![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 8, 2019, 2:40 PM IST
ಮ್ಯಾಂಚೆಸ್ಟರ್: ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ವಿಶ್ವಕಪ್ ನ ಮೊದಲ ಸೆಮಿ ಫೈನಲ್ ಪಂದ್ಯಾಟಕ್ಕೆ ಸಜ್ಜಾಗುತ್ತಿದ್ದರೆ, ಹವಾಮಾನ ಇಲಾಖೆ ಶಾಕಿಂಗ್ ನ್ಯೂಸ್ ನೀಡಿದೆ. ಮೊದಲ ಸೆಮಿ ಪಂದ್ಯದ ವೇಳೆ ಮಳೆ ಬರುವ ಸಂಭವವಿದೆ ಎಂದು ಇಲಾಖೆ ವರದಿ ಮಾಡಿದೆ.
ಜುಲೈ 9ರಂದು ಇಲ್ಲಿನ ಓಲ್ಡ್ ಟ್ರಾಫೋರ್ಡ್ ಅಂಗಳದಲ್ಲಿ ಮೊದಲ ಉಪಾಂತ್ಯ ಪಂದ್ಯ ನಡೆಯಲಿದೆ . ಆದರೆ ಸ್ವಲ್ಪ ಪ್ರಮಾಣದಲ್ಲಿ ಮಳೆ ಬರಬಹುದು. ಪಂದ್ಯ ತಡವಾಗಿ ಆರಂಭವಾಗಬಹುದು. ತಾಪಮಾನ ಗರಿಷ್ಟವೆಂದರೆ 20 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ವರದಿಯಾಗಿದೆ.
ಭಾರತ ಮತ್ತು ಕಿವೀಸ್ ನಡುವಿನ ಲೀಗ್ ಪಂದ್ಯ ಕೂಡಾ ಮಳೆಯಿಂದ ರದ್ದಾಗಿತ್ತು. ಆದರೆ ಉಪಾಂತ್ಯ ಪಂದ್ಯಕ್ಕೆ ಒಂದು ಹೆಚ್ಚುವರಿ ದಿನ ನಿಗದಿ ಪಡಿಸಲಾಗಿದೆ. ಒಂದು ವೇಳೆ ಮಂಗಳವಾರ ಮಳೆ ಬಂದು ಪಂದ್ಯ ನಡೆಯದೇ ಇದ್ದಲ್ಲಿ, ಬುಧವಾರ ಇದೇ ಮೈದಾನದಲ್ಲಿ ಉಭಯ ತಂಡಗಳು ಸೆಣಸಾಡಲಿವೆ.
ಒಂದು ವೇಳೆ ಬುಧವಾರ ಕೂಡಾ ಮಳೆ ಬಂದು ಪಂದ್ಯ ರದ್ದಾದರೆ ಅಂಕ ಪಟ್ಟಿಯಲ್ಲಿ ಕಿವೀಸ್ ಗಿಂತ ಮೇಲಿರುವ ಕಾರಣ ವಿರಾಟ್ ಪಡೆ ಫೈನಲ್ ಟಿಕೆಟ್ ಪಡೆಯಲಿದೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.