India vs Netherlands; ಕೊಹ್ಲಿಯ 50ನೇ ಶತಕದ ನಿರೀಕ್ಷೆಯಲ್ಲಿ…

 ಭಾರತದಿಂದ ಸತತ 9ನೇ ಗೆಲುವಿನ ಯೋಜನೆ   ಎರಡನೇ ತವರಲ್ಲಿ ಕೊಹ್ಲಿ ಮಿಂಚುವ ನಿರೀಕ್ಷೆ

Team Udayavani, Nov 12, 2023, 6:20 AM IST

1-asdsdasd

ಬೆಂಗಳೂರು: ಎಲ್ಲ ಎಂಟು ಪಂದ್ಯಗಳೊಂದಿಗೆ ಗೆಲುವಿನ ನಂಟು ಬೆಸೆದುಕೊಂಡಿರುವ ಆತಿಥೇಯ ಭಾರತ ರವಿವಾರದ ಕೊನೆಯ ವಿಶ್ವಕಪ್‌ ಲೀಗ್‌ ಪಂದ್ಯದಲ್ಲಿ ನೆದರ್ಲೆಂಡ್ಸ್‌ ವಿರುದ್ಧ ಕಣಕ್ಕಿಳಿಯಲಿದೆ. ಇದು 13ನೇ ವಿಶ್ವಕಪ್‌ ಪಂದ್ಯಾವಳಿಯ ಕೊನೆಯ ಲೀಗ್‌ ಮುಖಾಮುಖಿಯೂ ಹೌದು. ಇದಕ್ಕೆ ಸಾಕ್ಷಿಯಾಗಲಿರುವ ಅಂಗಳ ಉದ್ಯಾನನಗರಿಯ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’.

ಫ‌ಲಿತಾಂಶಕ್ಕೆ ಸಂಬಂಧಿಸಿದಂತೆ ಇಲ್ಲಿ ವಿಪರೀತ ನಿರೀಕ್ಷೆಗಳೇನಿಲ್ಲ. ಆದರೆ ಟೀಮ್‌ ಇಂಡಿಯಾ ಎಲ್ಲ 9 ಪಂದ್ಯಗಳನ್ನು ಗೆದ್ದು ಅಜೇಯ ಅಭಿ ಯಾನ ಕಾಯ್ದುಕೊಂಡು ಬರಬೇಕು ಎನ್ನುವುದು ಅಭಿಮಾನಿಗಳ ನಂಬಿಕೆ. ಸಾಮಾನ್ಯ ತಂಡವಾಗಿದ್ದರೂ ಒಂದೆ ರಡು ಅಚ್ಚರಿಯ ಫ‌ಲಿತಾಂಶವನ್ನು ದಾಖಲಿ ಸಿರುವ ನೆದರ್ಲೆಂಡ್ಸ್‌ ವಿರುದ್ಧ ಬಲಿಷ್ಠ ಭಾರತ ಮೇಲುಗೈ ಸಾಧಿಸದೇ ಇರಲು ಕಾರಣಗಳೇ ಇಲ್ಲ. ಆದರೂ ಎಷ್ಟೆಷ್ಟೋ ದೊಡ್ಡ ತಂಡಗಳನ್ನು ಬಡಿದುರುಳಿಸಿ ಇಲ್ಲಿಯ ತನಕ ಬಂದಿರುವ ರೋಹಿತ್‌ ಪಡೆ ಕೊನೆಯಲ್ಲಿ ಆಘಾತಕಾರಿ ಫ‌ಲಿತಾಂಶವನ್ನು ಕಾಣಬಾರದಲ್ಲ. ಹೀಗಾಗಿ ಈ ಪಂದ್ಯವನ್ನೂ ಹಿಂದಿನಂತೆ ಅತ್ಯಂತ ಗಂಭೀರವಾಗಿಯೇ ಆಡಿ ಭರ್ಜರಿ ಗೆಲುವನ್ನು ಸಾಧಿಸುವುದು ಟೀಮ್‌ ಇಂಡಿಯಾದ ಗುರಿ ಆಗಬೇಕು, ಮತ್ತು ಆಗಿರುತ್ತದೆ ಕೂಡ. “ಓವರ್‌ ಕಾನ್ಫಿಡೆನ್ಸ್‌’ಗೆ ಇಲ್ಲಿ ಜಾಗ ಇರಕೂಡದು.

