವಿನಿಂದ ಚೀರಿದ್ದಾರೆ. ಫಿಸಿಯೋ ನೆರವಿಗೆ ಧಾವಿಸಿ ಪ್ರಥಮ ಚಿಕಿತ್ಸೆ ನೀಡಿದರು.
ಈ ಕುರಿತು ಪ್ರಕಟನೆ ನೀಡಿರುವ ಬಿಸಿಸಿಐ, “ಹೌದು, ವಿಜಯ್ ಶಂಕರ್ ಗಾಯಗೊಂಡಿರುವುದು ನಿಜ. ಅಭ್ಯಾಸ ವೇಳೆ ಅವರ ಕಾಲಿಗೆ ಏಟಾಗಿದ್ದು, ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ. ಸಣ್ಣ ಗಾಯ, ಹೆಚ್ಚು ಚಿಂತಿಸುವ ಅಗತ್ಯವಿಲ್ಲ’ ಎಂದಿದೆ.
ಅಭ್ಯಾಸಕ್ಕಿಳಿಯದ ಶಂಕರ್
ಗುರುವಾರದ ಅಭ್ಯಾಸದಲ್ಲಿ ವಿಜಯ್ ಶಂಕರ್ ಪಾಲ್ಗೊಳ್ಳಲಿಲ್ಲ. ಬದಲಿಗೆ ಅವರು ಚಪ್ಪಲಿ ಹಾಕಿಕೊಂಡು ಕ್ರೀಡಾಂಗಣದ ಸುತ್ತ ನಡೆದುಕೊಂಡು ಹೋಗುತ್ತಿದ್ದುದು ಕಂಡುಬಂತು. ಆನಂತರ ಜಾಗಿಂಗ್ ನಡೆಸಿದರು. ಭರವಸೆಯ ಆಲ್ರೌಂಡರ್
4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಲ್ಲ ಸಾಮರ್ಥ್ಯ ಇರುವ ಬ್ಯಾಟ್ಸ್ ಮನ್ ವಿಜಯ್ ಶಂಕರ್ ಉಪಯುಕ್ತ ಆಲ್ರೌಂಡರ್ ಕೂಡ ಹೌದು. ಪಾಕಿಸ್ಥಾನ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಹೊರನಡೆದಾಗ ಅವರ ಬೌಲಿಂಗ್ ಮುಂದುವರಿಸಿದ ವಿಜಯ್ ಶಂಕರ್ ಮೊದಲ ಎಸೆತದಲ್ಲೇ ಇಮಾಮ್ ಉಲ್ ಹಕ್ ವಿಕೆಟ್ ಹಾರಿಸಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ

Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.