![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 4, 2023, 10:38 PM IST
ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಸೋಲು ಅನುಭವಿಸಿದ ಹಾಲಿ ಚಾಂಪಿಯನ್ ಇಂಗ್ಲೆಂಡ್ ಕೂಟದಿಂದ ಹೊರ ಬಿದ್ದಿದೆ.
ಇಂಗ್ಲೆಂಡ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆಸ್ಟ್ರೇಲಿಯ 49.3 ಓವರ್ ಗಳಲ್ಲಿ 286 ರನ್ ಗಳಿಗೆ ಆಲೌಟಾಯಿತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್ 48.1 ಓವರ್ ಗಳಲ್ಲಿ 253 ರನ್ ಗಳಿಗೆ ಆಲೌಟಾಗುವ ಮೂಲಕ ಆಡಿದ 7 ನೇ ಪಂದ್ಯದಲ್ಲಿ 6 ನೇ ಸೋಲು ಅನುಭವಿಸಿ ಹೀನಾಯ ಸ್ಥಿತಿಯಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಉಳಿದುಕೊಂಡಿದೆ.
ಅಮೋಘ ಗೆಲುವು ಸಾಧಿಸಿದ ಆಸ್ಟ್ರೇಲಿಯ ಆಡಿದ 7ನೇ ಪಂದ್ಯದಲ್ಲಿ5ನೇ ಗೆಲುವು ಸಾಧಿಸಿ ಹೊಸ ಹುಮ್ಮಸ್ಸಿನಿಂದ ಮುನ್ನುಗ್ಗುತ್ತಿದೆ. ಸೆಮಿ ಫೈನಲ್ ಏರುವುದು ಖಚಿತವಾಗಲು ಇನ್ನೂ ಕೆಲವು ಪಂದ್ಯಗಳ ಫಲಿತಾಂಶ ನಿರ್ಣಾಯಕವಾಗಲಿದೆ. ಆಸೀಸ್ ಮುಂದಿನ ಪಂದ್ಯಗಳಲ್ಲಿ ಅಫ್ಘಾನಿಸ್ಥಾನ ಮತ್ತು ಬಾಂಗ್ಲಾದೇಶ ತಂಡಗಳೊಂದಿಗೆ ಸೆಣಸಲಿದೆ.
ಇಂಗ್ಲೆಂಡ್ ಮುಂದಿನ ಪಂದ್ಯಗಳನ್ನು ಪಾಕಿಸ್ಥಾನ ಮತ್ತು ನೆದರ್ ಲ್ಯಾಂಡ್ಸ್ ವಿರುದ್ಧ ಆಡಲಿದೆ. ಪಾಕಿಸ್ಥಾನ ವನ್ನು ಸೋಲಿಸಿದರೆ ಸೆಮಿ ಫೈನಲ್ ಲೆಕ್ಕಾಚಾರ ಬದಲಾಗಬಹುದು. ನವೆಂಬರ್ 11 ರಂದು ಪಂದ್ಯ ನಡೆಯಲಿದೆ.
ಆಸೀಸ್ ಬ್ಯಾಟಿಂಗ್ ನಲ್ಲಿ ಸ್ಟೀವನ್ ಸ್ಮಿತ್ 44, ಅಮೋಘ ಆಟವಾಡಿದ ಲಬುಶೇನ್ 71 ರನ್, ಕ್ಯಾಮರೂನ್ ಗ್ರೀನ್ 47, ಸ್ಟೊಯಿನಿಸ್ 35, ಕೊನೆಯಲ್ಲಿ ಝಂಪಾ 29 ರನ್ ಕೊಡುಗೆ ಸಲ್ಲಿಸಿದರು.
ಆಸೀಸ್ ಪರ ಬೌಲಿಂಗ್ ನಲ್ಲಿ ಆಡಮ್ ಝಂಪಾ 3 ವಿಕೆಟ್ ಪಡೆದು ಮಿಂಚಿದರು. ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್ವುಡ್, ನಾಯಕ ಪ್ಯಾಟ್ ಕಮ್ಮಿನ್ಸ್ ತಲಾ 2 ವಿಕೆಟ್, ಮಾರ್ಕಸ್ ಸ್ಟೊಯಿನಿಸ್ 1 ವಿಕೆಟ್ ಪಡೆದರು.
ಇಂಗ್ಲೆಂಡ್ ಬ್ಯಾಟಿಂಗ್ ನಲ್ಲಿ ಡೇವಿಡ್ ಮಲಾನ್ 50, ಬೆನ್ ಸ್ಟೋಕ್ಸ್ 64, ಮೊಯಿನ್ ಅಲಿ 42, ಕ್ರಿಸ್ ವೋಕ್ಸ್ 32, ಕೊನೆಯಲ್ಲಿ ಡೇವಿಡ್ ವಿಲ್ಲಿ 15, ಆದಿಲ್ ರಶೀದ್ 20 ರನ್ ಗಳಿಸಿದರೂ ಗೆಲುವಿನ ಗುರಿ ಮುಟ್ಟಲು ಸಾಧ್ಯವಾಗಲಿಲ್ಲ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.