ವಿಶ್ವಕಪ್‌ನಲ್ಲಿ ನೆದರ್ಲೆಂಡ್ಸ್‌ ವಿರುದ್ಧ ಆಡಿದ ಎರಡೂ ಪಂದ್ಯಗಳನ್ನು ಭಾರತ ಜಯಿಸಿದೆ. ಈ ಪಂದ್ಯ ನಡೆದದ್ದು 2003, 2011ರಷ್ಟು ಹಿಂದೆ. 2011ರ ತವರಿನ ಕೂಟದ ವೇಳೆ ಭಾರತ ಕೊನೆಯ ಸಲ ಡಚ್ಚರ ಪಡೆಯನ್ನು ಎದುರಿಸಿತ್ತು. ಈ ಪಂದ್ಯವನ್ನೂ ಗೆದ್ದರೆ ಮೊದಲ ಸಲ ವಿಶ್ವಕಪ್‌ ಲೀಗ್‌ನ ಎಲ್ಲ ಪಂದ್ಯಗಳನ್ನು ಜಯಿಸಿದ ಹಿರಿಮೆ ಭಾರತದ್ದಾಗಲಿದೆ. ಮುಂದೆ ಚಾಂಪಿಯನ್‌ ಆದದ್ದಿದ್ದರೆ ಅಜೇಯವಾಗಿ ವಿಶ್ವಕಪ್‌ ಎತ್ತಿದ ಮಹೋನ್ನತ ಸಾಧನೆಗೆ ಟೀಮ್‌ ಇಂಡಿಯಾ ಭಾಜನವಾಗಲಿದೆ.

ಸೂರ್ಯಕುಮಾರ್‌ ಫಾರ್ಮ್
ಹಾರ್ದಿಕ್‌ ಪಾಂಡ್ಯ ಅನುಪಸ್ಥಿತಿ ಯಿಂದಾಗಿ ಟೀಮ್‌ ಇಂಡಿಯಾದ ಸಮತೋಲನ ತಪ್ಪಿರುವುದಂತೂ ನಿಜ. ಆದರೆ ಇಲ್ಲಿಯ ತನಕ ಇದು ಅರಿವಿಗೆ ಬಂದಿಲ್ಲ. ಕಾರಣ, ಭಾರತ ಗೆಲ್ಲುತ್ತ ಬಂದಿದೆ. ಪಾಂಡ್ಯ ಸ್ಥಾನದಲ್ಲಿ ಆಡಲಿಳಿದಿರುವ ಸೂರ್ಯಕುಮಾರ್‌ ಯಾದವ್‌ ಅವರ ಫಾರ್ಮ್ ಬಗ್ಗೆ ಆತಂಕ ಇದೆ. 4 ಪಂದ್ಯಗಳಲ್ಲಿ ಅವರು ಗಳಿಸಿದ್ದು 85 ರನ್‌ ಮಾತ್ರ. ಸರಾಸರಿ 21.25. ಸೂರ್ಯ ಈ ಕೂಟದಲ್ಲಿ ಅರ್ಧ ಶತಕವನ್ನೂ ಹೊಡೆಯದ ಭಾರತದ ಏಕೈಕ ಬ್ಯಾಟ್ಸ್‌ಮನ್‌. ನೆದರ್ಲೆಂಡ್ಸ್‌ ವಿರುದ್ಧವಾದರೂ ದೊಡ್ಡ ಸ್ಕೋರ್‌ ದಾಖಲಿಸಿ ನಾಕೌಟ್‌ ಹಣಾಹಣಿಗೆ ಸಜ್ಜಾಗಬೇಕಿದೆ.

ಓಪನಿಂಗ್‌, ಬೌಲಿಂಗ್‌ ಯಶಸ್ಸು
ಆರಂಭಿಕರಾದ ರೋಹಿತ್‌ ಶರ್ಮ- ಶುಭಮನ್‌ ಗಿಲ್‌ ಉತ್ತಮ ಫಾರ್ಮ್ ನಲ್ಲಿದ್ದಾರೆ. 3 ಪಂದ್ಯಗಳಲ್ಲಿ 50 ಪ್ಲಸ್‌ ರನ್‌ ಜತೆಯಾಟ ನಡೆಸಿದ್ದಾರೆ. ಬಾಂಗ್ಲಾದೇಶ ವಿರುದ್ಧ 12.4 ಓವರ್‌ಗಳಲ್ಲಿ 88 ರನ್‌, ನ್ಯೂಜಿಲ್ಯಾಂಡ್‌ ಎದುರು 11.1 ಓವರ್‌ಗಳಿಂದ 71 ರನ್‌ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ 5.5 ಓವರ್‌ಗಳಲ್ಲಿ 62 ರನ್‌ ಸಿಡಿಸಿದ್ದಾರೆ. ಆದರೆ ಉಳಿದ 5 ಪಂದ್ಯಗಳಲ್ಲಿ ಗಳಿಸಿದ್ದು 5, 32, 23, 26 ಮತ್ತು 4 ರನ್‌ ಮಾತ್ರ.

ಭಾರತದ ಈವರೆಗಿನ ಯಶಸ್ಸಿನಲ್ಲಿ ಬೌಲಿಂಗ್‌ ಪಡೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಬುಮ್ರಾ, ಶಮಿ, ಸಿರಾಜ್‌, ಕುಲದೀಪ್‌, ಜಡೇಜ ಅತ್ಯಂತ ಘಾತಕವಾಗಿ ಪರಿಣಮಿಸುತ್ತಿದ್ದಾರೆ. ಈ ಐವರ ಕಾಂಬಿನೇಶನ್‌ ಕೂಟದಲ್ಲೇ ಅತ್ಯಂತ ಶಕ್ತಿಶಾಲಿ ಎನಿಸಿದೆ.

ಡಚ್‌ ಸಂತೃಪ್ತಭಾವ
ಅರ್ಹತಾ ಸುತ್ತಿನ ಮೂಲಕ ಆಗಮಿಸಿದ ನೆದರ್ಲೆಂಡ್ಸ್‌ ಪಾಲಿಗೆ ಇದೊಂದು ಸಾರ್ಥಕ ಪಂದ್ಯಾ ವಳಿ. ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾ ದೇಶವನ್ನು ಮಣಿಸಿದ ಹೆಗ್ಗಳಿಕೆ ಡಚ್ಚರ ಪಾಲಿಗಿದೆ. ಕೊನೆಯಲ್ಲಿ ಭಾರತವನ್ನೂ ಬೆದರಿಸೀತೇ?!
ಇದು ಪ್ರಸಕ್ತ ವಿಶ್ವಕಪ್‌ನಲ್ಲಿ ಬೆಂಗಳೂರಿ ನಲ್ಲಿ ನಡೆಯುವ ಭಾರತದ ಏಕೈಕ ಪಂದ್ಯವೆಂಬುದನ್ನೂ ಮರೆಯು ವಂತಿಲ್ಲ. ಹಾಗೆಯೇ ಭಾರತವಿನ್ನು ಈ ಕೂಟದಲ್ಲಿ ಒತ್ತಡವಿಲ್ಲದೆ ಆಡಬಹು ದಾದ ಪಂದ್ಯವೆಂದರೆ ಇದೊಂದೇ. ಮುಂದಿನದು ಸೆಮಿಫೈನಲ್‌, ಮುಂದು ವರಿದರೆ ಫೈನಲ್‌. ಇಲ್ಲಿ ಹುರಿಗೊಳ್ಳಲು ನೆದರ್ಲೆಂಡ್ಸ್‌ ಎದುರಿನ ಮುಖಾಮುಖೀ ಭಾರತದ ಪಾಲಿಗೊಂದು “ಪ್ರ್ಯಾಕ್ಟೀಸ್‌ ಮ್ಯಾಚ್‌’.

ಗೆಲುವಿಗೂ ಮಿಗಿಲಾದ ಕುತೂಹಲ
ಇಲ್ಲಿ ಗೆಲುವಿಗೂ ಮಿಗಿಲಾದ ನಿರೀಕ್ಷೆ ಹಾಗೂ ಕುತೂಹಲವೆಂದರೆ, ವಿರಾಟ್‌ ಕೊಹ್ಲಿ ವಿಶ್ವದಾಖಲೆಯ 50ನೇ ಶತಕವನ್ನು ಬಾರಿಸುವರೇ ಎಂಬುದು. ಹೇಳಿ ಕೇಳಿ ಬೆಂಗಳೂರು ಅವರ ಎರಡನೇ ತವರು. ಆರ್‌ಸಿಬಿ ಕಿಂಗ್‌ ಎನಿಸಿರುವ ಕೊಹ್ಲಿಗೆ 50ನೇ ಶತಕದ ಶಿಖರ ತಲುಪಲು ಇದಕ್ಕಿಂತ ಮಿಗಿಲಾದ ಅಂಗಳ ಬೇರೊಂದಿಲ್ಲ. ಭಾರತ ಮೊದಲು ಬ್ಯಾಟಿಂಗ್‌ ನಡೆಸಿದರೆ ರವಿವಾರವೇ ಇತಿಹಾಸ ನಿರ್ಮಾಣವಾದೀತು!

ಪ್ರಚಂಡ ಫಾರ್ಮ್ನಲ್ಲಿರುವ ವಿರಾಟ್‌ ಕೊಹ್ಲಿ ಈಗಾಗಲೇ 543 ರನ್‌ ಬಾರಿಸಿದ್ದಾರೆ. ಭಾರತದ ರನ್‌ ಸಾಧಕರ ಯಾದಿಯಲ್ಲಿ ಇವರಿಗೆ ಅಗ್ರಸ್ಥಾನದ ಗೌರವ. ಏಕದಿನ ವಿಶ್ವಕಪ್‌ ಪಂದ್ಯಾವಳಿಯೊಂದರಲ್ಲಿ ಕೊಹ್ಲಿ 500 ರನ್‌ ಗಡಿ ದಾಟಿದ ಮೊದಲ ನಿದರ್ಶನ ಇದಾಗಿದೆ. 2011ರಿಂದ ವಿಶ್ವಕಪ್‌ ಆಡಲಾರಂಭಿಸಿದ ಕೊಹ್ಲಿ ಕ್ರಮವಾಗಿ 282, 305, 443 ರನ್‌ ಬಾರಿಸಿದ್ದಾರೆ. ಈ 3 ಕೂಟಗಳಲ್ಲಿ ತೆಂಡುಲ್ಕರ್‌, ಶಿಖರ್‌ ಧವನ್‌ ಮತ್ತು ರೋಹಿತ್‌ ಶರ್ಮ ಭಾರತದ ಟಾಪ್‌ ಸ್ಕೋರರ್‌ ಆಗಿದ್ದರು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.